Homeಮುಖಪುಟಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

ಪ್ಲೇಸ್ಟೋರ್‌ನಿಂದ 2 ಸಾವಿರ ಸಾಲ ನೀಡುವ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದ ಗೂಗಲ್‌!

ಮೊಬೈಲ್‌‌ ಆಪ್‌ ಸ್ಟೋರ್‌ಗಳಲ್ಲಿ ತ್ವರಿತ ಸಾಲದ ಅಪ್ಲಿಕೇಶನ್‌ಗಳ ಕಿರುಕುಳದ ವರದಿಗಳು ಹೊರ ಬರುತ್ತಿದ್ದಂತೆ ಗೂಗಲ್‌‌ ಮಧ್ಯಪ್ರವೇಶಿಸಿ ಕ್ರಮ ಕೈಗೊಂಡಿದೆ

- Advertisement -
- Advertisement -

2022 ರ ಜನವರಿ ತಿಂಗಳಿನಿಂದ ಕಂಪನಿಯ ನೀತಿಗಳಿಗೆ ಬದ್ಧವಾಗಿಲ್ಲದ ಕಾರಣ ‘ಗೂಗಲ್‌ ಅಂಡ್ರಾಯಿಡ್‌ ಪ್ಲೇ ಸ್ಟೋರ್‌‌’ನಲ್ಲಿದ್ದ 2 ಸಾವಿರಕ್ಕೂ ಹೆಚ್ಚು ಸಾಲ-ಸಂಬಂಧಿತ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ ಎಂದು ವರದಿಯಾಗಿದೆ.

“ನಿಷೇಧಿಸಲಾಗಿರುವ 2 ಸಾವಿರ ಅಪ್ಲಿಕೇಶನ್‌ಗಳು ಭಾರತದ ಪ್ಲೇ ಸ್ಟೋರ್‌‌ನಲ್ಲಿ ಇದ್ದವುಗಳಾಗಿವೆ. ಅಪ್ಲಿಕೇಶನ್ ನಮ್ಮ ಗುರಿ ಅಥವಾ ನಮ್ಮ ನೀತಿಯನ್ನು ಪೂರೈಸದಿದ್ದರೆ ಅದರ ಮೇಲೆ ಕಾರ್ಯನಿರ್ವಹಿಸಲಿದ್ದೇವೆ” ಎಂದು ಗೂಗಲ್ ಏಷ್ಯಾ-ಪೆಸಿಫಿಕ್‌ನ ಹಿರಿಯ ನಿರ್ದೇಶಕ ಹಾಗೂ ಟ್ರಸ್ಟ್ ಮತ್ತು ಸುರಕ್ಷತೆಯ ಮುಖ್ಯಸ್ಥ ಸೈಕತ್ ಮಿತ್ರಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ವ್ಯವಹಾರವೂ ಸ್ವತಂತ್ರವಾಗಿ ಮಾಹಿತಿಯನ್ನು ಸಂಗ್ರಹಿಸಿ ಅದನ್ನು ಮೌಲ್ಯಮಾಪನ ಮಾಡುತ್ತವೆ. ನಂತರ ಆಫ್‌ಲೈನ್, ಹೊರಗಿನ ಮೂಲಗಳಿಂದ ಕೂಡಾ ಸಂಗ್ರಹಿಸಲಾಗುತ್ತದೆ” ಎಂದು ಮಿತ್ರ ಹೇಳಿದ್ದಾರೆ.

ಇದನ್ನೂ ಓದಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ತ್ವರಿತ ಸಾಲ ಸೇವೆಗಳಿಂದ ಮಾಡಿದ ಫೋನ್ ಕರೆಗಳಿಂದ ಗ್ರಾಹಕರಿಗೆ ಕಿರುಕುಳ ನೀಡುವ ಘಟನೆಗಳ ಬಗ್ಗೆ ದೇಶದಾದ್ಯಂತ ಹಲವು ಪ್ರಕರಣಗಳು ಬೆಳಕಿಗೆ ಬಂದ ನಂತರ ಗೂಗಲ್ ಪ್ಲೇ ಸ್ಟೋರ್‌‌ ಕ್ರಮವನ್ನು ಕೈಗೊಂಡಿರಬಹುದು ಎಂದು ವರದಿಯಾಗಿದೆ.

ಮೊಬೈಲ್ ಆಪ್ ಸ್ಟೋರ್‌ಗಳಲ್ಲಿ ತ್ವರಿತ ಸಾಲದ ಅಪ್ಲಿಕೇಶನ್‌ಗಳ ಕಿರುಕುಳದ ವರದಿಗಳು ಪ್ರಸಾರವಾಗಲು ಪ್ರಾರಂಭವಾದ ನಂತರ ಗೂಗಲ್‌‌ ಮಧ್ಯಪ್ರವೇಶಿಸಿದೆ. ಈ ಅಪ್ಲಿಕೇಶನ್‌ಗಳು ಸಾಮಾನ್ಯವಾಗಿ 2,000 ರೂ.ನಿಂದ ಪ್ರಾರಂಭವಾಗಿ 10 ಸಾವಿರ ರೂ.ಗಳ ನಡುವೆ ಸಾಲವನ್ನು ಒದಗಿಸುವ ಮೂಲಕ ಕಡಿಮೆ ಆದಾಯದ ಜನರನ್ನ ಗುರಿಯಾಗಿಸುತ್ತದೆ.

ಇದನ್ನೂ ಓದಿ: ಟಿಕ್‌ಟಾಕ್‌ ಅಪ್ಲಿಕೇಷನ್‌ ಮೇಲಿನ ನಿಷೇಧ ಮುಂದುವರಿಕೆ; ಶಾಶ್ವತ ನಿಷೇಧಕ್ಕೆ ಚಿಂತನೆ?

ಈ ಅಪ್ಲಿಕೇಶನ್‌ಗಳು ವಾರ್ಷಿಕವಾಗಿ 50% ವರೆಗೆ ಬಡ್ಡಿದರವನ್ನು ವಿಧಿಸುತ್ತಾರೆ. “ಭಾರತದ 80 ಆಪ್ ಸ್ಟೋರ್‌ಗಳಲ್ಲಿ (ಕಳೆದ ವರ್ಷದವರೆಗೆ) ಈ ರೀತಿಯ 1,100 ಕ್ಕೂ ಹೆಚ್ಚು ಅಪ್ಲಿಕೇಶನ್‌ಗಳು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದ್ದು, ಈ 600 ಆ್ಯಪ್‌ಗಳು ಕಾನೂನುಬಾಹಿರವಾಗಿದೆ” ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...