Homeಮುಖಪುಟಬಿಆರ್‌ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ದುರಂತ: ಡಾ.ಕಫೀಲ್ ಖಾನ್ ಆರೋಪಮುಕ್ತ. ಆದರೆ...

ಬಿಆರ್‌ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ದುರಂತ: ಡಾ.ಕಫೀಲ್ ಖಾನ್ ಆರೋಪಮುಕ್ತ. ಆದರೆ…

- Advertisement -
- Advertisement -

2017ರಲ್ಲಿ ಗೋರಖ್ ಪುರದ ಬಿಆರ್ ಡಿ ವೈದ್ಯಕೀಯ ಆಸ್ಪತ್ರೆ ದುರಂತ ಪ್ರಕರಣದಲ್ಲಿ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದ ಡಾ.ಕಫೀಲ್ ಖಾನ್ ಗೆ ಕೊನೆಗೂ ನ್ಯಾಯ ಸಿಕ್ಕಿದೆ. ಸರ್ಕಾರದ ನೇತೃತ್ವದ ತನಿಖೆಯಿಂದ ಮುಕ್ತಗೊಳಿಸಲಾಗಿದೆ. ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಡಾ.ಕಫೀಲ್ ಅವರ ಮೇಲಿತ್ತು.

ಆದರೂ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮತ್ತೆ ತನಿಖೆ ನಡೆಸುವುದಾಗಿ ರಾಗ ತೆಗೆದಿದ್ದಾರೆ. ಡಾ.ಕಫೀಲ್ ಖಾನ್‌ ಮೇಲೆ ಹೊಸ ಕೇಸುಗಳನ್ನು ಸರ್ಕಾರ ದಾಖಲಿಸಿದೆ.

ಎರಡು ದಿನ ಮುಂಚೆ ಈ ಕುರಿತು ಪ್ರತಿಕ್ರಿಯಿಸಿರುವ ಪರೇಶ್ ರಾವಲ್ “ಕ್ಷಮೆಯಾಚಿಸುವುದರಲ್ಲಿ ನಾಚಿಕೆ ಇಲ್ಲ: ಗೋರಖ್‌ಪುರದ ವೈದ್ಯ ಕಫೀಲ್ ಖಾನ್ ನನ್ನನ್ನು ಕ್ಷಮಿಸಿ” ಎಂದು ಟ್ವೀಟ್ ಮಾಡಿದ್ದರು. ಅವರು ಕಫೀಲ್ ಖಾನ್‌ ಮೇಲೆ ಆರೋಪ ಬಂದಾಗ ದೇಶದ್ರೋಹಿ ಎಂದು ನಿಂದಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾ.ಕಫೀಲ್, ಪ್ರಕರಣದಲ್ಲಿ ಮುಕ್ತಿ ಸಿಕ್ಕಿದ್ದರಿಂದ ತುಂಬಾ ಸಂತೋಷವಾಗಿದೆ. ನನ್ನ ಕುಟುಂಬ ಮತ್ತು ಕಠಿಣ ಪರಿಶ್ರಮದಿಂದ ಸಂಕಷ್ಟದಿಂದ ಪಾರಾಗಿದ್ದೇನೆ. ದೇವರಿಗೆ ಕೃತಜ್ಞನಾಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಕೊಲೆಗಾರ ಎಂದು ಯಾರು ಹಣೆಪಟ್ಟಿ ಕಟ್ಟಿದ್ದರೋ ಅವರಿಗೆ ತಕ್ಕ ಉತ್ತರ ಸಿಕ್ಕಿದೆ. ಆದರೆ ಇದನ್ನು ಸಹಿಸಿಕೊಳ್ಳದೇ ಮತ್ತೆ ವಿಚಾರಣೆಯ ಮಾತಾಡುತ್ತಿದ್ದಾರೆ. ಸತ್ಯ ನನ್ನ ಪರವಾಗಿರುವುದರಿಂದ ನಾನು ಹೆದರುವುದಿಲ್ಲ ಎಂದಿದ್ದಾರೆ.

ಇದು ಕೇವಲ ಡಾ.ಕಫೀಲ್ ಖಾನ್ ಗೆ ಸಂಬಂಧಿಸಿದ್ದಲ್ಲ, ಆಕ್ಸಿಜನ್ ಸಿಲಿಂಡರ್ ಕೊರತೆಯಿಂದ ತಾಯಂದಿರ ಎದುರೇ ಜೀವಬಿಟ್ಟ 70 ಮಕ್ಕಳ ದುರಂತ ರಾತ್ರಿ. ನನಗೆ ಇನ್ನೂ ಆ ಕರಾಳ ರಾತ್ರಿ ಕಣ್ಣ ಮುಂದಿದೆ. ತಮ್ಮ ಮಕ್ಕಳನ್ನು ಬದುಕಿಸಿ ಕೊಡುವಂತೆ ತಾಯಂದಿರು ಗೋಗರೆಯುತ್ತಿದ್ದರು ಆದರೆ ನಾವು ಅಸಹಾಯಕರಾಗಿದ್ದೆವು. ಒಂದೇ ಒಂದು ಸಿಲಿಂಡರ್ ಇತ್ತು ಹೀಗಾಗಿ ಮಕ್ಕಳನ್ನು ಕಳೆದುಕೊಂಡೆವು ಎಂದು ಘಟನೆಯನ್ನು ನೆನೆದರು.

ಇನ್ನು ಜೈಲುವಾಸವಂತೂ ಘೋರವಾಗಿತ್ತು. ಜೈಲಿನಲ್ಲಿ ಕಳೆದ ದಿನಗಳು ನರಕಮಯವಾಗಿದ್ದವು. ದಿನವೂ ಒಂದೇ ತರಹದ ಆಹಾರ ಸಿಗುತ್ತಿತ್ತು. ರೋಟಿ, ಮೂಲಂಗಿ ಪಲ್ಯ ಕೊಡುತ್ತಿದ್ದರು. ರೊಟ್ಟಿಯನ್ನು ನೀರಿನಲ್ಲಿ ಅದ್ದಿ ತಿನ್ನುತ್ತಿದ್ದೆ. ನಾನು ರಿಲೀಸ್ ಆದಾಗ ನನ್ನ ಮಗಳು ನನ್ನನ್ನು ಗುರುತಿಸಲಿಲ್ಲ ಎಂದು ಹೇಳಿದರು.

ಕಳೆದ ವರ್ಷ ಆಗಸ್ಟ್ 10 ಮತ್ತು 12ನೇ ತಾರೀಕಿನಂದು ಉತ್ತರಪ್ರದೇಶದ ಗೋರಖ್ ಪುರ ಬಿಆರ್ ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಇಲ್ಲದೇ ಸುಮಾರು 70 ಮಕ್ಕಳು ಅಸುನೀಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...