Homeಕರ್ನಾಟಕಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ 'ಗೊರುಕನ 1974' ನೋಡಿ

ಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ ‘ಗೊರುಕನ 1974’ ನೋಡಿ

ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

- Advertisement -
- Advertisement -

ನಮ್ಮೊಳಗೇ ಇರುವ ಅಭಿವೃದ್ಧಿ ಎಂಬ ಭ್ರಮೆ ಅಥವಾ ಪರಿಕಲ್ಪನೆಯನ್ನು ಅರ್ಥಹೀನಗೊಳಿಸಿದರ ಫಲವಾಗಿಯೇ ನಾವು ವಿನಾಶದ ಅಂಚಿಗೆ ತಲುಪಿದ್ದೇವೆ. ಈ ನಮ್ಮ ಜೀವ ಜಗತ್ತು ಆಧುನಿಕತೆಯ ಓಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಾವು ಜೀವಸೆಲೆಯನ್ನು ಕಳಕೊಂಡು ಯಾಂತ್ರಿಕವಾಗುತ್ತಿದ್ದೇವೆ. ಸಂವೇದನೆಗಳನ್ನೇ ಕಳೆದುಕೊಂಡ ಮೆಷಿನ್ ಗಳಾಗುತ್ತಿದ್ದೇವೆ. ಇಡೀ ಮಾನವ ಕುಲವೇ ಒಬ್ಬರೊಬ್ಬರ ಕೈಹಿಡಿದು ಜತೆ ಜತೆಯಾಗಿ ವಿಶ್ವಪಥದಲ್ಲಿ ಸಾಗುವುದನ್ನು ಮರೆತಿದ್ದೇವೆ. ತಂತ್ರಜ್ಞಾನ ಬಳಸಿ ನಾವು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುತ್ತಿದ್ದೇವೆಯೇ ಹೊರತು ಹೃದಯಗಳನ್ನು, ಮನಸ್ಸುಗಳನ್ನು ತಲುಪುತ್ತಿಲ್ಲ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕುಂಟು. ಇದಕ್ಕೆ ಯಾವುದೇ ಕಾನೂನಿನ ತೊಡಕುಗಳೂ ಆಗಬಾರದು. ಆದರೆ ನಾವೇ ಕಟ್ಟಿಕೊಂಡ ವ್ಯವಸ್ಥೆ ನಮ್ಮವರನ್ನೇ ಅಂತ್ಯ ಕಾಣಿಸಹೊರಟಿರುವುದು ದುರಂತದ ಪರಮಾವಧಿ..‌

ಇಷ್ಟೆಲ್ಲಾ ಪೀಠಿಕೆಗೆ ಕಾರಣ…? ತಮ್ಮ ತಪ್ಪಿಲ್ಲದ, ತಮ್ಮ ಅರಿವಿನ ಪರಿದಿಗೇ ಬಾರದ ಕಾನೂನಿನ ಬಲೆಯಲ್ಲಿ ಬಲಿಯಾಗಿ, ನಮ್ಮ ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

ಕೆ ಟಿ ವಿಜಯ್ ಕುಮರ್

ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಕಾಡುಗಳಲ್ಲಿ ಪರಂಪರಾನುಗತವಾಗಿ ವಾಸಿಸುತ್ತಾ, ಕಾಡಲ್ಲಿ ಕಾಡಾಗಿ ಬೆರೆತು ಕಾಡಿನ ಭಾಗವಾಗಿಯೇ ಆಗಿಹೋಗಿದ್ದ ಈ ಸಮುದಾಯದ ಸಂಸ್ಕೃತಿಯೇ ಪ್ರಕೃತಿಯ ಆರಾಧನೆ. ಬದುಕಿನ ಪ್ರತಿಕ್ಷಣದಲ್ಲೂ ಹಸಿರನ್ನು ಉಸಿರಾಗಿಸಿಕೊಂಡು ಜೀವಿಸುತ್ತಿದ್ದ ಈ ಸಮುದಾಯವು ಸರ್ಕಾರದ ಅಂಧಾ ಕಾನೂನೊಂದರ ಅನ್ವಯ ಕಾಡಿನ ಅಂಚಿಗೆ ದೂಡಲ್ವಡುತ್ತಾರೆ!? ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕು ಸಾಗಿಸುತ್ತಿದ್ದ ಸೋಲಿಗರ ನೆಮ್ಮದಿಯನ್ನು ಕೆಡಿಸಿ, ತಮ್ಮ ಕಾಡಲ್ಲಿ ತಮಗೇ ಉಳಿಯುವ ಹಕ್ಕು ಮತ್ತು ಸ್ವಾತಂತ್ರವಿಲ್ಲದಂತೆ ಮಾಡಿ ಮುಂದೆಂದೂ ಕಾಡಿಗೆ ಪ್ರವೇಶಿಸದಂತೆ ಸರ್ಕಾರ ನಿಷೇಧ ಹೇರಿತು. ಈ ನಿಷೇಧ ಸೋಲಿಗರ ಬದುಕನ್ನೇ ನಾಶವಾಗಿಸಿತು, ಅವರ ಸ್ವಚ್ಚಂದ ಜೀವನಾದಾರವನ್ನೇ ಕಸಿಯಿತು. ಬದುಕಲು ಬೇಕಾದ ಮೂಲಭೂತ ಅಗತ್ಯತೆಗಳನ್ನೇ ಸರ್ಕಾರ ಪೂರೈಸದೇ ಹೋದದ್ದು, ಕೊಳ್ಳುಬಾಕರ ಕಾಲಡಿಯಲ್ಲಿ ಸಿಲುಕಿ ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಲಾಗದೆ ಅತಂತ್ರಗೊಂಡ ಸೋಲಿಗರು ಶೋಚನೀಯ ಸ್ಥಿತಿಯಲ್ಲಿ ಈಗಲೂ ಬದುಕುತಿದ್ದಾರೆ, ಕಾಲ ತಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ತಲೆತಗ್ಗಿಸುವಂತೆ ಮಾಡಿದೆ.

ಡಿಂಗ್ರಿ ನರೇಶ್

ಸಮಾಜದಿಂದ ಕಡೆಗಣಿಸಲ್ಪಟ್ಟ ಈ ಸೋಲಿಗರ ಮತ್ತು ಇಂತದ್ದೇ ಶೋಷಣೆಗೊಳಗಾದವರ ಪರ ನ್ಯಾಯಕ್ಕಾಗಿ ಬೆಂಗಳೂರಿನ ಡಾ ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಸಂಘ ಕೃಷಿ ವಿಶ್ವವಿದ್ಯಾಲಯ(ಜಿಕೆವಿಕೆ) ಬೆಂಗಳೂರು ಗೊರುಕನ 1974 ನಾಟಕವನ್ನು ಸಿದ್ದಗೊಳಿಸಿ ಪ್ರದರ್ಶಿಸಲು ಮುಂದಾಗಿದೆ. ಡಾ ಕೆ.ಟಿ ವಿಜಯ್ ಕುಮಾರ್ ರವರ ಸೋಲಿಗರ ಬದುಕು ಬವಣೆಯ ಕುರಿತು ನಡೆಸಿದ ಸಂಶೋಧನೆಯ ಆಧಾರದ ಮೇಲೆ ರಂಗಕರ್ಮಿ ರಂಗನಾಥ ನೀನಾಸಂ ಕಥೆ ಹೆಣೆದು ನಾಟಕವಾಗಿ ರಚಿಸಿದ್ದಾರೆ, ಸದಾ ಶೋಷಣೆಯ ವಿರುದ್ದದ ದನಿಯಾಗಿ ರಂಗಕಾಯಕ ನಡೆಸುತ್ತಿರುವ ರಂಗಕರ್ಮಿ ಡಿಂಗ್ರಿ ನರೇಶ್ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕಕ್ಕೆ ಪೂರಕವಾಗಿ ಸಂಗೀತವನ್ನು ಸೂಕ್ಷ್ಮವಾಗಿ ಸಂಯೋಜಿಸಿದ್ದಾರೆ ರಾಘವ ಕಮ್ಮಾರ್. ಪಕ್ಕವಾದ್ಯದಲ್ಲಿ ಡಿಂಗ್ರಿ ಭರತ್ ಸಂಗೀತಕ್ಕೆ ಜತೆಗೂಡಿಸಿದ್ದಾರೆ. ಜಯರಾಮ್ ನೀನಾಸಂ ನಾಟಕಕ್ಕೆ ಬೆಳಕಿನ ವಿನ್ಯಾಸ ಮಾಡಿ ನಾಟಕಕ್ಕೆ ಬೆಳಕಾಗಿದ್ದಾರೆ. ಈ ನಾಟಕವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಭಿನಯಿಸುತ್ತಿರುವುದು ವಿಶೇಷ. ಯುವಕರೇ ಪ್ರಧಾನವಾಗಿರುವ ತಂಡವು ಪ್ರತಿಭೆಯಿಂದ ಕೂಡಿದ್ದು, ಸ್ವಸ್ಥ ಸಮಾಜವನ್ನು ಕಟ್ಟಲು ಕೈಜೋಡಿಸಿದ್ದಾರೆ. ಈ ನಾಟಕ 2019 ರ ಮೇ 31 ರಂದು ಸಂಜೆ 6 ಕ್ಕೆ ಕುವೆಂಪು ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಸಮಾಜಮುಖಯಾಗಿ ಯೋಚಿಸುವ ಯುವತಂಡ ಅಭಿನಯಿಸುವ ಈ ನಾಟಕ ನೋಡಲು ಅಥವಾ ಬೇರೆ ಕಡೆ ಪ್ರದರ್ಶಿಸ ಬಯಸುವವರು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರಾಗಿ ಡಿಂಗ್ರಿ ನರೇಶ್ 8197707198 ಇವರನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...