Homeಕರ್ನಾಟಕಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

‘ನಾನು ಪರಿಶಿಷ್ಟ ಜಾತಿಗೆ ಸೇರಿದವನು ಎಂಬ ಕಾರಣಕ್ಕೆ ನಾಗಪುರದಲ್ಲಿರುವ ಹೆಡಗೇವಾರ್ ಮ್ಯೂಸಿಯಂ ಪ್ರವೇಶ ನಿರಾಕರಿಸಲಾಯಿತು’ ಎಂದು ಮಾಜಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ಮನುವಾದ ವಿಧಿಸಿದ ಎಚ್ಚರಿಕೆ, ದಲಿತರಿಗೆ ಆರ್‌ಎಸ್‌ಎಸ್‌ ಕಚೇರಿಯೊಳಗೆ ಪ್ರವೇಶವಿಲ್ಲ. ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರವಿಲ್ಲ, ಸಮಾನತೆಯನ್ನು ಬಿಜೆಪಿ ಸಹಿಸುವುದಿಲ್ಲ’ ಎಂದು ಲೇವಡಿ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಬಿಜೆಪಿಯನ್ನು ಟೀಕಿಸಿರುವ ಕಾಂಗ್ರೆಸ್, ‘ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ನೈಜ ಹಿಂದೂ ಧರ್ಮ ಪರಿಪಾಲಕರೇ ಆಗಿದ್ದರೆ ಉತ್ತರಿಸಲಿ. ಇದುವರೆಗೂ ದಲಿತ, ಹಿಂದುಳಿದವರು ಆರ್‌ಎಸ್‌ಎಸ್‌ನ ಸರಸಂಘಚಾಲಕರಾಗಿಲ್ಲವೇಕೆ? ಆರ್‌ಎಸ್‌ಎಸ್‌ನ ಪ್ರಮುಖ ಹುದ್ದೆಗಳಿಗೆ ದಲಿತರು ನೇಮಕವಾಗಿಲ್ಲವೇಕೆ? ಇದುವರೆಗೂ ಆರ್‌ಎಸ್‌ಎಸ್‌ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಇಡುವುದಿಲ್ಲವೇಕೆ? ಅಂಬೇಡ್ಕರ್ ಜಯಂತಿ ಆಚರಿಸುವುದಿಲ್ಲವೇಕೆ? ಆರ್‌ಎಸ್‌ಎಸ್‌ ಸಂವಿಧಾನ ಪ್ರತಿಯನ್ನು ಸುಟ್ಟಿದ್ದೇಕೆ? ದಲಿತರಿಗೆ ನೀಡಿದ್ದ ಮತದಾನದ ಹಕ್ಕನ್ನು ವಿರೋಧಿಸಿದ್ದೇಕೆ? ಮಹಿಳೆಯರಿಗೆ ಸಂಘದಲ್ಲಿ ಪ್ರವೇಶವಿಲ್ಲವೇಕೆ? ದಲಿತರಿಗೆ ಸಂಘದ ಕಚೇರಿಗಳಿಗೆ ಪ್ರವೇಶವಿಲ್ಲವೇಕೆ? ಕರ್ನಾಟಕ ಬಿಜೆಪಿಯಲ್ಲಿ ಯಾವೊಬ್ಬ ದಲಿತರೂ ರಾಜ್ಯಾಧ್ಯಕ್ಷ ಆಗಿಲ್ಲವೇಕೆ’ ಎಂದು ಪ್ರಶ್ನಿಸಿದೆ.

‘ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ, ಈ ದಿನದಂದೇ ಆರ್‌ಎಸ್‌ಎಸ್‌ ಕಚೇರಿಗೆ ದಲಿತರಿಗೆ ಪ್ರವೇಶವಿಲ್ಲ ಎಂಬ ಸತ್ಯ ಬಿಜೆಪಿಯವರಿಂದಲೇ ಹೊರಬಿದ್ದಿದೆ. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ್ದೇಕೆ, ಹಿಂದೂವಾಗಿ ಸಾಯಲಾರೆ ಎಂದಿದ್ದೇಕೆ, ಮನುಸ್ಮೃತಿಯನ್ನು ಸುಟ್ಟಿದ್ದೇಕೆ ಎಂಬ ಪ್ರಶ್ನೆಗಳಿಗೆ ಬಿಜೆಪಿ ಪಕ್ಷವು ಗೂಳಿಹಟ್ಟಿ ಶೇಖರ್ ಅವರ ಮೂಲಕ ಉತ್ತರ ನೀಡಿದೆ’ ಎಂದಿದೆ.

‘ಆರ್‌ಎಸ್‌ಎಸ್‌ ಗರ್ಭಗುಡಿ ಇರಲಿ, ಬಿಜೆಪಿಯ ಗರ್ಭಗುಡಿಗೇ ದಲಿತರಿಗೆ ಪ್ರವೇಶವಿಲ್ಲ, ಬಿಜೆಪಿಯಲ್ಲಿರುವ ದಲಿತರು ಆರ್‌ಎಸ್‌ಎಸ್‌ನವರ ಚಡ್ಡಿ ಹೊರುವುದಕ್ಕೆ ಮಾತ್ರ ಸೀಮಿತವೆನ್ನುವ ಸತ್ಯ ಜಗಜ್ಜಾಹೀರಾಗಿದೆ. ದಲಿತ ಎಂಬ ಕಾರಣಕ್ಕಾಗಿಯೇ ಗೋವಿಂದ ಕಾರಜೋಳರಂತಹ ಹಿರಿಯ ನಾಯಕರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿಲ್ಲವೇ? ದಲಿತ ಎಂಬ ಕಾರಣಕ್ಕಾಗಿಯೇ ಶ್ರೀರಾಮುಲು ಅವರು ರಾಜ್ಯಾಧ್ಯಕ್ಷ ಸ್ಥಾನ ಬಯಸಿದರೂ ಸಿಗಲಿಲ್ಲವೇ’ ಎಂದು ಬಿಜೆಪಿಯನ್ನು ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

‘ಗೂಳಿಹಟ್ಟಿ ಶೇಖರ್, ಬಿಜೆಪಿಯ ಮಾಜಿ ಸಚಿವ, ಮಾಜಿ ಶಾಸಕ. ಜನಪ್ರತಿನಿಧಿಯಾಗಿದ್ದ ಬಿಜೆಪಿ ಪಕ್ಷದವರೇ ನಾಗಪುರದ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಅಸ್ಪೃಶ್ಯತೆ ಎದುರಿಸಿದೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್‌ನ ಮುದ್ದಿನ ಕೂಸು ಬಿ.ಎಲ್. ಸಂತೋಷ್ ಅವರ ಬಳಿ ತಮಗಾದ ನೋವು, ಅವಮಾನದ ಬಗ್ಗೆ ಅವಲತ್ತುಕೊಂಡರೂ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಈ ಮೌನದ ಅರ್ಥ ಅಸ್ಪೃಶ್ಯತೆ ಆಚರಣೆ ಬಿಜೆಪಿ, ಆರ್‌ಎಸ್‌ಎಸ್‌ನ ಜನ್ಮಸಿದ್ದ ಹಕ್ಕು ಎನ್ನುವುದೇ’ ಎಂದು ಪ್ರಶ್ನಿಸಿದೆ.

‘ವಿರೋಧ ಪಕ್ಷದ ನಾಯಕನ ಆಯ್ಕೆಗೆ ಬಿಜೆಪಿಗೆ ದಲಿತರು ಕಾಣಲಿಲ್ಲ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರು ಕಾಣಲಿಲ್ಲ. ಬಿಜೆಪಿಯಲ್ಲಿ ದಲಿತರು ಸಿಎಂ ಹುದ್ದೆಯ ಬಗ್ಗೆ ಕನಸನ್ನೂ ಕಾಣುವ ಹಾಗಿಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹೇಳುವ ಹಿಂದುತ್ವದಲ್ಲಿ ಸಮಾನತೆ, ಸಹಬಾಳ್ವೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಸಂಘಟನೆ ಎಂಬುದಕ್ಕೆ ಅವರು ಆಚರಿಸುವ ಅಸ್ಪೃಶ್ಯತೆಯೇ ಸಾಕ್ಷಿ ನುಡಿಯುತ್ತದೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಇದನ್ನೂ ಓದಿ; ‘ಚಡ್ಡಿ ಸಂಗ್ರಹ’ ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...