Homeಎಕಾನಮಿ12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

2022 ರಲ್ಲಿ ಟೆಕ್ ವಲಯದಲ್ಲಿ ಹೆಚ್ಚಿನ ಉದ್ಯೋಗ ಕಡಿತವಾಗಿದೆ. ಈ ವರ್ಷದಲ್ಲಿ 97,171 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದಾರೆ.

- Advertisement -
- Advertisement -

ಜಾಗತಿಕ ಆರ್ಥಿಕ ಕುಸಿತ ಮತ್ತು ಹಣದುಬ್ಬರದ ಕಾರಣ ನೀಡಿ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ 12,000 ಉದ್ಯೋಗಗಳನ್ನು ಕಡಿತಗೊಳಿಸಿದೆ. ಅದರ ಜಗತ್ತಿನ ಒಟ್ಟಾರೆ ಉದ್ಯೋಗ ಪ್ರಮಾಣದಲ್ಲಿ ಶೇ.6 ರಷ್ಟು ಜನರನ್ನು ಕೆಲಸದಿಂದ ತೆಗೆಯುವುದಾಗಿ ಗೂಗಲ್ ಸಿಇಓ ಸುಂದರ್ ಪಿಚ್ಚೈ ತಿಳಿಸಿದ್ದಾರೆ.

ಇತ್ತೀಚೆಗೆ ಮೆಟಾ, ಟ್ವಿಟರ್ ಮತ್ತು ಅಮೆಜಾನ್ ಕಂಪನಿಗಳು ಉದ್ಯೋಗ ಕಡಿತ ಪ್ರಕಟಿಸಿದ್ದವು. ಅದೇ ಹಾದಿಯಲ್ಲಿ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ ಕೂಡ ಕಾಲಿಟ್ಟಿದೆ.

ನಮ್ಮ ಗಮನ, ವೆಚ್ಚದ ಸೂಕ್ತ ಬಳಕೆ ಆಧಾರಿತವಾಗಿ ಚುರುಕುಗೊಳಿಸಲು ಮತ್ತು ನಮ್ಮ ಪ್ರತಿಭೆ ಮತ್ತು ಬಂಡವಾಳವನ್ನು ನಮ್ಮ ಅತ್ಯುನ್ನತ ಆದ್ಯತೆಗಳಿಗೆ ನಿರ್ದೇಶಿಸಲು ಇದು ಸೂಕ್ತ ಸಮಯವಾಗಿದೆ ಎಂದು ಪಿಚೈ ಸಿಬ್ಬಂದಿಗಳಿಗೆ ಕಳಿಸಿದ ಇಮೇಲ್‌ನಲ್ಲಿ ಬರೆದಿದ್ದಾರೆ.

ಇತ್ತೀಚಿನ ಸ್ಪರ್ಧೆಗಳಲ್ಲಿ ಭಾರೀ ಸಂಚಲನ ಉಂಟು ಮಾಡಿರುವ ಪ್ರಮುಖ ಹೂಡಿಕೆ ಕ್ಷೇತ್ರವಾದ ಕೃತಕ ಬುದ್ಧಿಮತ್ತೆಯಲ್ಲಿ ಕಂಪನಿಗೆ ಬಹುದೊಡ್ಡ ಅವಕಾಶವಿದೆ ಎಂದು ಅವರು ಹೇಳಿದ್ದಾರೆ.

ಆನ್‌ಲೈನ್ ಮಾರುಕಟ್ಟೆಯ ದೈತ್ಯ ಸಂಸ್ಥೆ ಅಮೆಜಾನ್ ಕೂಡ ಅನಿಶ್ಚಿತ ಆರ್ಥಿಕತೆಯ ಕಾರಣ ನೀಡಿ ಜನವರಿ 18 ರಂದು ಮತ್ತೆ 18,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದಿದೆ. 2022ರ ನವೆಂಬರ್ ತಿಂಗಳಿನಲ್ಲಿ 10,000 ಉದ್ಯೋಗಿಗಳನ್ನು ಅಮೆಜಾನ್ ಕಂಪನಿಯು ಮನೆಗೆ ಕಳಿಸಿತ್ತು.

ಅಮೆಜಾನ್‌ ಕಂಪನಿಗೆ ಆರ್ಥಿಕ ಹಿಂಜರಿತದ ಹೊಡೆತ ಬಿದ್ದಿದ್ದು, ಅದು ಈಗಲೂ ಮುಂದುವರೆಯುತ್ತಿದೆ. ಮುಂದಿನ ಅನಿಶ್ಚಿತ ಆರ್ಥಿಕತೆಯ ದೃ‍ಷ್ಟಿಯಿಂದ ಈ ಕ್ರಮಗಳು ಅನಿವಾರ್ಯವಾಗಿದೆ ಎಂದು ಅಮೆಜಾನ್ ಹೇಳಿಕೊಂಡಿದೆ.

ಮಾನವ ಸಂಪನ್ಮೂಲ ಸಲಹಾ ಸಂಸ್ಥೆ ಚಾಲೆಂಜರ್, ಗ್ರೇ & ಕ್ರಿಸ್‌ಮಸ್ ಇಂಕ್ ಪ್ರಕಾರ, 2022 ರಲ್ಲಿ ಟೆಕ್ ವಲಯದಲ್ಲಿ ಹೆಚ್ಚಿನ ಉದ್ಯೋಗ ಕಡಿತವಾಗಿದೆ. ಈ ವರ್ಷದಲ್ಲಿ 97,171 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದು ಹಿಂದಿನ ವರ್ಷಕ್ಕೆ ಹೋಲಿಸಿದರೆ 649% ಹೆಚ್ಚಾಗಿದೆ ಎನ್ನಲಾಗಿದೆ.

ಇದನ್ನೂ ಓದಿ; ಅನಿಶ್ಚಿತ ಆರ್ಥಿಕತೆ: 18,000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆಜಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...