Homeಕರ್ನಾಟಕಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

‘ನಾನು ಪರಿಶಿಷ್ಟ ಜಾತಿಗೆ ಸೇರಿದವನು ಎಂಬ ಕಾರಣಕ್ಕೆ ನಾಗಪುರದಲ್ಲಿರುವ ಹೆಡಗೇವಾರ್ ಮ್ಯೂಸಿಯಂ ಪ್ರವೇಶ ನಿರಾಕರಿಸಲಾಯಿತು’ ಎಂದು ಮಾಜಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ಮನುವಾದ ವಿಧಿಸಿದ ಎಚ್ಚರಿಕೆ, ದಲಿತರಿಗೆ ಆರ್‌ಎಸ್‌ಎಸ್‌ ಕಚೇರಿಯೊಳಗೆ ಪ್ರವೇಶವಿಲ್ಲ. ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರವಿಲ್ಲ, ಸಮಾನತೆಯನ್ನು ಬಿಜೆಪಿ ಸಹಿಸುವುದಿಲ್ಲ’ ಎಂದು ಲೇವಡಿ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಬಿಜೆಪಿಯನ್ನು ಟೀಕಿಸಿರುವ ಕಾಂಗ್ರೆಸ್, ‘ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ನೈಜ ಹಿಂದೂ ಧರ್ಮ ಪರಿಪಾಲಕರೇ ಆಗಿದ್ದರೆ ಉತ್ತರಿಸಲಿ. ಇದುವರೆಗೂ ದಲಿತ, ಹಿಂದುಳಿದವರು ಆರ್‌ಎಸ್‌ಎಸ್‌ನ ಸರಸಂಘಚಾಲಕರಾಗಿಲ್ಲವೇಕೆ? ಆರ್‌ಎಸ್‌ಎಸ್‌ನ ಪ್ರಮುಖ ಹುದ್ದೆಗಳಿಗೆ ದಲಿತರು ನೇಮಕವಾಗಿಲ್ಲವೇಕೆ? ಇದುವರೆಗೂ ಆರ್‌ಎಸ್‌ಎಸ್‌ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಇಡುವುದಿಲ್ಲವೇಕೆ? ಅಂಬೇಡ್ಕರ್ ಜಯಂತಿ ಆಚರಿಸುವುದಿಲ್ಲವೇಕೆ? ಆರ್‌ಎಸ್‌ಎಸ್‌ ಸಂವಿಧಾನ ಪ್ರತಿಯನ್ನು ಸುಟ್ಟಿದ್ದೇಕೆ? ದಲಿತರಿಗೆ ನೀಡಿದ್ದ ಮತದಾನದ ಹಕ್ಕನ್ನು ವಿರೋಧಿಸಿದ್ದೇಕೆ? ಮಹಿಳೆಯರಿಗೆ ಸಂಘದಲ್ಲಿ ಪ್ರವೇಶವಿಲ್ಲವೇಕೆ? ದಲಿತರಿಗೆ ಸಂಘದ ಕಚೇರಿಗಳಿಗೆ ಪ್ರವೇಶವಿಲ್ಲವೇಕೆ? ಕರ್ನಾಟಕ ಬಿಜೆಪಿಯಲ್ಲಿ ಯಾವೊಬ್ಬ ದಲಿತರೂ ರಾಜ್ಯಾಧ್ಯಕ್ಷ ಆಗಿಲ್ಲವೇಕೆ’ ಎಂದು ಪ್ರಶ್ನಿಸಿದೆ.

‘ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ, ಈ ದಿನದಂದೇ ಆರ್‌ಎಸ್‌ಎಸ್‌ ಕಚೇರಿಗೆ ದಲಿತರಿಗೆ ಪ್ರವೇಶವಿಲ್ಲ ಎಂಬ ಸತ್ಯ ಬಿಜೆಪಿಯವರಿಂದಲೇ ಹೊರಬಿದ್ದಿದೆ. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ್ದೇಕೆ, ಹಿಂದೂವಾಗಿ ಸಾಯಲಾರೆ ಎಂದಿದ್ದೇಕೆ, ಮನುಸ್ಮೃತಿಯನ್ನು ಸುಟ್ಟಿದ್ದೇಕೆ ಎಂಬ ಪ್ರಶ್ನೆಗಳಿಗೆ ಬಿಜೆಪಿ ಪಕ್ಷವು ಗೂಳಿಹಟ್ಟಿ ಶೇಖರ್ ಅವರ ಮೂಲಕ ಉತ್ತರ ನೀಡಿದೆ’ ಎಂದಿದೆ.

‘ಆರ್‌ಎಸ್‌ಎಸ್‌ ಗರ್ಭಗುಡಿ ಇರಲಿ, ಬಿಜೆಪಿಯ ಗರ್ಭಗುಡಿಗೇ ದಲಿತರಿಗೆ ಪ್ರವೇಶವಿಲ್ಲ, ಬಿಜೆಪಿಯಲ್ಲಿರುವ ದಲಿತರು ಆರ್‌ಎಸ್‌ಎಸ್‌ನವರ ಚಡ್ಡಿ ಹೊರುವುದಕ್ಕೆ ಮಾತ್ರ ಸೀಮಿತವೆನ್ನುವ ಸತ್ಯ ಜಗಜ್ಜಾಹೀರಾಗಿದೆ. ದಲಿತ ಎಂಬ ಕಾರಣಕ್ಕಾಗಿಯೇ ಗೋವಿಂದ ಕಾರಜೋಳರಂತಹ ಹಿರಿಯ ನಾಯಕರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿಲ್ಲವೇ? ದಲಿತ ಎಂಬ ಕಾರಣಕ್ಕಾಗಿಯೇ ಶ್ರೀರಾಮುಲು ಅವರು ರಾಜ್ಯಾಧ್ಯಕ್ಷ ಸ್ಥಾನ ಬಯಸಿದರೂ ಸಿಗಲಿಲ್ಲವೇ’ ಎಂದು ಬಿಜೆಪಿಯನ್ನು ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

‘ಗೂಳಿಹಟ್ಟಿ ಶೇಖರ್, ಬಿಜೆಪಿಯ ಮಾಜಿ ಸಚಿವ, ಮಾಜಿ ಶಾಸಕ. ಜನಪ್ರತಿನಿಧಿಯಾಗಿದ್ದ ಬಿಜೆಪಿ ಪಕ್ಷದವರೇ ನಾಗಪುರದ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಅಸ್ಪೃಶ್ಯತೆ ಎದುರಿಸಿದೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್‌ನ ಮುದ್ದಿನ ಕೂಸು ಬಿ.ಎಲ್. ಸಂತೋಷ್ ಅವರ ಬಳಿ ತಮಗಾದ ನೋವು, ಅವಮಾನದ ಬಗ್ಗೆ ಅವಲತ್ತುಕೊಂಡರೂ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಈ ಮೌನದ ಅರ್ಥ ಅಸ್ಪೃಶ್ಯತೆ ಆಚರಣೆ ಬಿಜೆಪಿ, ಆರ್‌ಎಸ್‌ಎಸ್‌ನ ಜನ್ಮಸಿದ್ದ ಹಕ್ಕು ಎನ್ನುವುದೇ’ ಎಂದು ಪ್ರಶ್ನಿಸಿದೆ.

‘ವಿರೋಧ ಪಕ್ಷದ ನಾಯಕನ ಆಯ್ಕೆಗೆ ಬಿಜೆಪಿಗೆ ದಲಿತರು ಕಾಣಲಿಲ್ಲ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರು ಕಾಣಲಿಲ್ಲ. ಬಿಜೆಪಿಯಲ್ಲಿ ದಲಿತರು ಸಿಎಂ ಹುದ್ದೆಯ ಬಗ್ಗೆ ಕನಸನ್ನೂ ಕಾಣುವ ಹಾಗಿಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹೇಳುವ ಹಿಂದುತ್ವದಲ್ಲಿ ಸಮಾನತೆ, ಸಹಬಾಳ್ವೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಸಂಘಟನೆ ಎಂಬುದಕ್ಕೆ ಅವರು ಆಚರಿಸುವ ಅಸ್ಪೃಶ್ಯತೆಯೇ ಸಾಕ್ಷಿ ನುಡಿಯುತ್ತದೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಇದನ್ನೂ ಓದಿ; ‘ಚಡ್ಡಿ ಸಂಗ್ರಹ’ ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...