Homeಕರ್ನಾಟಕಗೂಳಿಹಟ್ಟಿ 'ಅಸ್ಪೃಶ್ಯತೆ' ಆರೋಪ; ದಲಿತ ನಾಯಕರನ್ನು ಮುಂದಿಟ್ಟು 'ಡ್ಯಾಮೇಜ್ ಕಂಟ್ರೋಲ್‌'ಗೆ ಮುಂದಾಯಿತೇ ಬಿಜೆಪಿ?

ಗೂಳಿಹಟ್ಟಿ ‘ಅಸ್ಪೃಶ್ಯತೆ’ ಆರೋಪ; ದಲಿತ ನಾಯಕರನ್ನು ಮುಂದಿಟ್ಟು ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾಯಿತೇ ಬಿಜೆಪಿ?

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದ ಆಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪರಿಶಿಷ್ಟ ಸಮುದಾಯದ ವಿರುದ್ಧ ನಡೆಯುತ್ತಿರುವ ಬಹಿರಂಗ ಅಸ್ಪೃಶ್ಯತೆ ಆಚರಣೆ ವಿರುದ್ಧ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕನ ವಿರುದ್ಧ ಸ್ವಪಕ್ಷದ ದಲಿತ ನಾಯಕರೇ ಈಗ ತಿರುಗಿಬಿದ್ದಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಪಿ. ರಾಜೀವ್ ಹಾಗೂ ಅರವಿಂದ ಲಿಂಬಾವಳಿ ಅವರು ಗೂಳಿಹಟ್ಟಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ದಲಿತ ನಾಯಕರನ್ನೇ ಮುಂದಿಟ್ಟು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಕಳುಹಿಸಿದ್ದಾರೆ ಎನ್ನಲಾಗಿದ್ದು ಆಡಿಯೋ ವೈರಲ್ ಆಗಿ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಹೇಳಿಕೆ ಬಿಡುಗಡೆ ಮಾಡಿದ್ದ ಆರ್‌ಎಸ್‌ಎಸ್‌, ‘ಗೂಳಿಹಟ್ಟಿ ಆರೋಪ ನಿರಾಧಾರ’ ಎಂದು ಹೇಳಿತ್ತು. ಇತ್ತಕಡೆ ಬಿಜೆಪಿ ಕೂಡ ದಲಿತ ಸಮುದಾಯದ ನಾಯರನ್ನು ಮುಂದಿಟ್ಟುಕೊಂಡು, ಗೂಳಿಹಟ್ಟಿ ಆರೋಪ ಸುಳ್ಳು ಎಂದು ಹೇಳಿಸಿದೆ.

ಗೂಳಿಹಟ್ಟಿ ಹೇಳಿಕೆ ಹಿಂದೆ ಕಾಣದ ಕೈಗಳ ಒತ್ತಡ:

‘ಆರ್‌ಎಸ್‌ಎಸ್‌ ಕುರಿತು ಗೂಳಿಹಟ್ಟಿ ನೀಡಿದ ಹೇಳಿಕೆ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅವರು ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ದುಷ್ಪ್ರೇರಣೆಗೆ ಒಳಗಾಗಿ, ಯಾವ ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಬಿಜೆಪಿ ರಾಜ್ಯ ವಕ್ತಾರ ಪಿ. ರಾಜೀವ್ ಆರೋಪವನ್ನು ನಿರಾಕರಿಸಿದ್ದಾರೆ.

‘ಗೂಳಿಹಟ್ಟಿ ಶೇಖರ್ ಅವರು ಹೇಳಿದ್ದು ತಪ್ಪು ಮಾಹಿತಿ. ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರ್‌ಎಸ್‌ಎಸ್‌ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ. ಆರ್‌ಎಸ್‌ಎಸ್‌ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರ್‌ಎಸ್‌ಎಸ್‌, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ’ ಬಂದಿಲ್ಲ ಎಂದರು.

ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ?

ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿಯ ಮತ್ತೋರ್ವ ದಲಿತ ಮುಖಂಡ ಛಲವಾದಿ ನಾರಾಯಣಸ್ವಾಮಿ, ‘ಗೂಳಿಹಟ್ಟಿ ಶೇಖರ್ ಆರ್‌ಎಸ್‌ಎಸ್‌ ಕುರಿತಂತೆ ಸತ್ಯಕ್ಕೆ ದೂರವಾದ ಪ್ರಸ್ತಾಪ ಮಾಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿ ಜಾತಿಭೇದ ಇಲ್ಲ. ರಿಜಿಸ್ಟರ್‌ನಲ್ಲಿ ಸಹಿ ಮಾಡುವ ಪದ್ಧತಿಯೂ ಇಲ್ಲ. ಅವರ ಆಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅದು ನಿಜಕ್ಕೂ ಅವರದೇ ಅಥವಾ ಅಲ್ಲವೇ ಎಂಬುದು ಬೇರೆ ವಿಷಯ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಬಂದ ವಿಷಯ ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವ ರೀತಿಯಲ್ಲಿದೆ. ಅವರು ನಮ್ಮ ಪಕ್ಷದ ಸದಸ್ಯರಾಗಿದ್ದರು’ ಎಂದು ತಿಳಿಸಿದರು.

‘ನನ್ನ ಅನುಭವದ ಪ್ರಕಾರ ಸಂಘದಲ್ಲಿ ಯಾವುದೇ ತಾರತಮ್ಯ ಇಲ್ಲ; ಇದು ಸ್ಪಷ್ಟ. ಇವತ್ತು ಗೂಳಿಹಟ್ಟಿಯವರು ರಾಜಕೀಯ ಕಾರಣಕ್ಕಾಗಿ, ಕಾಂಗ್ರೆಸ್ ಬಾಗಿಲು ತಟ್ಟುವ ಸಂದರ್ಭದಲ್ಲಿ ಪಕ್ಷಕ್ಕೆ ಈ ರೀತಿ ಹಾನಿ ಮಾಡುವುದು ಸರಿಯಾದ ಕ್ರಮವಲ್ಲ. ನೀವು ಕಾಂಗ್ರೆಸ್‌ಗೆ ಹೋಗುವುದಾದರೆ ನಮ್ಮ ಅಡ್ಡಿ ಇಲ್ಲ; ಹೋಗಬಹುದು. ಆದರೆ, ನೀವು ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ’ ಎಂದು ಛಲವಾದಿ ಕಿಡಿಕಾರಿದ್ದಾರೆ.

ಗೂಳಿಹಟ್ಟಿ ಆಡಿಯೋದಲ್ಲಿ ಮಾತನಾಡಿದ್ದು ಶುದ್ಧ ಸುಳ್ಳು:

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ‘ಆರ್‌ಎಸ್‌ಎಸ್‌ ಕೇಂದ್ರ ಕಚೇರಿ, ಇತರ ಯಾವುದೇ ಕಚೇರಿಗಳಲ್ಲಿ ಜಾತಿ ಕೇಳಿ ಒಳಕ್ಕೆ ಬಿಡುವ ಪದ್ಧತಿಯೇ ಇಲ್ಲ. ನಾನು ಆರ್‌ಎಸ್‌ಎಸ್‌, ವಿದ್ಯಾರ್ಥಿ ಪರಿಷತ್ತಿನಲ್ಲಿ ಬೆಳೆದ ಹುಡುಗ. ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಸ್ವಯಂಸೇವಕನಾಗಿದ್ದೆ. ನನ್ನ ಜಾತಿ ಬಗ್ಗೆ ಬಹಳ ಜನರಿಗೆ ಗೊತ್ತಾದುದು ಬಿಜೆಪಿಗೆ ಬಂದ ಬಳಿಕ. ಸುಳ್ಳು ಸುದ್ದಿ ಹಬ್ಬಿಸಬೇಡಿ. ಆರ್‌ಎಸ್‌ಎಸ್‌ನ ರಾಜ್ಯ, ಇತರ ರಾಜ್ಯಗಳ ಪದಾಧಿಕಾರಿಗಳ ಮನೆಗೂ ಹೋಗಿದ್ದೇನೆ. ಅವರ ಮನೆಯಲ್ಲೂ ಜಾತಿ ಕೇಳುವುದಿಲ್ಲ. ಅಲ್ಲಿ ಕೂಡ ಆತಿಥ್ಯ ಗಮನಿಸಿದರೆ, ಭೇದಭಾವ ಕಾಣಲಿಲ್ಲ. ಚರ್ಚೆಗಾಗಿ ಆರ್‌ಎಸ್‌ಎಸ್‌ ಅನ್ನು ಎಳೆದು ತರುವುದು ನಿಲ್ಲಿಸಿ’ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...