Homeಕರ್ನಾಟಕಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ 'ಗೊರುಕನ 1974' ನೋಡಿ

ಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ ‘ಗೊರುಕನ 1974’ ನೋಡಿ

ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

- Advertisement -
- Advertisement -

ನಮ್ಮೊಳಗೇ ಇರುವ ಅಭಿವೃದ್ಧಿ ಎಂಬ ಭ್ರಮೆ ಅಥವಾ ಪರಿಕಲ್ಪನೆಯನ್ನು ಅರ್ಥಹೀನಗೊಳಿಸಿದರ ಫಲವಾಗಿಯೇ ನಾವು ವಿನಾಶದ ಅಂಚಿಗೆ ತಲುಪಿದ್ದೇವೆ. ಈ ನಮ್ಮ ಜೀವ ಜಗತ್ತು ಆಧುನಿಕತೆಯ ಓಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಾವು ಜೀವಸೆಲೆಯನ್ನು ಕಳಕೊಂಡು ಯಾಂತ್ರಿಕವಾಗುತ್ತಿದ್ದೇವೆ. ಸಂವೇದನೆಗಳನ್ನೇ ಕಳೆದುಕೊಂಡ ಮೆಷಿನ್ ಗಳಾಗುತ್ತಿದ್ದೇವೆ. ಇಡೀ ಮಾನವ ಕುಲವೇ ಒಬ್ಬರೊಬ್ಬರ ಕೈಹಿಡಿದು ಜತೆ ಜತೆಯಾಗಿ ವಿಶ್ವಪಥದಲ್ಲಿ ಸಾಗುವುದನ್ನು ಮರೆತಿದ್ದೇವೆ. ತಂತ್ರಜ್ಞಾನ ಬಳಸಿ ನಾವು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುತ್ತಿದ್ದೇವೆಯೇ ಹೊರತು ಹೃದಯಗಳನ್ನು, ಮನಸ್ಸುಗಳನ್ನು ತಲುಪುತ್ತಿಲ್ಲ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕುಂಟು. ಇದಕ್ಕೆ ಯಾವುದೇ ಕಾನೂನಿನ ತೊಡಕುಗಳೂ ಆಗಬಾರದು. ಆದರೆ ನಾವೇ ಕಟ್ಟಿಕೊಂಡ ವ್ಯವಸ್ಥೆ ನಮ್ಮವರನ್ನೇ ಅಂತ್ಯ ಕಾಣಿಸಹೊರಟಿರುವುದು ದುರಂತದ ಪರಮಾವಧಿ..‌

ಇಷ್ಟೆಲ್ಲಾ ಪೀಠಿಕೆಗೆ ಕಾರಣ…? ತಮ್ಮ ತಪ್ಪಿಲ್ಲದ, ತಮ್ಮ ಅರಿವಿನ ಪರಿದಿಗೇ ಬಾರದ ಕಾನೂನಿನ ಬಲೆಯಲ್ಲಿ ಬಲಿಯಾಗಿ, ನಮ್ಮ ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

ಕೆ ಟಿ ವಿಜಯ್ ಕುಮರ್

ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಕಾಡುಗಳಲ್ಲಿ ಪರಂಪರಾನುಗತವಾಗಿ ವಾಸಿಸುತ್ತಾ, ಕಾಡಲ್ಲಿ ಕಾಡಾಗಿ ಬೆರೆತು ಕಾಡಿನ ಭಾಗವಾಗಿಯೇ ಆಗಿಹೋಗಿದ್ದ ಈ ಸಮುದಾಯದ ಸಂಸ್ಕೃತಿಯೇ ಪ್ರಕೃತಿಯ ಆರಾಧನೆ. ಬದುಕಿನ ಪ್ರತಿಕ್ಷಣದಲ್ಲೂ ಹಸಿರನ್ನು ಉಸಿರಾಗಿಸಿಕೊಂಡು ಜೀವಿಸುತ್ತಿದ್ದ ಈ ಸಮುದಾಯವು ಸರ್ಕಾರದ ಅಂಧಾ ಕಾನೂನೊಂದರ ಅನ್ವಯ ಕಾಡಿನ ಅಂಚಿಗೆ ದೂಡಲ್ವಡುತ್ತಾರೆ!? ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕು ಸಾಗಿಸುತ್ತಿದ್ದ ಸೋಲಿಗರ ನೆಮ್ಮದಿಯನ್ನು ಕೆಡಿಸಿ, ತಮ್ಮ ಕಾಡಲ್ಲಿ ತಮಗೇ ಉಳಿಯುವ ಹಕ್ಕು ಮತ್ತು ಸ್ವಾತಂತ್ರವಿಲ್ಲದಂತೆ ಮಾಡಿ ಮುಂದೆಂದೂ ಕಾಡಿಗೆ ಪ್ರವೇಶಿಸದಂತೆ ಸರ್ಕಾರ ನಿಷೇಧ ಹೇರಿತು. ಈ ನಿಷೇಧ ಸೋಲಿಗರ ಬದುಕನ್ನೇ ನಾಶವಾಗಿಸಿತು, ಅವರ ಸ್ವಚ್ಚಂದ ಜೀವನಾದಾರವನ್ನೇ ಕಸಿಯಿತು. ಬದುಕಲು ಬೇಕಾದ ಮೂಲಭೂತ ಅಗತ್ಯತೆಗಳನ್ನೇ ಸರ್ಕಾರ ಪೂರೈಸದೇ ಹೋದದ್ದು, ಕೊಳ್ಳುಬಾಕರ ಕಾಲಡಿಯಲ್ಲಿ ಸಿಲುಕಿ ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಲಾಗದೆ ಅತಂತ್ರಗೊಂಡ ಸೋಲಿಗರು ಶೋಚನೀಯ ಸ್ಥಿತಿಯಲ್ಲಿ ಈಗಲೂ ಬದುಕುತಿದ್ದಾರೆ, ಕಾಲ ತಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ತಲೆತಗ್ಗಿಸುವಂತೆ ಮಾಡಿದೆ.

ಡಿಂಗ್ರಿ ನರೇಶ್

ಸಮಾಜದಿಂದ ಕಡೆಗಣಿಸಲ್ಪಟ್ಟ ಈ ಸೋಲಿಗರ ಮತ್ತು ಇಂತದ್ದೇ ಶೋಷಣೆಗೊಳಗಾದವರ ಪರ ನ್ಯಾಯಕ್ಕಾಗಿ ಬೆಂಗಳೂರಿನ ಡಾ ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಸಂಘ ಕೃಷಿ ವಿಶ್ವವಿದ್ಯಾಲಯ(ಜಿಕೆವಿಕೆ) ಬೆಂಗಳೂರು ಗೊರುಕನ 1974 ನಾಟಕವನ್ನು ಸಿದ್ದಗೊಳಿಸಿ ಪ್ರದರ್ಶಿಸಲು ಮುಂದಾಗಿದೆ. ಡಾ ಕೆ.ಟಿ ವಿಜಯ್ ಕುಮಾರ್ ರವರ ಸೋಲಿಗರ ಬದುಕು ಬವಣೆಯ ಕುರಿತು ನಡೆಸಿದ ಸಂಶೋಧನೆಯ ಆಧಾರದ ಮೇಲೆ ರಂಗಕರ್ಮಿ ರಂಗನಾಥ ನೀನಾಸಂ ಕಥೆ ಹೆಣೆದು ನಾಟಕವಾಗಿ ರಚಿಸಿದ್ದಾರೆ, ಸದಾ ಶೋಷಣೆಯ ವಿರುದ್ದದ ದನಿಯಾಗಿ ರಂಗಕಾಯಕ ನಡೆಸುತ್ತಿರುವ ರಂಗಕರ್ಮಿ ಡಿಂಗ್ರಿ ನರೇಶ್ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕಕ್ಕೆ ಪೂರಕವಾಗಿ ಸಂಗೀತವನ್ನು ಸೂಕ್ಷ್ಮವಾಗಿ ಸಂಯೋಜಿಸಿದ್ದಾರೆ ರಾಘವ ಕಮ್ಮಾರ್. ಪಕ್ಕವಾದ್ಯದಲ್ಲಿ ಡಿಂಗ್ರಿ ಭರತ್ ಸಂಗೀತಕ್ಕೆ ಜತೆಗೂಡಿಸಿದ್ದಾರೆ. ಜಯರಾಮ್ ನೀನಾಸಂ ನಾಟಕಕ್ಕೆ ಬೆಳಕಿನ ವಿನ್ಯಾಸ ಮಾಡಿ ನಾಟಕಕ್ಕೆ ಬೆಳಕಾಗಿದ್ದಾರೆ. ಈ ನಾಟಕವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಭಿನಯಿಸುತ್ತಿರುವುದು ವಿಶೇಷ. ಯುವಕರೇ ಪ್ರಧಾನವಾಗಿರುವ ತಂಡವು ಪ್ರತಿಭೆಯಿಂದ ಕೂಡಿದ್ದು, ಸ್ವಸ್ಥ ಸಮಾಜವನ್ನು ಕಟ್ಟಲು ಕೈಜೋಡಿಸಿದ್ದಾರೆ. ಈ ನಾಟಕ 2019 ರ ಮೇ 31 ರಂದು ಸಂಜೆ 6 ಕ್ಕೆ ಕುವೆಂಪು ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಸಮಾಜಮುಖಯಾಗಿ ಯೋಚಿಸುವ ಯುವತಂಡ ಅಭಿನಯಿಸುವ ಈ ನಾಟಕ ನೋಡಲು ಅಥವಾ ಬೇರೆ ಕಡೆ ಪ್ರದರ್ಶಿಸ ಬಯಸುವವರು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರಾಗಿ ಡಿಂಗ್ರಿ ನರೇಶ್ 8197707198 ಇವರನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...