ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಸಂಘದ ಸಮಾಲೋಚನಾ ಸಭೆಗೆ ನುಗ್ಗಿದ ಕೆಲ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ, ರೈತ ಹೋರಾಟಗಾರರಾದ ರಾಕೇಶ್ ಟಿಕಾಯತ್, ಅನಸೂಯಮ್ಮ, ಚುಕ್ಕಿ ನಂಜುಂಡಸ್ವಾಮಿಯವರ ಮೇಲೆ ಹಲ್ಲೆ ನಡೆಸಿ ಮಸಿ ಬಳಿದಿರುವ ಘಟನೆ ಜರುಗಿದೆ.
ಮೋದಿಗೆ ಜೈಕಾರ ಹಾಕುತ್ತ ಏಕಾಏಕಿ ನುಗ್ಗಿದ ಹಿಂದುತ್ವ ಗೂಂಡಾಗಳು ಸಿಕ್ಕ ಸಿಕ್ಕವರ ಮೇಲೆ ಮಸಿ ಎರಚಿದರು. ವೇದಿಕೆಯ ಮೇಲಿದ್ದ ಮುಖಂಡರಿಗೆ ಹಲ್ಲೆ ನಡೆಸಿದರು. ಕುರ್ಚಿ ಎಸೆದು ದಾಂಧಲೆ ನಡೆಸಿದರು ಎಂದು ಸಭೆಯಲ್ಲಿ ಭಾಗಹಿಸಿದ್ದವರು ಮಾಹಿತಿ ನೀಡಿದ್ದಾರೆ.
ರಾಕೇಶ್ ಟಿಕಾಯತ್, ಅನಸೂಯಮ್ಮ, ಚುಕ್ಕಿ ನಂಜುಂಡಸ್ವಾಮಿ ಮೇಲೆ ಹಲ್ಲೆ: ಮೋದಿ, ಮೋದಿ ಎಂದು ಘೋಷಣೆ ಕೂಗಿದ ಗೂಂಡಾ ಹಲ್ಲೆಕೋರರು.#rakeshtikait @RakeshTikaitBKU pic.twitter.com/DGXcHSQcWe
— Naanu Gauri (@naanugauri) May 30, 2022
ರಾಜ್ಯ ಬಿಜೆಪಿ ಸರ್ಕಾರವು ಸ್ಥಳದಲ್ಲಿ ಭದ್ರತೆಯನ್ನು ಒದಗಿಸಿಲ್ಲ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ. “ಇಲ್ಲಿ ಸ್ಥಳೀಯ ಪೊಲೀಸರು ಯಾವುದೇ ಭದ್ರತೆಯನ್ನು ಒದಗಿಸಿಲ್ಲ. ಗೂಂಡಾಗಳು ಸರ್ಕಾರದ ಜೊತೆ ಶಾಮೀಲಾಗಿ ಈ ಕೃತ್ಯ ಎಸಗಿದ್ದಾರೆ” ಎಂದು ಅವರು ಹೇಳಿದ್ದಾರೆ.
ಅಲ್ಲಿ ಇದ್ದ ಪೊಲೀಸರು ಇದನ್ನು ತಡೆಯದೆ ಮೂಕ ಪ್ರೇಕ್ಷಕರಾಗಿದ್ದರು. ತದನಂತರ ಕೆಲ ಗೂಂಡಾಗಳನ್ನು ಬಂಧಿಸಲಾಗಿದೆ. ಈಗ ಮತ್ತೆ ಸಭೆ ಮುಂದುವರಿಯುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ: ಮಸೀದಿ-ಮಂದಿರ ವಿವಾದಗಳಲ್ಲಿ ನ್ಯಾಯಾಲಯಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳುತ್ತಿವೆಯೇ?
ಮೋದಿ ಬಕ್ತರ ಈ ಗೂಂಡಾಗಿರಿ ಕಂಡನಾರ್ಹ.
Goondaism days are Short.
ರೈತರ ಹೆಸರೇಳಿ ಲೂಟಿ ದಂದೆ ಮಾಡ್ತಿರೋ ಕೋಡಿಹಳ್ಳಿ ,ಠೀಕಾಯತ್ ರವರ ಬಗ್ಗೆ ತನಿಖೆ ಆಗಬೇಕಿದೆ,ಈ ದಿನ ನಡೆದ ಘಟನೆ ನಕಲಿ ರೈತ ಮುಖಂಡರಿಗೆ ಎಚ್ಚರಿಕೆ ಆಗಲಿ
In farmers associations deal leaders sd be avoided and be chased until proper enquires against Kodihalli followers.
Kindly support real farmers leaders.