Homeಕರ್ನಾಟಕಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ 'ಗೊರುಕನ 1974' ನೋಡಿ

ಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ ‘ಗೊರುಕನ 1974’ ನೋಡಿ

ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

- Advertisement -
- Advertisement -

ನಮ್ಮೊಳಗೇ ಇರುವ ಅಭಿವೃದ್ಧಿ ಎಂಬ ಭ್ರಮೆ ಅಥವಾ ಪರಿಕಲ್ಪನೆಯನ್ನು ಅರ್ಥಹೀನಗೊಳಿಸಿದರ ಫಲವಾಗಿಯೇ ನಾವು ವಿನಾಶದ ಅಂಚಿಗೆ ತಲುಪಿದ್ದೇವೆ. ಈ ನಮ್ಮ ಜೀವ ಜಗತ್ತು ಆಧುನಿಕತೆಯ ಓಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಾವು ಜೀವಸೆಲೆಯನ್ನು ಕಳಕೊಂಡು ಯಾಂತ್ರಿಕವಾಗುತ್ತಿದ್ದೇವೆ. ಸಂವೇದನೆಗಳನ್ನೇ ಕಳೆದುಕೊಂಡ ಮೆಷಿನ್ ಗಳಾಗುತ್ತಿದ್ದೇವೆ. ಇಡೀ ಮಾನವ ಕುಲವೇ ಒಬ್ಬರೊಬ್ಬರ ಕೈಹಿಡಿದು ಜತೆ ಜತೆಯಾಗಿ ವಿಶ್ವಪಥದಲ್ಲಿ ಸಾಗುವುದನ್ನು ಮರೆತಿದ್ದೇವೆ. ತಂತ್ರಜ್ಞಾನ ಬಳಸಿ ನಾವು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುತ್ತಿದ್ದೇವೆಯೇ ಹೊರತು ಹೃದಯಗಳನ್ನು, ಮನಸ್ಸುಗಳನ್ನು ತಲುಪುತ್ತಿಲ್ಲ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕುಂಟು. ಇದಕ್ಕೆ ಯಾವುದೇ ಕಾನೂನಿನ ತೊಡಕುಗಳೂ ಆಗಬಾರದು. ಆದರೆ ನಾವೇ ಕಟ್ಟಿಕೊಂಡ ವ್ಯವಸ್ಥೆ ನಮ್ಮವರನ್ನೇ ಅಂತ್ಯ ಕಾಣಿಸಹೊರಟಿರುವುದು ದುರಂತದ ಪರಮಾವಧಿ..‌

ಇಷ್ಟೆಲ್ಲಾ ಪೀಠಿಕೆಗೆ ಕಾರಣ…? ತಮ್ಮ ತಪ್ಪಿಲ್ಲದ, ತಮ್ಮ ಅರಿವಿನ ಪರಿದಿಗೇ ಬಾರದ ಕಾನೂನಿನ ಬಲೆಯಲ್ಲಿ ಬಲಿಯಾಗಿ, ನಮ್ಮ ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

ಕೆ ಟಿ ವಿಜಯ್ ಕುಮರ್

ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಕಾಡುಗಳಲ್ಲಿ ಪರಂಪರಾನುಗತವಾಗಿ ವಾಸಿಸುತ್ತಾ, ಕಾಡಲ್ಲಿ ಕಾಡಾಗಿ ಬೆರೆತು ಕಾಡಿನ ಭಾಗವಾಗಿಯೇ ಆಗಿಹೋಗಿದ್ದ ಈ ಸಮುದಾಯದ ಸಂಸ್ಕೃತಿಯೇ ಪ್ರಕೃತಿಯ ಆರಾಧನೆ. ಬದುಕಿನ ಪ್ರತಿಕ್ಷಣದಲ್ಲೂ ಹಸಿರನ್ನು ಉಸಿರಾಗಿಸಿಕೊಂಡು ಜೀವಿಸುತ್ತಿದ್ದ ಈ ಸಮುದಾಯವು ಸರ್ಕಾರದ ಅಂಧಾ ಕಾನೂನೊಂದರ ಅನ್ವಯ ಕಾಡಿನ ಅಂಚಿಗೆ ದೂಡಲ್ವಡುತ್ತಾರೆ!? ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕು ಸಾಗಿಸುತ್ತಿದ್ದ ಸೋಲಿಗರ ನೆಮ್ಮದಿಯನ್ನು ಕೆಡಿಸಿ, ತಮ್ಮ ಕಾಡಲ್ಲಿ ತಮಗೇ ಉಳಿಯುವ ಹಕ್ಕು ಮತ್ತು ಸ್ವಾತಂತ್ರವಿಲ್ಲದಂತೆ ಮಾಡಿ ಮುಂದೆಂದೂ ಕಾಡಿಗೆ ಪ್ರವೇಶಿಸದಂತೆ ಸರ್ಕಾರ ನಿಷೇಧ ಹೇರಿತು. ಈ ನಿಷೇಧ ಸೋಲಿಗರ ಬದುಕನ್ನೇ ನಾಶವಾಗಿಸಿತು, ಅವರ ಸ್ವಚ್ಚಂದ ಜೀವನಾದಾರವನ್ನೇ ಕಸಿಯಿತು. ಬದುಕಲು ಬೇಕಾದ ಮೂಲಭೂತ ಅಗತ್ಯತೆಗಳನ್ನೇ ಸರ್ಕಾರ ಪೂರೈಸದೇ ಹೋದದ್ದು, ಕೊಳ್ಳುಬಾಕರ ಕಾಲಡಿಯಲ್ಲಿ ಸಿಲುಕಿ ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಲಾಗದೆ ಅತಂತ್ರಗೊಂಡ ಸೋಲಿಗರು ಶೋಚನೀಯ ಸ್ಥಿತಿಯಲ್ಲಿ ಈಗಲೂ ಬದುಕುತಿದ್ದಾರೆ, ಕಾಲ ತಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ತಲೆತಗ್ಗಿಸುವಂತೆ ಮಾಡಿದೆ.

ಡಿಂಗ್ರಿ ನರೇಶ್

ಸಮಾಜದಿಂದ ಕಡೆಗಣಿಸಲ್ಪಟ್ಟ ಈ ಸೋಲಿಗರ ಮತ್ತು ಇಂತದ್ದೇ ಶೋಷಣೆಗೊಳಗಾದವರ ಪರ ನ್ಯಾಯಕ್ಕಾಗಿ ಬೆಂಗಳೂರಿನ ಡಾ ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಸಂಘ ಕೃಷಿ ವಿಶ್ವವಿದ್ಯಾಲಯ(ಜಿಕೆವಿಕೆ) ಬೆಂಗಳೂರು ಗೊರುಕನ 1974 ನಾಟಕವನ್ನು ಸಿದ್ದಗೊಳಿಸಿ ಪ್ರದರ್ಶಿಸಲು ಮುಂದಾಗಿದೆ. ಡಾ ಕೆ.ಟಿ ವಿಜಯ್ ಕುಮಾರ್ ರವರ ಸೋಲಿಗರ ಬದುಕು ಬವಣೆಯ ಕುರಿತು ನಡೆಸಿದ ಸಂಶೋಧನೆಯ ಆಧಾರದ ಮೇಲೆ ರಂಗಕರ್ಮಿ ರಂಗನಾಥ ನೀನಾಸಂ ಕಥೆ ಹೆಣೆದು ನಾಟಕವಾಗಿ ರಚಿಸಿದ್ದಾರೆ, ಸದಾ ಶೋಷಣೆಯ ವಿರುದ್ದದ ದನಿಯಾಗಿ ರಂಗಕಾಯಕ ನಡೆಸುತ್ತಿರುವ ರಂಗಕರ್ಮಿ ಡಿಂಗ್ರಿ ನರೇಶ್ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕಕ್ಕೆ ಪೂರಕವಾಗಿ ಸಂಗೀತವನ್ನು ಸೂಕ್ಷ್ಮವಾಗಿ ಸಂಯೋಜಿಸಿದ್ದಾರೆ ರಾಘವ ಕಮ್ಮಾರ್. ಪಕ್ಕವಾದ್ಯದಲ್ಲಿ ಡಿಂಗ್ರಿ ಭರತ್ ಸಂಗೀತಕ್ಕೆ ಜತೆಗೂಡಿಸಿದ್ದಾರೆ. ಜಯರಾಮ್ ನೀನಾಸಂ ನಾಟಕಕ್ಕೆ ಬೆಳಕಿನ ವಿನ್ಯಾಸ ಮಾಡಿ ನಾಟಕಕ್ಕೆ ಬೆಳಕಾಗಿದ್ದಾರೆ. ಈ ನಾಟಕವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಭಿನಯಿಸುತ್ತಿರುವುದು ವಿಶೇಷ. ಯುವಕರೇ ಪ್ರಧಾನವಾಗಿರುವ ತಂಡವು ಪ್ರತಿಭೆಯಿಂದ ಕೂಡಿದ್ದು, ಸ್ವಸ್ಥ ಸಮಾಜವನ್ನು ಕಟ್ಟಲು ಕೈಜೋಡಿಸಿದ್ದಾರೆ. ಈ ನಾಟಕ 2019 ರ ಮೇ 31 ರಂದು ಸಂಜೆ 6 ಕ್ಕೆ ಕುವೆಂಪು ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಸಮಾಜಮುಖಯಾಗಿ ಯೋಚಿಸುವ ಯುವತಂಡ ಅಭಿನಯಿಸುವ ಈ ನಾಟಕ ನೋಡಲು ಅಥವಾ ಬೇರೆ ಕಡೆ ಪ್ರದರ್ಶಿಸ ಬಯಸುವವರು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರಾಗಿ ಡಿಂಗ್ರಿ ನರೇಶ್ 8197707198 ಇವರನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...