Homeಎಕಾನಮಿ12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

2022 ರಲ್ಲಿ ಟೆಕ್ ವಲಯದಲ್ಲಿ ಹೆಚ್ಚಿನ ಉದ್ಯೋಗ ಕಡಿತವಾಗಿದೆ. ಈ ವರ್ಷದಲ್ಲಿ 97,171 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದಾರೆ.

- Advertisement -
- Advertisement -

ಜಾಗತಿಕ ಆರ್ಥಿಕ ಕುಸಿತ ಮತ್ತು ಹಣದುಬ್ಬರದ ಕಾರಣ ನೀಡಿ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ 12,000 ಉದ್ಯೋಗಗಳನ್ನು ಕಡಿತಗೊಳಿಸಿದೆ. ಅದರ ಜಗತ್ತಿನ ಒಟ್ಟಾರೆ ಉದ್ಯೋಗ ಪ್ರಮಾಣದಲ್ಲಿ ಶೇ.6 ರಷ್ಟು ಜನರನ್ನು ಕೆಲಸದಿಂದ ತೆಗೆಯುವುದಾಗಿ ಗೂಗಲ್ ಸಿಇಓ ಸುಂದರ್ ಪಿಚ್ಚೈ ತಿಳಿಸಿದ್ದಾರೆ.

ಇತ್ತೀಚೆಗೆ ಮೆಟಾ, ಟ್ವಿಟರ್ ಮತ್ತು ಅಮೆಜಾನ್ ಕಂಪನಿಗಳು ಉದ್ಯೋಗ ಕಡಿತ ಪ್ರಕಟಿಸಿದ್ದವು. ಅದೇ ಹಾದಿಯಲ್ಲಿ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ ಕೂಡ ಕಾಲಿಟ್ಟಿದೆ.

ನಮ್ಮ ಗಮನ, ವೆಚ್ಚದ ಸೂಕ್ತ ಬಳಕೆ ಆಧಾರಿತವಾಗಿ ಚುರುಕುಗೊಳಿಸಲು ಮತ್ತು ನಮ್ಮ ಪ್ರತಿಭೆ ಮತ್ತು ಬಂಡವಾಳವನ್ನು ನಮ್ಮ ಅತ್ಯುನ್ನತ ಆದ್ಯತೆಗಳಿಗೆ ನಿರ್ದೇಶಿಸಲು ಇದು ಸೂಕ್ತ ಸಮಯವಾಗಿದೆ ಎಂದು ಪಿಚೈ ಸಿಬ್ಬಂದಿಗಳಿಗೆ ಕಳಿಸಿದ ಇಮೇಲ್‌ನಲ್ಲಿ ಬರೆದಿದ್ದಾರೆ.

ಇತ್ತೀಚಿನ ಸ್ಪರ್ಧೆಗಳಲ್ಲಿ ಭಾರೀ ಸಂಚಲನ ಉಂಟು ಮಾಡಿರುವ ಪ್ರಮುಖ ಹೂಡಿಕೆ ಕ್ಷೇತ್ರವಾದ ಕೃತಕ ಬುದ್ಧಿಮತ್ತೆಯಲ್ಲಿ ಕಂಪನಿಗೆ ಬಹುದೊಡ್ಡ ಅವಕಾಶವಿದೆ ಎಂದು ಅವರು ಹೇಳಿದ್ದಾರೆ.

ಆನ್‌ಲೈನ್ ಮಾರುಕಟ್ಟೆಯ ದೈತ್ಯ ಸಂಸ್ಥೆ ಅಮೆಜಾನ್ ಕೂಡ ಅನಿಶ್ಚಿತ ಆರ್ಥಿಕತೆಯ ಕಾರಣ ನೀಡಿ ಜನವರಿ 18 ರಂದು ಮತ್ತೆ 18,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದಿದೆ. 2022ರ ನವೆಂಬರ್ ತಿಂಗಳಿನಲ್ಲಿ 10,000 ಉದ್ಯೋಗಿಗಳನ್ನು ಅಮೆಜಾನ್ ಕಂಪನಿಯು ಮನೆಗೆ ಕಳಿಸಿತ್ತು.

ಅಮೆಜಾನ್‌ ಕಂಪನಿಗೆ ಆರ್ಥಿಕ ಹಿಂಜರಿತದ ಹೊಡೆತ ಬಿದ್ದಿದ್ದು, ಅದು ಈಗಲೂ ಮುಂದುವರೆಯುತ್ತಿದೆ. ಮುಂದಿನ ಅನಿಶ್ಚಿತ ಆರ್ಥಿಕತೆಯ ದೃ‍ಷ್ಟಿಯಿಂದ ಈ ಕ್ರಮಗಳು ಅನಿವಾರ್ಯವಾಗಿದೆ ಎಂದು ಅಮೆಜಾನ್ ಹೇಳಿಕೊಂಡಿದೆ.

ಮಾನವ ಸಂಪನ್ಮೂಲ ಸಲಹಾ ಸಂಸ್ಥೆ ಚಾಲೆಂಜರ್, ಗ್ರೇ & ಕ್ರಿಸ್‌ಮಸ್ ಇಂಕ್ ಪ್ರಕಾರ, 2022 ರಲ್ಲಿ ಟೆಕ್ ವಲಯದಲ್ಲಿ ಹೆಚ್ಚಿನ ಉದ್ಯೋಗ ಕಡಿತವಾಗಿದೆ. ಈ ವರ್ಷದಲ್ಲಿ 97,171 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದು ಹಿಂದಿನ ವರ್ಷಕ್ಕೆ ಹೋಲಿಸಿದರೆ 649% ಹೆಚ್ಚಾಗಿದೆ ಎನ್ನಲಾಗಿದೆ.

ಇದನ್ನೂ ಓದಿ; ಅನಿಶ್ಚಿತ ಆರ್ಥಿಕತೆ: 18,000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆಜಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...