Homeಕರ್ನಾಟಕಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

‘ನಾನು ಪರಿಶಿಷ್ಟ ಜಾತಿಗೆ ಸೇರಿದವನು ಎಂಬ ಕಾರಣಕ್ಕೆ ನಾಗಪುರದಲ್ಲಿರುವ ಹೆಡಗೇವಾರ್ ಮ್ಯೂಸಿಯಂ ಪ್ರವೇಶ ನಿರಾಕರಿಸಲಾಯಿತು’ ಎಂದು ಮಾಜಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ಮನುವಾದ ವಿಧಿಸಿದ ಎಚ್ಚರಿಕೆ, ದಲಿತರಿಗೆ ಆರ್‌ಎಸ್‌ಎಸ್‌ ಕಚೇರಿಯೊಳಗೆ ಪ್ರವೇಶವಿಲ್ಲ. ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರವಿಲ್ಲ, ಸಮಾನತೆಯನ್ನು ಬಿಜೆಪಿ ಸಹಿಸುವುದಿಲ್ಲ’ ಎಂದು ಲೇವಡಿ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಬಿಜೆಪಿಯನ್ನು ಟೀಕಿಸಿರುವ ಕಾಂಗ್ರೆಸ್, ‘ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ನೈಜ ಹಿಂದೂ ಧರ್ಮ ಪರಿಪಾಲಕರೇ ಆಗಿದ್ದರೆ ಉತ್ತರಿಸಲಿ. ಇದುವರೆಗೂ ದಲಿತ, ಹಿಂದುಳಿದವರು ಆರ್‌ಎಸ್‌ಎಸ್‌ನ ಸರಸಂಘಚಾಲಕರಾಗಿಲ್ಲವೇಕೆ? ಆರ್‌ಎಸ್‌ಎಸ್‌ನ ಪ್ರಮುಖ ಹುದ್ದೆಗಳಿಗೆ ದಲಿತರು ನೇಮಕವಾಗಿಲ್ಲವೇಕೆ? ಇದುವರೆಗೂ ಆರ್‌ಎಸ್‌ಎಸ್‌ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಇಡುವುದಿಲ್ಲವೇಕೆ? ಅಂಬೇಡ್ಕರ್ ಜಯಂತಿ ಆಚರಿಸುವುದಿಲ್ಲವೇಕೆ? ಆರ್‌ಎಸ್‌ಎಸ್‌ ಸಂವಿಧಾನ ಪ್ರತಿಯನ್ನು ಸುಟ್ಟಿದ್ದೇಕೆ? ದಲಿತರಿಗೆ ನೀಡಿದ್ದ ಮತದಾನದ ಹಕ್ಕನ್ನು ವಿರೋಧಿಸಿದ್ದೇಕೆ? ಮಹಿಳೆಯರಿಗೆ ಸಂಘದಲ್ಲಿ ಪ್ರವೇಶವಿಲ್ಲವೇಕೆ? ದಲಿತರಿಗೆ ಸಂಘದ ಕಚೇರಿಗಳಿಗೆ ಪ್ರವೇಶವಿಲ್ಲವೇಕೆ? ಕರ್ನಾಟಕ ಬಿಜೆಪಿಯಲ್ಲಿ ಯಾವೊಬ್ಬ ದಲಿತರೂ ರಾಜ್ಯಾಧ್ಯಕ್ಷ ಆಗಿಲ್ಲವೇಕೆ’ ಎಂದು ಪ್ರಶ್ನಿಸಿದೆ.

‘ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ, ಈ ದಿನದಂದೇ ಆರ್‌ಎಸ್‌ಎಸ್‌ ಕಚೇರಿಗೆ ದಲಿತರಿಗೆ ಪ್ರವೇಶವಿಲ್ಲ ಎಂಬ ಸತ್ಯ ಬಿಜೆಪಿಯವರಿಂದಲೇ ಹೊರಬಿದ್ದಿದೆ. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ್ದೇಕೆ, ಹಿಂದೂವಾಗಿ ಸಾಯಲಾರೆ ಎಂದಿದ್ದೇಕೆ, ಮನುಸ್ಮೃತಿಯನ್ನು ಸುಟ್ಟಿದ್ದೇಕೆ ಎಂಬ ಪ್ರಶ್ನೆಗಳಿಗೆ ಬಿಜೆಪಿ ಪಕ್ಷವು ಗೂಳಿಹಟ್ಟಿ ಶೇಖರ್ ಅವರ ಮೂಲಕ ಉತ್ತರ ನೀಡಿದೆ’ ಎಂದಿದೆ.

‘ಆರ್‌ಎಸ್‌ಎಸ್‌ ಗರ್ಭಗುಡಿ ಇರಲಿ, ಬಿಜೆಪಿಯ ಗರ್ಭಗುಡಿಗೇ ದಲಿತರಿಗೆ ಪ್ರವೇಶವಿಲ್ಲ, ಬಿಜೆಪಿಯಲ್ಲಿರುವ ದಲಿತರು ಆರ್‌ಎಸ್‌ಎಸ್‌ನವರ ಚಡ್ಡಿ ಹೊರುವುದಕ್ಕೆ ಮಾತ್ರ ಸೀಮಿತವೆನ್ನುವ ಸತ್ಯ ಜಗಜ್ಜಾಹೀರಾಗಿದೆ. ದಲಿತ ಎಂಬ ಕಾರಣಕ್ಕಾಗಿಯೇ ಗೋವಿಂದ ಕಾರಜೋಳರಂತಹ ಹಿರಿಯ ನಾಯಕರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿಲ್ಲವೇ? ದಲಿತ ಎಂಬ ಕಾರಣಕ್ಕಾಗಿಯೇ ಶ್ರೀರಾಮುಲು ಅವರು ರಾಜ್ಯಾಧ್ಯಕ್ಷ ಸ್ಥಾನ ಬಯಸಿದರೂ ಸಿಗಲಿಲ್ಲವೇ’ ಎಂದು ಬಿಜೆಪಿಯನ್ನು ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

‘ಗೂಳಿಹಟ್ಟಿ ಶೇಖರ್, ಬಿಜೆಪಿಯ ಮಾಜಿ ಸಚಿವ, ಮಾಜಿ ಶಾಸಕ. ಜನಪ್ರತಿನಿಧಿಯಾಗಿದ್ದ ಬಿಜೆಪಿ ಪಕ್ಷದವರೇ ನಾಗಪುರದ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಅಸ್ಪೃಶ್ಯತೆ ಎದುರಿಸಿದೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್‌ನ ಮುದ್ದಿನ ಕೂಸು ಬಿ.ಎಲ್. ಸಂತೋಷ್ ಅವರ ಬಳಿ ತಮಗಾದ ನೋವು, ಅವಮಾನದ ಬಗ್ಗೆ ಅವಲತ್ತುಕೊಂಡರೂ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಈ ಮೌನದ ಅರ್ಥ ಅಸ್ಪೃಶ್ಯತೆ ಆಚರಣೆ ಬಿಜೆಪಿ, ಆರ್‌ಎಸ್‌ಎಸ್‌ನ ಜನ್ಮಸಿದ್ದ ಹಕ್ಕು ಎನ್ನುವುದೇ’ ಎಂದು ಪ್ರಶ್ನಿಸಿದೆ.

‘ವಿರೋಧ ಪಕ್ಷದ ನಾಯಕನ ಆಯ್ಕೆಗೆ ಬಿಜೆಪಿಗೆ ದಲಿತರು ಕಾಣಲಿಲ್ಲ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರು ಕಾಣಲಿಲ್ಲ. ಬಿಜೆಪಿಯಲ್ಲಿ ದಲಿತರು ಸಿಎಂ ಹುದ್ದೆಯ ಬಗ್ಗೆ ಕನಸನ್ನೂ ಕಾಣುವ ಹಾಗಿಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹೇಳುವ ಹಿಂದುತ್ವದಲ್ಲಿ ಸಮಾನತೆ, ಸಹಬಾಳ್ವೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಸಂಘಟನೆ ಎಂಬುದಕ್ಕೆ ಅವರು ಆಚರಿಸುವ ಅಸ್ಪೃಶ್ಯತೆಯೇ ಸಾಕ್ಷಿ ನುಡಿಯುತ್ತದೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಇದನ್ನೂ ಓದಿ; ‘ಚಡ್ಡಿ ಸಂಗ್ರಹ’ ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...