Homeಕರ್ನಾಟಕಗೂಳಿಹಟ್ಟಿ 'ಅಸ್ಪೃಶ್ಯತೆ' ಆರೋಪ; ದಲಿತ ನಾಯಕರನ್ನು ಮುಂದಿಟ್ಟು 'ಡ್ಯಾಮೇಜ್ ಕಂಟ್ರೋಲ್‌'ಗೆ ಮುಂದಾಯಿತೇ ಬಿಜೆಪಿ?

ಗೂಳಿಹಟ್ಟಿ ‘ಅಸ್ಪೃಶ್ಯತೆ’ ಆರೋಪ; ದಲಿತ ನಾಯಕರನ್ನು ಮುಂದಿಟ್ಟು ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾಯಿತೇ ಬಿಜೆಪಿ?

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದ ಆಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪರಿಶಿಷ್ಟ ಸಮುದಾಯದ ವಿರುದ್ಧ ನಡೆಯುತ್ತಿರುವ ಬಹಿರಂಗ ಅಸ್ಪೃಶ್ಯತೆ ಆಚರಣೆ ವಿರುದ್ಧ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕನ ವಿರುದ್ಧ ಸ್ವಪಕ್ಷದ ದಲಿತ ನಾಯಕರೇ ಈಗ ತಿರುಗಿಬಿದ್ದಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಪಿ. ರಾಜೀವ್ ಹಾಗೂ ಅರವಿಂದ ಲಿಂಬಾವಳಿ ಅವರು ಗೂಳಿಹಟ್ಟಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ದಲಿತ ನಾಯಕರನ್ನೇ ಮುಂದಿಟ್ಟು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಕಳುಹಿಸಿದ್ದಾರೆ ಎನ್ನಲಾಗಿದ್ದು ಆಡಿಯೋ ವೈರಲ್ ಆಗಿ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಹೇಳಿಕೆ ಬಿಡುಗಡೆ ಮಾಡಿದ್ದ ಆರ್‌ಎಸ್‌ಎಸ್‌, ‘ಗೂಳಿಹಟ್ಟಿ ಆರೋಪ ನಿರಾಧಾರ’ ಎಂದು ಹೇಳಿತ್ತು. ಇತ್ತಕಡೆ ಬಿಜೆಪಿ ಕೂಡ ದಲಿತ ಸಮುದಾಯದ ನಾಯರನ್ನು ಮುಂದಿಟ್ಟುಕೊಂಡು, ಗೂಳಿಹಟ್ಟಿ ಆರೋಪ ಸುಳ್ಳು ಎಂದು ಹೇಳಿಸಿದೆ.

ಗೂಳಿಹಟ್ಟಿ ಹೇಳಿಕೆ ಹಿಂದೆ ಕಾಣದ ಕೈಗಳ ಒತ್ತಡ:

‘ಆರ್‌ಎಸ್‌ಎಸ್‌ ಕುರಿತು ಗೂಳಿಹಟ್ಟಿ ನೀಡಿದ ಹೇಳಿಕೆ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅವರು ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ದುಷ್ಪ್ರೇರಣೆಗೆ ಒಳಗಾಗಿ, ಯಾವ ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಬಿಜೆಪಿ ರಾಜ್ಯ ವಕ್ತಾರ ಪಿ. ರಾಜೀವ್ ಆರೋಪವನ್ನು ನಿರಾಕರಿಸಿದ್ದಾರೆ.

‘ಗೂಳಿಹಟ್ಟಿ ಶೇಖರ್ ಅವರು ಹೇಳಿದ್ದು ತಪ್ಪು ಮಾಹಿತಿ. ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರ್‌ಎಸ್‌ಎಸ್‌ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ. ಆರ್‌ಎಸ್‌ಎಸ್‌ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರ್‌ಎಸ್‌ಎಸ್‌, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ’ ಬಂದಿಲ್ಲ ಎಂದರು.

ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ?

ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿಯ ಮತ್ತೋರ್ವ ದಲಿತ ಮುಖಂಡ ಛಲವಾದಿ ನಾರಾಯಣಸ್ವಾಮಿ, ‘ಗೂಳಿಹಟ್ಟಿ ಶೇಖರ್ ಆರ್‌ಎಸ್‌ಎಸ್‌ ಕುರಿತಂತೆ ಸತ್ಯಕ್ಕೆ ದೂರವಾದ ಪ್ರಸ್ತಾಪ ಮಾಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿ ಜಾತಿಭೇದ ಇಲ್ಲ. ರಿಜಿಸ್ಟರ್‌ನಲ್ಲಿ ಸಹಿ ಮಾಡುವ ಪದ್ಧತಿಯೂ ಇಲ್ಲ. ಅವರ ಆಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅದು ನಿಜಕ್ಕೂ ಅವರದೇ ಅಥವಾ ಅಲ್ಲವೇ ಎಂಬುದು ಬೇರೆ ವಿಷಯ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಬಂದ ವಿಷಯ ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವ ರೀತಿಯಲ್ಲಿದೆ. ಅವರು ನಮ್ಮ ಪಕ್ಷದ ಸದಸ್ಯರಾಗಿದ್ದರು’ ಎಂದು ತಿಳಿಸಿದರು.

‘ನನ್ನ ಅನುಭವದ ಪ್ರಕಾರ ಸಂಘದಲ್ಲಿ ಯಾವುದೇ ತಾರತಮ್ಯ ಇಲ್ಲ; ಇದು ಸ್ಪಷ್ಟ. ಇವತ್ತು ಗೂಳಿಹಟ್ಟಿಯವರು ರಾಜಕೀಯ ಕಾರಣಕ್ಕಾಗಿ, ಕಾಂಗ್ರೆಸ್ ಬಾಗಿಲು ತಟ್ಟುವ ಸಂದರ್ಭದಲ್ಲಿ ಪಕ್ಷಕ್ಕೆ ಈ ರೀತಿ ಹಾನಿ ಮಾಡುವುದು ಸರಿಯಾದ ಕ್ರಮವಲ್ಲ. ನೀವು ಕಾಂಗ್ರೆಸ್‌ಗೆ ಹೋಗುವುದಾದರೆ ನಮ್ಮ ಅಡ್ಡಿ ಇಲ್ಲ; ಹೋಗಬಹುದು. ಆದರೆ, ನೀವು ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ’ ಎಂದು ಛಲವಾದಿ ಕಿಡಿಕಾರಿದ್ದಾರೆ.

ಗೂಳಿಹಟ್ಟಿ ಆಡಿಯೋದಲ್ಲಿ ಮಾತನಾಡಿದ್ದು ಶುದ್ಧ ಸುಳ್ಳು:

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ‘ಆರ್‌ಎಸ್‌ಎಸ್‌ ಕೇಂದ್ರ ಕಚೇರಿ, ಇತರ ಯಾವುದೇ ಕಚೇರಿಗಳಲ್ಲಿ ಜಾತಿ ಕೇಳಿ ಒಳಕ್ಕೆ ಬಿಡುವ ಪದ್ಧತಿಯೇ ಇಲ್ಲ. ನಾನು ಆರ್‌ಎಸ್‌ಎಸ್‌, ವಿದ್ಯಾರ್ಥಿ ಪರಿಷತ್ತಿನಲ್ಲಿ ಬೆಳೆದ ಹುಡುಗ. ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಸ್ವಯಂಸೇವಕನಾಗಿದ್ದೆ. ನನ್ನ ಜಾತಿ ಬಗ್ಗೆ ಬಹಳ ಜನರಿಗೆ ಗೊತ್ತಾದುದು ಬಿಜೆಪಿಗೆ ಬಂದ ಬಳಿಕ. ಸುಳ್ಳು ಸುದ್ದಿ ಹಬ್ಬಿಸಬೇಡಿ. ಆರ್‌ಎಸ್‌ಎಸ್‌ನ ರಾಜ್ಯ, ಇತರ ರಾಜ್ಯಗಳ ಪದಾಧಿಕಾರಿಗಳ ಮನೆಗೂ ಹೋಗಿದ್ದೇನೆ. ಅವರ ಮನೆಯಲ್ಲೂ ಜಾತಿ ಕೇಳುವುದಿಲ್ಲ. ಅಲ್ಲಿ ಕೂಡ ಆತಿಥ್ಯ ಗಮನಿಸಿದರೆ, ಭೇದಭಾವ ಕಾಣಲಿಲ್ಲ. ಚರ್ಚೆಗಾಗಿ ಆರ್‌ಎಸ್‌ಎಸ್‌ ಅನ್ನು ಎಳೆದು ತರುವುದು ನಿಲ್ಲಿಸಿ’ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...