Homeಕರ್ನಾಟಕಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ 'ಗೊರುಕನ 1974' ನೋಡಿ

ಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ ‘ಗೊರುಕನ 1974’ ನೋಡಿ

ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

- Advertisement -
- Advertisement -

ನಮ್ಮೊಳಗೇ ಇರುವ ಅಭಿವೃದ್ಧಿ ಎಂಬ ಭ್ರಮೆ ಅಥವಾ ಪರಿಕಲ್ಪನೆಯನ್ನು ಅರ್ಥಹೀನಗೊಳಿಸಿದರ ಫಲವಾಗಿಯೇ ನಾವು ವಿನಾಶದ ಅಂಚಿಗೆ ತಲುಪಿದ್ದೇವೆ. ಈ ನಮ್ಮ ಜೀವ ಜಗತ್ತು ಆಧುನಿಕತೆಯ ಓಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಾವು ಜೀವಸೆಲೆಯನ್ನು ಕಳಕೊಂಡು ಯಾಂತ್ರಿಕವಾಗುತ್ತಿದ್ದೇವೆ. ಸಂವೇದನೆಗಳನ್ನೇ ಕಳೆದುಕೊಂಡ ಮೆಷಿನ್ ಗಳಾಗುತ್ತಿದ್ದೇವೆ. ಇಡೀ ಮಾನವ ಕುಲವೇ ಒಬ್ಬರೊಬ್ಬರ ಕೈಹಿಡಿದು ಜತೆ ಜತೆಯಾಗಿ ವಿಶ್ವಪಥದಲ್ಲಿ ಸಾಗುವುದನ್ನು ಮರೆತಿದ್ದೇವೆ. ತಂತ್ರಜ್ಞಾನ ಬಳಸಿ ನಾವು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುತ್ತಿದ್ದೇವೆಯೇ ಹೊರತು ಹೃದಯಗಳನ್ನು, ಮನಸ್ಸುಗಳನ್ನು ತಲುಪುತ್ತಿಲ್ಲ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕುಂಟು. ಇದಕ್ಕೆ ಯಾವುದೇ ಕಾನೂನಿನ ತೊಡಕುಗಳೂ ಆಗಬಾರದು. ಆದರೆ ನಾವೇ ಕಟ್ಟಿಕೊಂಡ ವ್ಯವಸ್ಥೆ ನಮ್ಮವರನ್ನೇ ಅಂತ್ಯ ಕಾಣಿಸಹೊರಟಿರುವುದು ದುರಂತದ ಪರಮಾವಧಿ..‌

ಇಷ್ಟೆಲ್ಲಾ ಪೀಠಿಕೆಗೆ ಕಾರಣ…? ತಮ್ಮ ತಪ್ಪಿಲ್ಲದ, ತಮ್ಮ ಅರಿವಿನ ಪರಿದಿಗೇ ಬಾರದ ಕಾನೂನಿನ ಬಲೆಯಲ್ಲಿ ಬಲಿಯಾಗಿ, ನಮ್ಮ ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

ಕೆ ಟಿ ವಿಜಯ್ ಕುಮರ್

ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಕಾಡುಗಳಲ್ಲಿ ಪರಂಪರಾನುಗತವಾಗಿ ವಾಸಿಸುತ್ತಾ, ಕಾಡಲ್ಲಿ ಕಾಡಾಗಿ ಬೆರೆತು ಕಾಡಿನ ಭಾಗವಾಗಿಯೇ ಆಗಿಹೋಗಿದ್ದ ಈ ಸಮುದಾಯದ ಸಂಸ್ಕೃತಿಯೇ ಪ್ರಕೃತಿಯ ಆರಾಧನೆ. ಬದುಕಿನ ಪ್ರತಿಕ್ಷಣದಲ್ಲೂ ಹಸಿರನ್ನು ಉಸಿರಾಗಿಸಿಕೊಂಡು ಜೀವಿಸುತ್ತಿದ್ದ ಈ ಸಮುದಾಯವು ಸರ್ಕಾರದ ಅಂಧಾ ಕಾನೂನೊಂದರ ಅನ್ವಯ ಕಾಡಿನ ಅಂಚಿಗೆ ದೂಡಲ್ವಡುತ್ತಾರೆ!? ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕು ಸಾಗಿಸುತ್ತಿದ್ದ ಸೋಲಿಗರ ನೆಮ್ಮದಿಯನ್ನು ಕೆಡಿಸಿ, ತಮ್ಮ ಕಾಡಲ್ಲಿ ತಮಗೇ ಉಳಿಯುವ ಹಕ್ಕು ಮತ್ತು ಸ್ವಾತಂತ್ರವಿಲ್ಲದಂತೆ ಮಾಡಿ ಮುಂದೆಂದೂ ಕಾಡಿಗೆ ಪ್ರವೇಶಿಸದಂತೆ ಸರ್ಕಾರ ನಿಷೇಧ ಹೇರಿತು. ಈ ನಿಷೇಧ ಸೋಲಿಗರ ಬದುಕನ್ನೇ ನಾಶವಾಗಿಸಿತು, ಅವರ ಸ್ವಚ್ಚಂದ ಜೀವನಾದಾರವನ್ನೇ ಕಸಿಯಿತು. ಬದುಕಲು ಬೇಕಾದ ಮೂಲಭೂತ ಅಗತ್ಯತೆಗಳನ್ನೇ ಸರ್ಕಾರ ಪೂರೈಸದೇ ಹೋದದ್ದು, ಕೊಳ್ಳುಬಾಕರ ಕಾಲಡಿಯಲ್ಲಿ ಸಿಲುಕಿ ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಲಾಗದೆ ಅತಂತ್ರಗೊಂಡ ಸೋಲಿಗರು ಶೋಚನೀಯ ಸ್ಥಿತಿಯಲ್ಲಿ ಈಗಲೂ ಬದುಕುತಿದ್ದಾರೆ, ಕಾಲ ತಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ತಲೆತಗ್ಗಿಸುವಂತೆ ಮಾಡಿದೆ.

ಡಿಂಗ್ರಿ ನರೇಶ್

ಸಮಾಜದಿಂದ ಕಡೆಗಣಿಸಲ್ಪಟ್ಟ ಈ ಸೋಲಿಗರ ಮತ್ತು ಇಂತದ್ದೇ ಶೋಷಣೆಗೊಳಗಾದವರ ಪರ ನ್ಯಾಯಕ್ಕಾಗಿ ಬೆಂಗಳೂರಿನ ಡಾ ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಸಂಘ ಕೃಷಿ ವಿಶ್ವವಿದ್ಯಾಲಯ(ಜಿಕೆವಿಕೆ) ಬೆಂಗಳೂರು ಗೊರುಕನ 1974 ನಾಟಕವನ್ನು ಸಿದ್ದಗೊಳಿಸಿ ಪ್ರದರ್ಶಿಸಲು ಮುಂದಾಗಿದೆ. ಡಾ ಕೆ.ಟಿ ವಿಜಯ್ ಕುಮಾರ್ ರವರ ಸೋಲಿಗರ ಬದುಕು ಬವಣೆಯ ಕುರಿತು ನಡೆಸಿದ ಸಂಶೋಧನೆಯ ಆಧಾರದ ಮೇಲೆ ರಂಗಕರ್ಮಿ ರಂಗನಾಥ ನೀನಾಸಂ ಕಥೆ ಹೆಣೆದು ನಾಟಕವಾಗಿ ರಚಿಸಿದ್ದಾರೆ, ಸದಾ ಶೋಷಣೆಯ ವಿರುದ್ದದ ದನಿಯಾಗಿ ರಂಗಕಾಯಕ ನಡೆಸುತ್ತಿರುವ ರಂಗಕರ್ಮಿ ಡಿಂಗ್ರಿ ನರೇಶ್ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕಕ್ಕೆ ಪೂರಕವಾಗಿ ಸಂಗೀತವನ್ನು ಸೂಕ್ಷ್ಮವಾಗಿ ಸಂಯೋಜಿಸಿದ್ದಾರೆ ರಾಘವ ಕಮ್ಮಾರ್. ಪಕ್ಕವಾದ್ಯದಲ್ಲಿ ಡಿಂಗ್ರಿ ಭರತ್ ಸಂಗೀತಕ್ಕೆ ಜತೆಗೂಡಿಸಿದ್ದಾರೆ. ಜಯರಾಮ್ ನೀನಾಸಂ ನಾಟಕಕ್ಕೆ ಬೆಳಕಿನ ವಿನ್ಯಾಸ ಮಾಡಿ ನಾಟಕಕ್ಕೆ ಬೆಳಕಾಗಿದ್ದಾರೆ. ಈ ನಾಟಕವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಭಿನಯಿಸುತ್ತಿರುವುದು ವಿಶೇಷ. ಯುವಕರೇ ಪ್ರಧಾನವಾಗಿರುವ ತಂಡವು ಪ್ರತಿಭೆಯಿಂದ ಕೂಡಿದ್ದು, ಸ್ವಸ್ಥ ಸಮಾಜವನ್ನು ಕಟ್ಟಲು ಕೈಜೋಡಿಸಿದ್ದಾರೆ. ಈ ನಾಟಕ 2019 ರ ಮೇ 31 ರಂದು ಸಂಜೆ 6 ಕ್ಕೆ ಕುವೆಂಪು ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಸಮಾಜಮುಖಯಾಗಿ ಯೋಚಿಸುವ ಯುವತಂಡ ಅಭಿನಯಿಸುವ ಈ ನಾಟಕ ನೋಡಲು ಅಥವಾ ಬೇರೆ ಕಡೆ ಪ್ರದರ್ಶಿಸ ಬಯಸುವವರು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರಾಗಿ ಡಿಂಗ್ರಿ ನರೇಶ್ 8197707198 ಇವರನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...