Homeಮುಖಪುಟಬಿಆರ್‌ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ದುರಂತ: ಡಾ.ಕಫೀಲ್ ಖಾನ್ ಆರೋಪಮುಕ್ತ. ಆದರೆ...

ಬಿಆರ್‌ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ದುರಂತ: ಡಾ.ಕಫೀಲ್ ಖಾನ್ ಆರೋಪಮುಕ್ತ. ಆದರೆ…

- Advertisement -
- Advertisement -

2017ರಲ್ಲಿ ಗೋರಖ್ ಪುರದ ಬಿಆರ್ ಡಿ ವೈದ್ಯಕೀಯ ಆಸ್ಪತ್ರೆ ದುರಂತ ಪ್ರಕರಣದಲ್ಲಿ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದ ಡಾ.ಕಫೀಲ್ ಖಾನ್ ಗೆ ಕೊನೆಗೂ ನ್ಯಾಯ ಸಿಕ್ಕಿದೆ. ಸರ್ಕಾರದ ನೇತೃತ್ವದ ತನಿಖೆಯಿಂದ ಮುಕ್ತಗೊಳಿಸಲಾಗಿದೆ. ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಡಾ.ಕಫೀಲ್ ಅವರ ಮೇಲಿತ್ತು.

ಆದರೂ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತೆ ತನಿಖೆ ನಡೆಸುವುದಾಗಿ ರಾಗ ತೆಗೆದಿದ್ದಾರೆ. ಡಾ.ಕಫೀಲ್ ಖಾನ್‌ ಮೇಲೆ ಹೊಸ ಕೇಸುಗಳನ್ನು ಸರ್ಕಾರ ದಾಖಲಿಸಿದೆ.

ಎರಡು ದಿನ ಮುಂಚೆ ಈ ಕುರಿತು ಪ್ರತಿಕ್ರಿಯಿಸಿರುವ ಪರೇಶ್ ರಾವಲ್ “ಕ್ಷಮೆಯಾಚಿಸುವುದರಲ್ಲಿ ನಾಚಿಕೆ ಇಲ್ಲ: ಗೋರಖ್‌ಪುರದ ವೈದ್ಯ ಕಫೀಲ್ ಖಾನ್ ನನ್ನನ್ನು ಕ್ಷಮಿಸಿ” ಎಂದು ಟ್ವೀಟ್ ಮಾಡಿದ್ದರು. ಅವರು ಕಫೀಲ್ ಖಾನ್‌ ಮೇಲೆ ಆರೋಪ ಬಂದಾಗ ದೇಶದ್ರೋಹಿ ಎಂದು ನಿಂದಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾ.ಕಫೀಲ್, ಪ್ರಕರಣದಲ್ಲಿ ಮುಕ್ತಿ ಸಿಕ್ಕಿದ್ದರಿಂದ ತುಂಬಾ ಸಂತೋಷವಾಗಿದೆ. ನನ್ನ ಕುಟುಂಬ ಮತ್ತು ಕಠಿಣ ಪರಿಶ್ರಮದಿಂದ ಸಂಕಷ್ಟದಿಂದ ಪಾರಾಗಿದ್ದೇನೆ. ದೇವರಿಗೆ ಕೃತಜ್ಞನಾಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಕೊಲೆಗಾರ ಎಂದು ಯಾರು ಹಣೆಪಟ್ಟಿ ಕಟ್ಟಿದ್ದರೋ ಅವರಿಗೆ ತಕ್ಕ ಉತ್ತರ ಸಿಕ್ಕಿದೆ. ಆದರೆ ಇದನ್ನು ಸಹಿಸಿಕೊಳ್ಳದೇ ಮತ್ತೆ ವಿಚಾರಣೆಯ ಮಾತಾಡುತ್ತಿದ್ದಾರೆ. ಸತ್ಯ ನನ್ನ ಪರವಾಗಿರುವುದರಿಂದ ನಾನು ಹೆದರುವುದಿಲ್ಲ ಎಂದಿದ್ದಾರೆ.

ಇದು ಕೇವಲ ಡಾ.ಕಫೀಲ್ ಖಾನ್ ಗೆ ಸಂಬಂಧಿಸಿದ್ದಲ್ಲ, ಆಕ್ಸಿಜನ್ ಸಿಲಿಂಡರ್ ಕೊರತೆಯಿಂದ ತಾಯಂದಿರ ಎದುರೇ ಜೀವಬಿಟ್ಟ 70 ಮಕ್ಕಳ ದುರಂತ ರಾತ್ರಿ. ನನಗೆ ಇನ್ನೂ ಆ ಕರಾಳ ರಾತ್ರಿ ಕಣ್ಣ ಮುಂದಿದೆ. ತಮ್ಮ ಮಕ್ಕಳನ್ನು ಬದುಕಿಸಿ ಕೊಡುವಂತೆ ತಾಯಂದಿರು ಗೋಗರೆಯುತ್ತಿದ್ದರು ಆದರೆ ನಾವು ಅಸಹಾಯಕರಾಗಿದ್ದೆವು. ಒಂದೇ ಒಂದು ಸಿಲಿಂಡರ್ ಇತ್ತು ಹೀಗಾಗಿ ಮಕ್ಕಳನ್ನು ಕಳೆದುಕೊಂಡೆವು ಎಂದು ಘಟನೆಯನ್ನು ನೆನೆದರು.

ಇನ್ನು ಜೈಲುವಾಸವಂತೂ ಘೋರವಾಗಿತ್ತು. ಜೈಲಿನಲ್ಲಿ ಕಳೆದ ದಿನಗಳು ನರಕಮಯವಾಗಿದ್ದವು. ದಿನವೂ ಒಂದೇ ತರಹದ ಆಹಾರ ಸಿಗುತ್ತಿತ್ತು. ರೋಟಿ, ಮೂಲಂಗಿ ಪಲ್ಯ ಕೊಡುತ್ತಿದ್ದರು. ರೊಟ್ಟಿಯನ್ನು ನೀರಿನಲ್ಲಿ ಅದ್ದಿ ತಿನ್ನುತ್ತಿದ್ದೆ. ನಾನು ರಿಲೀಸ್ ಆದಾಗ ನನ್ನ ಮಗಳು ನನ್ನನ್ನು ಗುರುತಿಸಲಿಲ್ಲ ಎಂದು ಹೇಳಿದರು.

ಕಳೆದ ವರ್ಷ ಆಗಸ್ಟ್ 10 ಮತ್ತು 12ನೇ ತಾರೀಕಿನಂದು ಉತ್ತರಪ್ರದೇಶದ ಗೋರಖ್ ಪುರ ಬಿಆರ್ ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಇಲ್ಲದೇ ಸುಮಾರು 70 ಮಕ್ಕಳು ಅಸುನೀಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...