Homeಕರ್ನಾಟಕಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು

ಏನೇ ಆದರೂ ಸರಿಯೇ, ನಾವು ಫಾದರ್ ಸ್ಟಾನ್‌ ಸ್ವಾಮಿ ಪರ ನಿಲ್ಲುತ್ತೇವೆ ಎಂದು ಜನಪರ ಸಂಘಟನೆಗಳು ಮತ್ತು ಹಳೆ ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಸಂತ ಅಲೋಶಿಯಸ್‌‌ ಸ್ವಾಯತ್ತ ಕಾಲೇಜ್‌ ತನ್ನ ಕ್ಯಾಂಪಸ್‌ನಲ್ಲಿ ಇರುವ ಉದ್ಯಾನವನಕ್ಕೆ, ದೇಶದ ಖ್ಯಾತ ಮಾನವಹಕ್ಕು ಕಾರ್ಯಕರ್ತ ದಿವಂಗತ ಫಾದರ್‌ ಸ್ಟಾನ್ ಸ್ವಾಮಿ ಅವರ ಹೆಸರನ್ನು ಇಡಲು ನಿರ್ಧರಿಸಿದೆ. ಆದರೆ ಇದಕ್ಕೆ ಬಿಜೆಪಿ ಪರ ಸಂಘಟನೆಗಳಾದ ಬಜರಂಗದಳ ಮತ್ತು ವಿಎಚ್‌ಪಿ ವಿರೋಧ ವ್ಯಕ್ತಪಡಿಸಿತ್ತು. ಈ ದಾಳಿಯನ್ನು ವಿರೋಧಿಸಿರುವ ಜನಪರ ಸಂಘಟನೆಗಳು ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿಗಳು ಕಾಲೇಜನ್ನು ಬೆಂಬಲಿಸಿ ಬಹಿರಂಗ ಪತ್ರ ಬರೆದಿದ್ದಾರೆ.

ಜನಪರ ಸಂಘಟನೆಗಳು ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿಗಳು ಬರೆದ ಬಹಿರಂಗ ಪತ್ರದಲ್ಲಿ, ‘‘ಖಾಸಗಿ ಸ್ವಾಯತ್ತ ಕಾಲೇಜು ತೆಗೆದುಕೊಳ್ಳುವ ಸಮಾಜಮುಖಿ ನಿರ್ಧಾರಗಳ ಮೇಲೆ ಹಸ್ತಕ್ಷೇಪ ಮಾಡಲು ಗೂಂಡಾ ಸಂಸ್ಥೆಗಳಿಗೆ ಯಾವುದೆ ಹಕ್ಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆದರಿಕೆ ಹಾಕುವ ಈ ಸಂಘಟನೆಗಳ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕು ಮತ್ತು ಕಾಲೇಜಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

“ಗಂಭೀರವಾದ ಅಪರಾಧಿಕ ಬೆದರಿಕೆಗಳನ್ನು ಹಾಕುವುದರಲ್ಲಿ ತೊಡಗಿಸಿಕೊಂಡಿರುವ ಗೂಂಡಾ ಸಂಸ್ಥೆಗಳ ವಿರುದ್ದ ಪೊಲೀಸರು ತಕ್ಷಣ ಕ್ರಮಕೈಗೊಳ್ಳಬೇಕು. ಖಾಸಗಿ ಸ್ವಾಯತ್ತ ಕಾಲೇಜು ತೆಗೆದುಕೊಳ್ಳುವ ಸಮಾಜಮುಖಿ ನಿರ್ಧಾರಗಳ ಮೇಲೆ ಹಸ್ತಕ್ಷೇಪ ಮಾಡಲು ಗೂಂಡಾ ಸಂಸ್ಥೆಗಳಿಗೆ ಯಾವುದೆ ಹಕ್ಕಿಲ್ಲ. ಈ ಸಂಘಟನೆಗಳಿಗೆ ಒಂದು ನಿರ್ಧಿಷ್ಟ ಉದ್ದೇಶಿತ ಕಾರ್ಯಸೂಚಿಯಿದ್ದು, ಅದರ ಈಡೇರಿಕೆಗಾಗಿ ಹಿಂಸೆ ಮತ್ತು ಕೋಮುವಾದ ಹರಡಿರುವುದರಲ್ಲಿ ಕುಖ್ಯಾತ ಇತಿಹಾಸವನ್ನು ಹೊಂದಿವೆ” ಎಂದು ಉಲ್ಲೇಖಿಸಲಾಗಿದೆ.

“ಗೂಂಡಾ ಸಂಸ್ಕೃತಿಯನ್ನು ಹೊಂದಿರುವ ಫ್ಯಾಸಿಸ್ಟ್‌‌ ಸಂಘಟನೆಗಳು ಕರಾವಳಿ ಕರ್ನಾಟಕದಲ್ಲಿ ನಾಗರೀಕರ ಖಾಸಗಿ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಯಾವುದೆ ಭಯವಿಲ್ಲದೆ ದಿನನಿತ್ಯ ಹಿಂಸಾಚಾರ ಮತ್ತು ಬೆದರಿಕೆಯನ್ನು ಒಡ್ಡುವುದು ಕೆಲಸವನ್ನಾಗಿ ಮಾಡಿಕೊಂಡಿದೆ. ಏನೇ ಆದರೂ ಸರಿಯೇ, ನಾವು ಫಾದರ್ ಸ್ಟಾನ್‌ ಸ್ವಾಮಿ ಪರ ನಿಲ್ಲುತ್ತೇವೆ. ಬೆದರಿಕೆ ಹಾಕುವ ಈ ಸಂಘಟನೆಗಳ ವಿರುದ್ದ ತಕ್ಷಣ ಕ್ರಮಕೈಗೊಳ್ಳಬೇಕು ಮತ್ತು ಕಾಲೇಜಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಆಗ್ರಹಿಸಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿದ್ದ ಸ್ಟಾನ್ ಸ್ವಾಮಿ ಕೇರಳ ಮೂಲದವರಾಗಿದ್ದು ತಮ್ಮ ಜೀವನದ 50 ವರ್ಷಗಳ ಕಾಲ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡಿದ್ದಾರೆ. ಹಲವು ರೀತಿಯ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಎಲ್ಗರ್‌ ಪರಿಷತ್ ಪ್ರಕರಣದಲ್ಲಿ NIA ಕಳೆದ ವರ್ಷ ಅಕ್ಟೋಬರ್‌ 8 ರಂದು ಬಂಧಿಸಿತ್ತು. ಅವರು ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದರು. ಸುಮಾರು ಒಂಬತ್ತು ತಿಂಗಳು ಜೈಲಿನಲ್ಲೇ ಇದ್ದ ಅವರು ಕಳೆದ ಜುಲೈ 5 ರಂದು ಮೃತಪಟ್ಟಿದ್ದರು. ಅವರ ಹೆಸರನ್ನು ಕಾಲೇಜಿನ ಉದ್ಯಾನವೊಂದಕ್ಕೆ ಇಡುವುದಾಗಿ ಕಾಲೇಜು ಮಂಡಳಿ ನಿರ್ಧರಿಸಿತ್ತು.

ಪತ್ರವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಇದನ್ನೂ ಓದಿ: ಸ್ಟ್ಯಾನ್‌ ಸ್ವಾಮಿ ನಿಧನಕ್ಕೆ ಕಾರಣರಾದವರನ್ನು ಇತಿಹಾಸ ಕ್ಷಮಿಸುವುದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...