Homeಅಂತರಾಷ್ಟ್ರೀಯಸುದ್ದಿಗಳಿಗೆ ಹಣ ಪಾವತಿಸಲಿರುವ ಗೂಗಲ್, ಫೇಸ್‌ಬುಕ್: ಮಹತ್ವದ ಶಾಸನ ಅಂಗೀಕರಿಸಿದ ಆಸ್ಟ್ರೇಲಿಯಾ

ಸುದ್ದಿಗಳಿಗೆ ಹಣ ಪಾವತಿಸಲಿರುವ ಗೂಗಲ್, ಫೇಸ್‌ಬುಕ್: ಮಹತ್ವದ ಶಾಸನ ಅಂಗೀಕರಿಸಿದ ಆಸ್ಟ್ರೇಲಿಯಾ

- Advertisement -
- Advertisement -

ಆಸ್ಟ್ರೇಲಿಯಾದ ಸಂಸತ್ತು ಗುರುವಾರ ಮಹತ್ವದ ಶಾಸನವನ್ನು ಅಂಗೀಕರಿಸಿದೆ. ಈ ಶಾಸನದಂತೆ ಜಾಗತಿಕ ಡಿಜಿಟಲ್ ಕಂಪೆನಿಗಳು ಸ್ಥಳೀಯ ಸುದ್ದಿ ಉದ್ಯಮಗಳಿಗೆ ಹಣ ಪಾವತಿಸಬೇಕಾಗುತ್ತದೆ. ಆಸ್ಟ್ರೇಲಿಯಾ ಸಂಸತ್ತು ಜಾರಿಗೆ ತಂದಿರುವ ಈ ಶಾಸನವನ್ನು ವಿಶ್ವದಾದ್ಯಂತ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

ಸ್ಥಳೀಯ ಮಾಧ್ಯಮ ಕಂಪನಿಗಳಿಗೆ ಹಣ ಪಾವತಿಸಲು ಫೇಸ್‌ಬುಕ್ ಮತ್ತು ಗೂಗಲ್ ತೀವ್ರವಾಗಿ ವಿರೋಧಿಸಿದ್ದವು, ಆದರೆ ಆಸ್ಟ್ರೇಲಿಯಾ ಸರ್ಕಾರ ಪಟ್ಟು ಬಿಡದೆ ಕಾನೂನು ಜಾರಿ ಮಾಡಿದೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಆಸ್ಟ್ರೇಲಿಯ ಜಾರಿಗೆ ತಂದಿರುವ ಈ ಹೊಸ ಕಾನೂನು ಗೂಗಲ್ ಮತ್ತು ಫೇಸ್‌ಬುಕ್‌ಗೆ‌ ಸ್ಥಳೀಯ ಸುದ್ದಿ ಉದ್ಯಮಕ್ಕೆ ಹತ್ತಾರು ಮಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಲು ದಾರಿ ಮಾಡಿಕೊಡುತ್ತದೆ. ಗೂಗಲ್ ಈಗ ತನ್ನ ನ್ಯೂಸ್ ಫೀಡ್‌‌ನಲ್ಲಿ ಕಾಣಿಸಿಕೊಳ್ಳುವ ಸುದ್ದಿಗಳಿಗೆ ಪಾವತಿ ಮಾಡಲಿದೆ. ಫೇಸ್‌ಬುಕ್ ಕೂಡಾ ತನ್ನ ನ್ಯೂಸ್ ಫೀಡ್‌‌ನಲ್ಲಿ ಕಾಣಿಸಿಕೊಳ್ಳುವ ಸುದ್ದಿಗಳಿಗೆ ಪಾವತಿ ಮಾಡುತ್ತದೆ ಎಂಬ ನಿರೀಕ್ಷೆಯಿದೆ.

ತಮ್ಮ ಸುದ್ದಿಗಳನ್ನು ಉಚಿತವಾಗಿ ಬಳಸಿಕೊಂಡು ಆನ್‌ಲೈನ್ ಜಾಹೀರಾತಿನಲ್ಲಿ ಪ್ರಾಬಲ್ಯ ಹೊಂದಿರುವ ಕಂಪನಿಗಳು ಹಣಮಾಡುತ್ತಿದೆ ಎಂದು ಸುದ್ದಿ ಮಾಧ್ಯಮಗಳ ನಿಯಂತ್ರಕರು ಆರೋಪಿಸಿದ್ದರು. ಈ ಕಾನೂನಿನಿಂದಾಗಿ ತಮ್ಮ ವ್ಯವಹಾರದ ಮಾದರಿಗಳಿಗೆ ತೊಂದರೆ ಉಂಟಾಗುತ್ತದೆ ಎಂದು ದೊಡ್ಡ ತಂತ್ರಜ್ಞಾನ ಸಂಸ್ಥೆಗಳು ಕಾನೂನನ್ನು ಮೊದಲಿನಿಂದಲೂ ತೀವ್ರವಾಗಿ ವಿರೋಧಿಸಿದ್ದವು.

ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...