Homeಕರ್ನಾಟಕಗೂಳಿಹಟ್ಟಿ 'ಅಸ್ಪೃಶ್ಯತೆ' ಆರೋಪ; ದಲಿತ ನಾಯಕರನ್ನು ಮುಂದಿಟ್ಟು 'ಡ್ಯಾಮೇಜ್ ಕಂಟ್ರೋಲ್‌'ಗೆ ಮುಂದಾಯಿತೇ ಬಿಜೆಪಿ?

ಗೂಳಿಹಟ್ಟಿ ‘ಅಸ್ಪೃಶ್ಯತೆ’ ಆರೋಪ; ದಲಿತ ನಾಯಕರನ್ನು ಮುಂದಿಟ್ಟು ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾಯಿತೇ ಬಿಜೆಪಿ?

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದ ಆಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪರಿಶಿಷ್ಟ ಸಮುದಾಯದ ವಿರುದ್ಧ ನಡೆಯುತ್ತಿರುವ ಬಹಿರಂಗ ಅಸ್ಪೃಶ್ಯತೆ ಆಚರಣೆ ವಿರುದ್ಧ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕನ ವಿರುದ್ಧ ಸ್ವಪಕ್ಷದ ದಲಿತ ನಾಯಕರೇ ಈಗ ತಿರುಗಿಬಿದ್ದಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಪಿ. ರಾಜೀವ್ ಹಾಗೂ ಅರವಿಂದ ಲಿಂಬಾವಳಿ ಅವರು ಗೂಳಿಹಟ್ಟಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ದಲಿತ ನಾಯಕರನ್ನೇ ಮುಂದಿಟ್ಟು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಕಳುಹಿಸಿದ್ದಾರೆ ಎನ್ನಲಾಗಿದ್ದು ಆಡಿಯೋ ವೈರಲ್ ಆಗಿ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಹೇಳಿಕೆ ಬಿಡುಗಡೆ ಮಾಡಿದ್ದ ಆರ್‌ಎಸ್‌ಎಸ್‌, ‘ಗೂಳಿಹಟ್ಟಿ ಆರೋಪ ನಿರಾಧಾರ’ ಎಂದು ಹೇಳಿತ್ತು. ಇತ್ತಕಡೆ ಬಿಜೆಪಿ ಕೂಡ ದಲಿತ ಸಮುದಾಯದ ನಾಯರನ್ನು ಮುಂದಿಟ್ಟುಕೊಂಡು, ಗೂಳಿಹಟ್ಟಿ ಆರೋಪ ಸುಳ್ಳು ಎಂದು ಹೇಳಿಸಿದೆ.

ಗೂಳಿಹಟ್ಟಿ ಹೇಳಿಕೆ ಹಿಂದೆ ಕಾಣದ ಕೈಗಳ ಒತ್ತಡ:

‘ಆರ್‌ಎಸ್‌ಎಸ್‌ ಕುರಿತು ಗೂಳಿಹಟ್ಟಿ ನೀಡಿದ ಹೇಳಿಕೆ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅವರು ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ದುಷ್ಪ್ರೇರಣೆಗೆ ಒಳಗಾಗಿ, ಯಾವ ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಬಿಜೆಪಿ ರಾಜ್ಯ ವಕ್ತಾರ ಪಿ. ರಾಜೀವ್ ಆರೋಪವನ್ನು ನಿರಾಕರಿಸಿದ್ದಾರೆ.

‘ಗೂಳಿಹಟ್ಟಿ ಶೇಖರ್ ಅವರು ಹೇಳಿದ್ದು ತಪ್ಪು ಮಾಹಿತಿ. ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರ್‌ಎಸ್‌ಎಸ್‌ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ. ಆರ್‌ಎಸ್‌ಎಸ್‌ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರ್‌ಎಸ್‌ಎಸ್‌, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ’ ಬಂದಿಲ್ಲ ಎಂದರು.

ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ?

ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿಯ ಮತ್ತೋರ್ವ ದಲಿತ ಮುಖಂಡ ಛಲವಾದಿ ನಾರಾಯಣಸ್ವಾಮಿ, ‘ಗೂಳಿಹಟ್ಟಿ ಶೇಖರ್ ಆರ್‌ಎಸ್‌ಎಸ್‌ ಕುರಿತಂತೆ ಸತ್ಯಕ್ಕೆ ದೂರವಾದ ಪ್ರಸ್ತಾಪ ಮಾಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿ ಜಾತಿಭೇದ ಇಲ್ಲ. ರಿಜಿಸ್ಟರ್‌ನಲ್ಲಿ ಸಹಿ ಮಾಡುವ ಪದ್ಧತಿಯೂ ಇಲ್ಲ. ಅವರ ಆಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅದು ನಿಜಕ್ಕೂ ಅವರದೇ ಅಥವಾ ಅಲ್ಲವೇ ಎಂಬುದು ಬೇರೆ ವಿಷಯ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಬಂದ ವಿಷಯ ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವ ರೀತಿಯಲ್ಲಿದೆ. ಅವರು ನಮ್ಮ ಪಕ್ಷದ ಸದಸ್ಯರಾಗಿದ್ದರು’ ಎಂದು ತಿಳಿಸಿದರು.

‘ನನ್ನ ಅನುಭವದ ಪ್ರಕಾರ ಸಂಘದಲ್ಲಿ ಯಾವುದೇ ತಾರತಮ್ಯ ಇಲ್ಲ; ಇದು ಸ್ಪಷ್ಟ. ಇವತ್ತು ಗೂಳಿಹಟ್ಟಿಯವರು ರಾಜಕೀಯ ಕಾರಣಕ್ಕಾಗಿ, ಕಾಂಗ್ರೆಸ್ ಬಾಗಿಲು ತಟ್ಟುವ ಸಂದರ್ಭದಲ್ಲಿ ಪಕ್ಷಕ್ಕೆ ಈ ರೀತಿ ಹಾನಿ ಮಾಡುವುದು ಸರಿಯಾದ ಕ್ರಮವಲ್ಲ. ನೀವು ಕಾಂಗ್ರೆಸ್‌ಗೆ ಹೋಗುವುದಾದರೆ ನಮ್ಮ ಅಡ್ಡಿ ಇಲ್ಲ; ಹೋಗಬಹುದು. ಆದರೆ, ನೀವು ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ’ ಎಂದು ಛಲವಾದಿ ಕಿಡಿಕಾರಿದ್ದಾರೆ.

ಗೂಳಿಹಟ್ಟಿ ಆಡಿಯೋದಲ್ಲಿ ಮಾತನಾಡಿದ್ದು ಶುದ್ಧ ಸುಳ್ಳು:

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ‘ಆರ್‌ಎಸ್‌ಎಸ್‌ ಕೇಂದ್ರ ಕಚೇರಿ, ಇತರ ಯಾವುದೇ ಕಚೇರಿಗಳಲ್ಲಿ ಜಾತಿ ಕೇಳಿ ಒಳಕ್ಕೆ ಬಿಡುವ ಪದ್ಧತಿಯೇ ಇಲ್ಲ. ನಾನು ಆರ್‌ಎಸ್‌ಎಸ್‌, ವಿದ್ಯಾರ್ಥಿ ಪರಿಷತ್ತಿನಲ್ಲಿ ಬೆಳೆದ ಹುಡುಗ. ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಸ್ವಯಂಸೇವಕನಾಗಿದ್ದೆ. ನನ್ನ ಜಾತಿ ಬಗ್ಗೆ ಬಹಳ ಜನರಿಗೆ ಗೊತ್ತಾದುದು ಬಿಜೆಪಿಗೆ ಬಂದ ಬಳಿಕ. ಸುಳ್ಳು ಸುದ್ದಿ ಹಬ್ಬಿಸಬೇಡಿ. ಆರ್‌ಎಸ್‌ಎಸ್‌ನ ರಾಜ್ಯ, ಇತರ ರಾಜ್ಯಗಳ ಪದಾಧಿಕಾರಿಗಳ ಮನೆಗೂ ಹೋಗಿದ್ದೇನೆ. ಅವರ ಮನೆಯಲ್ಲೂ ಜಾತಿ ಕೇಳುವುದಿಲ್ಲ. ಅಲ್ಲಿ ಕೂಡ ಆತಿಥ್ಯ ಗಮನಿಸಿದರೆ, ಭೇದಭಾವ ಕಾಣಲಿಲ್ಲ. ಚರ್ಚೆಗಾಗಿ ಆರ್‌ಎಸ್‌ಎಸ್‌ ಅನ್ನು ಎಳೆದು ತರುವುದು ನಿಲ್ಲಿಸಿ’ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...