Homeಕರ್ನಾಟಕಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

‘ನಾನು ಪರಿಶಿಷ್ಟ ಜಾತಿಗೆ ಸೇರಿದವನು ಎಂಬ ಕಾರಣಕ್ಕೆ ನಾಗಪುರದಲ್ಲಿರುವ ಹೆಡಗೇವಾರ್ ಮ್ಯೂಸಿಯಂ ಪ್ರವೇಶ ನಿರಾಕರಿಸಲಾಯಿತು’ ಎಂದು ಮಾಜಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ಮನುವಾದ ವಿಧಿಸಿದ ಎಚ್ಚರಿಕೆ, ದಲಿತರಿಗೆ ಆರ್‌ಎಸ್‌ಎಸ್‌ ಕಚೇರಿಯೊಳಗೆ ಪ್ರವೇಶವಿಲ್ಲ. ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರವಿಲ್ಲ, ಸಮಾನತೆಯನ್ನು ಬಿಜೆಪಿ ಸಹಿಸುವುದಿಲ್ಲ’ ಎಂದು ಲೇವಡಿ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಬಿಜೆಪಿಯನ್ನು ಟೀಕಿಸಿರುವ ಕಾಂಗ್ರೆಸ್, ‘ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ನೈಜ ಹಿಂದೂ ಧರ್ಮ ಪರಿಪಾಲಕರೇ ಆಗಿದ್ದರೆ ಉತ್ತರಿಸಲಿ. ಇದುವರೆಗೂ ದಲಿತ, ಹಿಂದುಳಿದವರು ಆರ್‌ಎಸ್‌ಎಸ್‌ನ ಸರಸಂಘಚಾಲಕರಾಗಿಲ್ಲವೇಕೆ? ಆರ್‌ಎಸ್‌ಎಸ್‌ನ ಪ್ರಮುಖ ಹುದ್ದೆಗಳಿಗೆ ದಲಿತರು ನೇಮಕವಾಗಿಲ್ಲವೇಕೆ? ಇದುವರೆಗೂ ಆರ್‌ಎಸ್‌ಎಸ್‌ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಇಡುವುದಿಲ್ಲವೇಕೆ? ಅಂಬೇಡ್ಕರ್ ಜಯಂತಿ ಆಚರಿಸುವುದಿಲ್ಲವೇಕೆ? ಆರ್‌ಎಸ್‌ಎಸ್‌ ಸಂವಿಧಾನ ಪ್ರತಿಯನ್ನು ಸುಟ್ಟಿದ್ದೇಕೆ? ದಲಿತರಿಗೆ ನೀಡಿದ್ದ ಮತದಾನದ ಹಕ್ಕನ್ನು ವಿರೋಧಿಸಿದ್ದೇಕೆ? ಮಹಿಳೆಯರಿಗೆ ಸಂಘದಲ್ಲಿ ಪ್ರವೇಶವಿಲ್ಲವೇಕೆ? ದಲಿತರಿಗೆ ಸಂಘದ ಕಚೇರಿಗಳಿಗೆ ಪ್ರವೇಶವಿಲ್ಲವೇಕೆ? ಕರ್ನಾಟಕ ಬಿಜೆಪಿಯಲ್ಲಿ ಯಾವೊಬ್ಬ ದಲಿತರೂ ರಾಜ್ಯಾಧ್ಯಕ್ಷ ಆಗಿಲ್ಲವೇಕೆ’ ಎಂದು ಪ್ರಶ್ನಿಸಿದೆ.

‘ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ, ಈ ದಿನದಂದೇ ಆರ್‌ಎಸ್‌ಎಸ್‌ ಕಚೇರಿಗೆ ದಲಿತರಿಗೆ ಪ್ರವೇಶವಿಲ್ಲ ಎಂಬ ಸತ್ಯ ಬಿಜೆಪಿಯವರಿಂದಲೇ ಹೊರಬಿದ್ದಿದೆ. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ್ದೇಕೆ, ಹಿಂದೂವಾಗಿ ಸಾಯಲಾರೆ ಎಂದಿದ್ದೇಕೆ, ಮನುಸ್ಮೃತಿಯನ್ನು ಸುಟ್ಟಿದ್ದೇಕೆ ಎಂಬ ಪ್ರಶ್ನೆಗಳಿಗೆ ಬಿಜೆಪಿ ಪಕ್ಷವು ಗೂಳಿಹಟ್ಟಿ ಶೇಖರ್ ಅವರ ಮೂಲಕ ಉತ್ತರ ನೀಡಿದೆ’ ಎಂದಿದೆ.

‘ಆರ್‌ಎಸ್‌ಎಸ್‌ ಗರ್ಭಗುಡಿ ಇರಲಿ, ಬಿಜೆಪಿಯ ಗರ್ಭಗುಡಿಗೇ ದಲಿತರಿಗೆ ಪ್ರವೇಶವಿಲ್ಲ, ಬಿಜೆಪಿಯಲ್ಲಿರುವ ದಲಿತರು ಆರ್‌ಎಸ್‌ಎಸ್‌ನವರ ಚಡ್ಡಿ ಹೊರುವುದಕ್ಕೆ ಮಾತ್ರ ಸೀಮಿತವೆನ್ನುವ ಸತ್ಯ ಜಗಜ್ಜಾಹೀರಾಗಿದೆ. ದಲಿತ ಎಂಬ ಕಾರಣಕ್ಕಾಗಿಯೇ ಗೋವಿಂದ ಕಾರಜೋಳರಂತಹ ಹಿರಿಯ ನಾಯಕರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿಲ್ಲವೇ? ದಲಿತ ಎಂಬ ಕಾರಣಕ್ಕಾಗಿಯೇ ಶ್ರೀರಾಮುಲು ಅವರು ರಾಜ್ಯಾಧ್ಯಕ್ಷ ಸ್ಥಾನ ಬಯಸಿದರೂ ಸಿಗಲಿಲ್ಲವೇ’ ಎಂದು ಬಿಜೆಪಿಯನ್ನು ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

‘ಗೂಳಿಹಟ್ಟಿ ಶೇಖರ್, ಬಿಜೆಪಿಯ ಮಾಜಿ ಸಚಿವ, ಮಾಜಿ ಶಾಸಕ. ಜನಪ್ರತಿನಿಧಿಯಾಗಿದ್ದ ಬಿಜೆಪಿ ಪಕ್ಷದವರೇ ನಾಗಪುರದ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಅಸ್ಪೃಶ್ಯತೆ ಎದುರಿಸಿದೆ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್‌ನ ಮುದ್ದಿನ ಕೂಸು ಬಿ.ಎಲ್. ಸಂತೋಷ್ ಅವರ ಬಳಿ ತಮಗಾದ ನೋವು, ಅವಮಾನದ ಬಗ್ಗೆ ಅವಲತ್ತುಕೊಂಡರೂ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಈ ಮೌನದ ಅರ್ಥ ಅಸ್ಪೃಶ್ಯತೆ ಆಚರಣೆ ಬಿಜೆಪಿ, ಆರ್‌ಎಸ್‌ಎಸ್‌ನ ಜನ್ಮಸಿದ್ದ ಹಕ್ಕು ಎನ್ನುವುದೇ’ ಎಂದು ಪ್ರಶ್ನಿಸಿದೆ.

‘ವಿರೋಧ ಪಕ್ಷದ ನಾಯಕನ ಆಯ್ಕೆಗೆ ಬಿಜೆಪಿಗೆ ದಲಿತರು ಕಾಣಲಿಲ್ಲ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರು ಕಾಣಲಿಲ್ಲ. ಬಿಜೆಪಿಯಲ್ಲಿ ದಲಿತರು ಸಿಎಂ ಹುದ್ದೆಯ ಬಗ್ಗೆ ಕನಸನ್ನೂ ಕಾಣುವ ಹಾಗಿಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹೇಳುವ ಹಿಂದುತ್ವದಲ್ಲಿ ಸಮಾನತೆ, ಸಹಬಾಳ್ವೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಸಂಘಟನೆ ಎಂಬುದಕ್ಕೆ ಅವರು ಆಚರಿಸುವ ಅಸ್ಪೃಶ್ಯತೆಯೇ ಸಾಕ್ಷಿ ನುಡಿಯುತ್ತದೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಇದನ್ನೂ ಓದಿ; ‘ಚಡ್ಡಿ ಸಂಗ್ರಹ’ ಅಭಿಯಾನವನ್ನು ಎಸ್‌ಸಿ ನಾಯಕರು ಮಾತ್ರ ಮಾಡಿದ್ಯಾಕೆ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...