Homeಕರ್ನಾಟಕಗೂಳಿಹಟ್ಟಿ 'ಅಸ್ಪೃಶ್ಯತೆ' ಆರೋಪ; ದಲಿತ ನಾಯಕರನ್ನು ಮುಂದಿಟ್ಟು 'ಡ್ಯಾಮೇಜ್ ಕಂಟ್ರೋಲ್‌'ಗೆ ಮುಂದಾಯಿತೇ ಬಿಜೆಪಿ?

ಗೂಳಿಹಟ್ಟಿ ‘ಅಸ್ಪೃಶ್ಯತೆ’ ಆರೋಪ; ದಲಿತ ನಾಯಕರನ್ನು ಮುಂದಿಟ್ಟು ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾಯಿತೇ ಬಿಜೆಪಿ?

- Advertisement -
- Advertisement -

‘ನಾನು ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ’ ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದ ಆಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪರಿಶಿಷ್ಟ ಸಮುದಾಯದ ವಿರುದ್ಧ ನಡೆಯುತ್ತಿರುವ ಬಹಿರಂಗ ಅಸ್ಪೃಶ್ಯತೆ ಆಚರಣೆ ವಿರುದ್ಧ ಮಾತನಾಡಿದ್ದ ಬಿಜೆಪಿ ಮಾಜಿ ಶಾಸಕನ ವಿರುದ್ಧ ಸ್ವಪಕ್ಷದ ದಲಿತ ನಾಯಕರೇ ಈಗ ತಿರುಗಿಬಿದ್ದಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರಾದ ಪಿ. ರಾಜೀವ್ ಹಾಗೂ ಅರವಿಂದ ಲಿಂಬಾವಳಿ ಅವರು ಗೂಳಿಹಟ್ಟಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ದಲಿತ ನಾಯಕರನ್ನೇ ಮುಂದಿಟ್ಟು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಕಳುಹಿಸಿದ್ದಾರೆ ಎನ್ನಲಾಗಿದ್ದು ಆಡಿಯೋ ವೈರಲ್ ಆಗಿ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಹೇಳಿಕೆ ಬಿಡುಗಡೆ ಮಾಡಿದ್ದ ಆರ್‌ಎಸ್‌ಎಸ್‌, ‘ಗೂಳಿಹಟ್ಟಿ ಆರೋಪ ನಿರಾಧಾರ’ ಎಂದು ಹೇಳಿತ್ತು. ಇತ್ತಕಡೆ ಬಿಜೆಪಿ ಕೂಡ ದಲಿತ ಸಮುದಾಯದ ನಾಯರನ್ನು ಮುಂದಿಟ್ಟುಕೊಂಡು, ಗೂಳಿಹಟ್ಟಿ ಆರೋಪ ಸುಳ್ಳು ಎಂದು ಹೇಳಿಸಿದೆ.

ಗೂಳಿಹಟ್ಟಿ ಹೇಳಿಕೆ ಹಿಂದೆ ಕಾಣದ ಕೈಗಳ ಒತ್ತಡ:

‘ಆರ್‌ಎಸ್‌ಎಸ್‌ ಕುರಿತು ಗೂಳಿಹಟ್ಟಿ ನೀಡಿದ ಹೇಳಿಕೆ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅವರು ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ದುಷ್ಪ್ರೇರಣೆಗೆ ಒಳಗಾಗಿ, ಯಾವ ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಈ ಮಾತು ಹೇಳಿದ್ದಾರೋ ಗೊತ್ತಿಲ್ಲ’ ಎಂದು ಬಿಜೆಪಿ ರಾಜ್ಯ ವಕ್ತಾರ ಪಿ. ರಾಜೀವ್ ಆರೋಪವನ್ನು ನಿರಾಕರಿಸಿದ್ದಾರೆ.

‘ಗೂಳಿಹಟ್ಟಿ ಶೇಖರ್ ಅವರು ಹೇಳಿದ್ದು ತಪ್ಪು ಮಾಹಿತಿ. ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರ್‌ಎಸ್‌ಎಸ್‌ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ. ಆರ್‌ಎಸ್‌ಎಸ್‌ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರ್‌ಎಸ್‌ಎಸ್‌, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ’ ಬಂದಿಲ್ಲ ಎಂದರು.

ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ?

ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿಯ ಮತ್ತೋರ್ವ ದಲಿತ ಮುಖಂಡ ಛಲವಾದಿ ನಾರಾಯಣಸ್ವಾಮಿ, ‘ಗೂಳಿಹಟ್ಟಿ ಶೇಖರ್ ಆರ್‌ಎಸ್‌ಎಸ್‌ ಕುರಿತಂತೆ ಸತ್ಯಕ್ಕೆ ದೂರವಾದ ಪ್ರಸ್ತಾಪ ಮಾಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿ ಜಾತಿಭೇದ ಇಲ್ಲ. ರಿಜಿಸ್ಟರ್‌ನಲ್ಲಿ ಸಹಿ ಮಾಡುವ ಪದ್ಧತಿಯೂ ಇಲ್ಲ. ಅವರ ಆಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದನ್ನು ಗಮನಿಸಿದ್ದೇನೆ. ಅದು ನಿಜಕ್ಕೂ ಅವರದೇ ಅಥವಾ ಅಲ್ಲವೇ ಎಂಬುದು ಬೇರೆ ವಿಷಯ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಬಂದ ವಿಷಯ ನಮ್ಮ ಪಕ್ಷದ ಮೇಲೆ ಪರಿಣಾಮ ಬೀರುವ ರೀತಿಯಲ್ಲಿದೆ. ಅವರು ನಮ್ಮ ಪಕ್ಷದ ಸದಸ್ಯರಾಗಿದ್ದರು’ ಎಂದು ತಿಳಿಸಿದರು.

‘ನನ್ನ ಅನುಭವದ ಪ್ರಕಾರ ಸಂಘದಲ್ಲಿ ಯಾವುದೇ ತಾರತಮ್ಯ ಇಲ್ಲ; ಇದು ಸ್ಪಷ್ಟ. ಇವತ್ತು ಗೂಳಿಹಟ್ಟಿಯವರು ರಾಜಕೀಯ ಕಾರಣಕ್ಕಾಗಿ, ಕಾಂಗ್ರೆಸ್ ಬಾಗಿಲು ತಟ್ಟುವ ಸಂದರ್ಭದಲ್ಲಿ ಪಕ್ಷಕ್ಕೆ ಈ ರೀತಿ ಹಾನಿ ಮಾಡುವುದು ಸರಿಯಾದ ಕ್ರಮವಲ್ಲ. ನೀವು ಕಾಂಗ್ರೆಸ್‌ಗೆ ಹೋಗುವುದಾದರೆ ನಮ್ಮ ಅಡ್ಡಿ ಇಲ್ಲ; ಹೋಗಬಹುದು. ಆದರೆ, ನೀವು ಉಂಡ ತಟ್ಟೆಯಲ್ಲಿ ಮಣ್ಣು ಹಾಕಿ ಹೋಗುವುದು ಎಷ್ಟು ಸರಿ’ ಎಂದು ಛಲವಾದಿ ಕಿಡಿಕಾರಿದ್ದಾರೆ.

ಗೂಳಿಹಟ್ಟಿ ಆಡಿಯೋದಲ್ಲಿ ಮಾತನಾಡಿದ್ದು ಶುದ್ಧ ಸುಳ್ಳು:

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ‘ಆರ್‌ಎಸ್‌ಎಸ್‌ ಕೇಂದ್ರ ಕಚೇರಿ, ಇತರ ಯಾವುದೇ ಕಚೇರಿಗಳಲ್ಲಿ ಜಾತಿ ಕೇಳಿ ಒಳಕ್ಕೆ ಬಿಡುವ ಪದ್ಧತಿಯೇ ಇಲ್ಲ. ನಾನು ಆರ್‌ಎಸ್‌ಎಸ್‌, ವಿದ್ಯಾರ್ಥಿ ಪರಿಷತ್ತಿನಲ್ಲಿ ಬೆಳೆದ ಹುಡುಗ. ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಸ್ವಯಂಸೇವಕನಾಗಿದ್ದೆ. ನನ್ನ ಜಾತಿ ಬಗ್ಗೆ ಬಹಳ ಜನರಿಗೆ ಗೊತ್ತಾದುದು ಬಿಜೆಪಿಗೆ ಬಂದ ಬಳಿಕ. ಸುಳ್ಳು ಸುದ್ದಿ ಹಬ್ಬಿಸಬೇಡಿ. ಆರ್‌ಎಸ್‌ಎಸ್‌ನ ರಾಜ್ಯ, ಇತರ ರಾಜ್ಯಗಳ ಪದಾಧಿಕಾರಿಗಳ ಮನೆಗೂ ಹೋಗಿದ್ದೇನೆ. ಅವರ ಮನೆಯಲ್ಲೂ ಜಾತಿ ಕೇಳುವುದಿಲ್ಲ. ಅಲ್ಲಿ ಕೂಡ ಆತಿಥ್ಯ ಗಮನಿಸಿದರೆ, ಭೇದಭಾವ ಕಾಣಲಿಲ್ಲ. ಚರ್ಚೆಗಾಗಿ ಆರ್‌ಎಸ್‌ಎಸ್‌ ಅನ್ನು ಎಳೆದು ತರುವುದು ನಿಲ್ಲಿಸಿ’ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...