Homeಎಕಾನಮಿ12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

2022 ರಲ್ಲಿ ಟೆಕ್ ವಲಯದಲ್ಲಿ ಹೆಚ್ಚಿನ ಉದ್ಯೋಗ ಕಡಿತವಾಗಿದೆ. ಈ ವರ್ಷದಲ್ಲಿ 97,171 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದಾರೆ.

- Advertisement -
- Advertisement -

ಜಾಗತಿಕ ಆರ್ಥಿಕ ಕುಸಿತ ಮತ್ತು ಹಣದುಬ್ಬರದ ಕಾರಣ ನೀಡಿ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ 12,000 ಉದ್ಯೋಗಗಳನ್ನು ಕಡಿತಗೊಳಿಸಿದೆ. ಅದರ ಜಗತ್ತಿನ ಒಟ್ಟಾರೆ ಉದ್ಯೋಗ ಪ್ರಮಾಣದಲ್ಲಿ ಶೇ.6 ರಷ್ಟು ಜನರನ್ನು ಕೆಲಸದಿಂದ ತೆಗೆಯುವುದಾಗಿ ಗೂಗಲ್ ಸಿಇಓ ಸುಂದರ್ ಪಿಚ್ಚೈ ತಿಳಿಸಿದ್ದಾರೆ.

ಇತ್ತೀಚೆಗೆ ಮೆಟಾ, ಟ್ವಿಟರ್ ಮತ್ತು ಅಮೆಜಾನ್ ಕಂಪನಿಗಳು ಉದ್ಯೋಗ ಕಡಿತ ಪ್ರಕಟಿಸಿದ್ದವು. ಅದೇ ಹಾದಿಯಲ್ಲಿ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ ಕೂಡ ಕಾಲಿಟ್ಟಿದೆ.

ನಮ್ಮ ಗಮನ, ವೆಚ್ಚದ ಸೂಕ್ತ ಬಳಕೆ ಆಧಾರಿತವಾಗಿ ಚುರುಕುಗೊಳಿಸಲು ಮತ್ತು ನಮ್ಮ ಪ್ರತಿಭೆ ಮತ್ತು ಬಂಡವಾಳವನ್ನು ನಮ್ಮ ಅತ್ಯುನ್ನತ ಆದ್ಯತೆಗಳಿಗೆ ನಿರ್ದೇಶಿಸಲು ಇದು ಸೂಕ್ತ ಸಮಯವಾಗಿದೆ ಎಂದು ಪಿಚೈ ಸಿಬ್ಬಂದಿಗಳಿಗೆ ಕಳಿಸಿದ ಇಮೇಲ್‌ನಲ್ಲಿ ಬರೆದಿದ್ದಾರೆ.

ಇತ್ತೀಚಿನ ಸ್ಪರ್ಧೆಗಳಲ್ಲಿ ಭಾರೀ ಸಂಚಲನ ಉಂಟು ಮಾಡಿರುವ ಪ್ರಮುಖ ಹೂಡಿಕೆ ಕ್ಷೇತ್ರವಾದ ಕೃತಕ ಬುದ್ಧಿಮತ್ತೆಯಲ್ಲಿ ಕಂಪನಿಗೆ ಬಹುದೊಡ್ಡ ಅವಕಾಶವಿದೆ ಎಂದು ಅವರು ಹೇಳಿದ್ದಾರೆ.

ಆನ್‌ಲೈನ್ ಮಾರುಕಟ್ಟೆಯ ದೈತ್ಯ ಸಂಸ್ಥೆ ಅಮೆಜಾನ್ ಕೂಡ ಅನಿಶ್ಚಿತ ಆರ್ಥಿಕತೆಯ ಕಾರಣ ನೀಡಿ ಜನವರಿ 18 ರಂದು ಮತ್ತೆ 18,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದಿದೆ. 2022ರ ನವೆಂಬರ್ ತಿಂಗಳಿನಲ್ಲಿ 10,000 ಉದ್ಯೋಗಿಗಳನ್ನು ಅಮೆಜಾನ್ ಕಂಪನಿಯು ಮನೆಗೆ ಕಳಿಸಿತ್ತು.

ಅಮೆಜಾನ್‌ ಕಂಪನಿಗೆ ಆರ್ಥಿಕ ಹಿಂಜರಿತದ ಹೊಡೆತ ಬಿದ್ದಿದ್ದು, ಅದು ಈಗಲೂ ಮುಂದುವರೆಯುತ್ತಿದೆ. ಮುಂದಿನ ಅನಿಶ್ಚಿತ ಆರ್ಥಿಕತೆಯ ದೃ‍ಷ್ಟಿಯಿಂದ ಈ ಕ್ರಮಗಳು ಅನಿವಾರ್ಯವಾಗಿದೆ ಎಂದು ಅಮೆಜಾನ್ ಹೇಳಿಕೊಂಡಿದೆ.

ಮಾನವ ಸಂಪನ್ಮೂಲ ಸಲಹಾ ಸಂಸ್ಥೆ ಚಾಲೆಂಜರ್, ಗ್ರೇ & ಕ್ರಿಸ್‌ಮಸ್ ಇಂಕ್ ಪ್ರಕಾರ, 2022 ರಲ್ಲಿ ಟೆಕ್ ವಲಯದಲ್ಲಿ ಹೆಚ್ಚಿನ ಉದ್ಯೋಗ ಕಡಿತವಾಗಿದೆ. ಈ ವರ್ಷದಲ್ಲಿ 97,171 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದು ಹಿಂದಿನ ವರ್ಷಕ್ಕೆ ಹೋಲಿಸಿದರೆ 649% ಹೆಚ್ಚಾಗಿದೆ ಎನ್ನಲಾಗಿದೆ.

ಇದನ್ನೂ ಓದಿ; ಅನಿಶ್ಚಿತ ಆರ್ಥಿಕತೆ: 18,000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆಜಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...