Homeಕರ್ನಾಟಕಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ 'ಗೊರುಕನ 1974' ನೋಡಿ

ಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ ‘ಗೊರುಕನ 1974’ ನೋಡಿ

ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

- Advertisement -
- Advertisement -

ನಮ್ಮೊಳಗೇ ಇರುವ ಅಭಿವೃದ್ಧಿ ಎಂಬ ಭ್ರಮೆ ಅಥವಾ ಪರಿಕಲ್ಪನೆಯನ್ನು ಅರ್ಥಹೀನಗೊಳಿಸಿದರ ಫಲವಾಗಿಯೇ ನಾವು ವಿನಾಶದ ಅಂಚಿಗೆ ತಲುಪಿದ್ದೇವೆ. ಈ ನಮ್ಮ ಜೀವ ಜಗತ್ತು ಆಧುನಿಕತೆಯ ಓಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಾವು ಜೀವಸೆಲೆಯನ್ನು ಕಳಕೊಂಡು ಯಾಂತ್ರಿಕವಾಗುತ್ತಿದ್ದೇವೆ. ಸಂವೇದನೆಗಳನ್ನೇ ಕಳೆದುಕೊಂಡ ಮೆಷಿನ್ ಗಳಾಗುತ್ತಿದ್ದೇವೆ. ಇಡೀ ಮಾನವ ಕುಲವೇ ಒಬ್ಬರೊಬ್ಬರ ಕೈಹಿಡಿದು ಜತೆ ಜತೆಯಾಗಿ ವಿಶ್ವಪಥದಲ್ಲಿ ಸಾಗುವುದನ್ನು ಮರೆತಿದ್ದೇವೆ. ತಂತ್ರಜ್ಞಾನ ಬಳಸಿ ನಾವು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುತ್ತಿದ್ದೇವೆಯೇ ಹೊರತು ಹೃದಯಗಳನ್ನು, ಮನಸ್ಸುಗಳನ್ನು ತಲುಪುತ್ತಿಲ್ಲ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕುಂಟು. ಇದಕ್ಕೆ ಯಾವುದೇ ಕಾನೂನಿನ ತೊಡಕುಗಳೂ ಆಗಬಾರದು. ಆದರೆ ನಾವೇ ಕಟ್ಟಿಕೊಂಡ ವ್ಯವಸ್ಥೆ ನಮ್ಮವರನ್ನೇ ಅಂತ್ಯ ಕಾಣಿಸಹೊರಟಿರುವುದು ದುರಂತದ ಪರಮಾವಧಿ..‌

ಇಷ್ಟೆಲ್ಲಾ ಪೀಠಿಕೆಗೆ ಕಾರಣ…? ತಮ್ಮ ತಪ್ಪಿಲ್ಲದ, ತಮ್ಮ ಅರಿವಿನ ಪರಿದಿಗೇ ಬಾರದ ಕಾನೂನಿನ ಬಲೆಯಲ್ಲಿ ಬಲಿಯಾಗಿ, ನಮ್ಮ ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

ಕೆ ಟಿ ವಿಜಯ್ ಕುಮರ್

ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಕಾಡುಗಳಲ್ಲಿ ಪರಂಪರಾನುಗತವಾಗಿ ವಾಸಿಸುತ್ತಾ, ಕಾಡಲ್ಲಿ ಕಾಡಾಗಿ ಬೆರೆತು ಕಾಡಿನ ಭಾಗವಾಗಿಯೇ ಆಗಿಹೋಗಿದ್ದ ಈ ಸಮುದಾಯದ ಸಂಸ್ಕೃತಿಯೇ ಪ್ರಕೃತಿಯ ಆರಾಧನೆ. ಬದುಕಿನ ಪ್ರತಿಕ್ಷಣದಲ್ಲೂ ಹಸಿರನ್ನು ಉಸಿರಾಗಿಸಿಕೊಂಡು ಜೀವಿಸುತ್ತಿದ್ದ ಈ ಸಮುದಾಯವು ಸರ್ಕಾರದ ಅಂಧಾ ಕಾನೂನೊಂದರ ಅನ್ವಯ ಕಾಡಿನ ಅಂಚಿಗೆ ದೂಡಲ್ವಡುತ್ತಾರೆ!? ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕು ಸಾಗಿಸುತ್ತಿದ್ದ ಸೋಲಿಗರ ನೆಮ್ಮದಿಯನ್ನು ಕೆಡಿಸಿ, ತಮ್ಮ ಕಾಡಲ್ಲಿ ತಮಗೇ ಉಳಿಯುವ ಹಕ್ಕು ಮತ್ತು ಸ್ವಾತಂತ್ರವಿಲ್ಲದಂತೆ ಮಾಡಿ ಮುಂದೆಂದೂ ಕಾಡಿಗೆ ಪ್ರವೇಶಿಸದಂತೆ ಸರ್ಕಾರ ನಿಷೇಧ ಹೇರಿತು. ಈ ನಿಷೇಧ ಸೋಲಿಗರ ಬದುಕನ್ನೇ ನಾಶವಾಗಿಸಿತು, ಅವರ ಸ್ವಚ್ಚಂದ ಜೀವನಾದಾರವನ್ನೇ ಕಸಿಯಿತು. ಬದುಕಲು ಬೇಕಾದ ಮೂಲಭೂತ ಅಗತ್ಯತೆಗಳನ್ನೇ ಸರ್ಕಾರ ಪೂರೈಸದೇ ಹೋದದ್ದು, ಕೊಳ್ಳುಬಾಕರ ಕಾಲಡಿಯಲ್ಲಿ ಸಿಲುಕಿ ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಲಾಗದೆ ಅತಂತ್ರಗೊಂಡ ಸೋಲಿಗರು ಶೋಚನೀಯ ಸ್ಥಿತಿಯಲ್ಲಿ ಈಗಲೂ ಬದುಕುತಿದ್ದಾರೆ, ಕಾಲ ತಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ತಲೆತಗ್ಗಿಸುವಂತೆ ಮಾಡಿದೆ.

ಡಿಂಗ್ರಿ ನರೇಶ್

ಸಮಾಜದಿಂದ ಕಡೆಗಣಿಸಲ್ಪಟ್ಟ ಈ ಸೋಲಿಗರ ಮತ್ತು ಇಂತದ್ದೇ ಶೋಷಣೆಗೊಳಗಾದವರ ಪರ ನ್ಯಾಯಕ್ಕಾಗಿ ಬೆಂಗಳೂರಿನ ಡಾ ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಸಂಘ ಕೃಷಿ ವಿಶ್ವವಿದ್ಯಾಲಯ(ಜಿಕೆವಿಕೆ) ಬೆಂಗಳೂರು ಗೊರುಕನ 1974 ನಾಟಕವನ್ನು ಸಿದ್ದಗೊಳಿಸಿ ಪ್ರದರ್ಶಿಸಲು ಮುಂದಾಗಿದೆ. ಡಾ ಕೆ.ಟಿ ವಿಜಯ್ ಕುಮಾರ್ ರವರ ಸೋಲಿಗರ ಬದುಕು ಬವಣೆಯ ಕುರಿತು ನಡೆಸಿದ ಸಂಶೋಧನೆಯ ಆಧಾರದ ಮೇಲೆ ರಂಗಕರ್ಮಿ ರಂಗನಾಥ ನೀನಾಸಂ ಕಥೆ ಹೆಣೆದು ನಾಟಕವಾಗಿ ರಚಿಸಿದ್ದಾರೆ, ಸದಾ ಶೋಷಣೆಯ ವಿರುದ್ದದ ದನಿಯಾಗಿ ರಂಗಕಾಯಕ ನಡೆಸುತ್ತಿರುವ ರಂಗಕರ್ಮಿ ಡಿಂಗ್ರಿ ನರೇಶ್ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕಕ್ಕೆ ಪೂರಕವಾಗಿ ಸಂಗೀತವನ್ನು ಸೂಕ್ಷ್ಮವಾಗಿ ಸಂಯೋಜಿಸಿದ್ದಾರೆ ರಾಘವ ಕಮ್ಮಾರ್. ಪಕ್ಕವಾದ್ಯದಲ್ಲಿ ಡಿಂಗ್ರಿ ಭರತ್ ಸಂಗೀತಕ್ಕೆ ಜತೆಗೂಡಿಸಿದ್ದಾರೆ. ಜಯರಾಮ್ ನೀನಾಸಂ ನಾಟಕಕ್ಕೆ ಬೆಳಕಿನ ವಿನ್ಯಾಸ ಮಾಡಿ ನಾಟಕಕ್ಕೆ ಬೆಳಕಾಗಿದ್ದಾರೆ. ಈ ನಾಟಕವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಭಿನಯಿಸುತ್ತಿರುವುದು ವಿಶೇಷ. ಯುವಕರೇ ಪ್ರಧಾನವಾಗಿರುವ ತಂಡವು ಪ್ರತಿಭೆಯಿಂದ ಕೂಡಿದ್ದು, ಸ್ವಸ್ಥ ಸಮಾಜವನ್ನು ಕಟ್ಟಲು ಕೈಜೋಡಿಸಿದ್ದಾರೆ. ಈ ನಾಟಕ 2019 ರ ಮೇ 31 ರಂದು ಸಂಜೆ 6 ಕ್ಕೆ ಕುವೆಂಪು ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಸಮಾಜಮುಖಯಾಗಿ ಯೋಚಿಸುವ ಯುವತಂಡ ಅಭಿನಯಿಸುವ ಈ ನಾಟಕ ನೋಡಲು ಅಥವಾ ಬೇರೆ ಕಡೆ ಪ್ರದರ್ಶಿಸ ಬಯಸುವವರು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರಾಗಿ ಡಿಂಗ್ರಿ ನರೇಶ್ 8197707198 ಇವರನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....