Homeಕರ್ನಾಟಕಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ 'ಗೊರುಕನ 1974' ನೋಡಿ

ಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ ‘ಗೊರುಕನ 1974’ ನೋಡಿ

ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

- Advertisement -
- Advertisement -

ನಮ್ಮೊಳಗೇ ಇರುವ ಅಭಿವೃದ್ಧಿ ಎಂಬ ಭ್ರಮೆ ಅಥವಾ ಪರಿಕಲ್ಪನೆಯನ್ನು ಅರ್ಥಹೀನಗೊಳಿಸಿದರ ಫಲವಾಗಿಯೇ ನಾವು ವಿನಾಶದ ಅಂಚಿಗೆ ತಲುಪಿದ್ದೇವೆ. ಈ ನಮ್ಮ ಜೀವ ಜಗತ್ತು ಆಧುನಿಕತೆಯ ಓಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಾವು ಜೀವಸೆಲೆಯನ್ನು ಕಳಕೊಂಡು ಯಾಂತ್ರಿಕವಾಗುತ್ತಿದ್ದೇವೆ. ಸಂವೇದನೆಗಳನ್ನೇ ಕಳೆದುಕೊಂಡ ಮೆಷಿನ್ ಗಳಾಗುತ್ತಿದ್ದೇವೆ. ಇಡೀ ಮಾನವ ಕುಲವೇ ಒಬ್ಬರೊಬ್ಬರ ಕೈಹಿಡಿದು ಜತೆ ಜತೆಯಾಗಿ ವಿಶ್ವಪಥದಲ್ಲಿ ಸಾಗುವುದನ್ನು ಮರೆತಿದ್ದೇವೆ. ತಂತ್ರಜ್ಞಾನ ಬಳಸಿ ನಾವು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುತ್ತಿದ್ದೇವೆಯೇ ಹೊರತು ಹೃದಯಗಳನ್ನು, ಮನಸ್ಸುಗಳನ್ನು ತಲುಪುತ್ತಿಲ್ಲ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕುಂಟು. ಇದಕ್ಕೆ ಯಾವುದೇ ಕಾನೂನಿನ ತೊಡಕುಗಳೂ ಆಗಬಾರದು. ಆದರೆ ನಾವೇ ಕಟ್ಟಿಕೊಂಡ ವ್ಯವಸ್ಥೆ ನಮ್ಮವರನ್ನೇ ಅಂತ್ಯ ಕಾಣಿಸಹೊರಟಿರುವುದು ದುರಂತದ ಪರಮಾವಧಿ..‌

ಇಷ್ಟೆಲ್ಲಾ ಪೀಠಿಕೆಗೆ ಕಾರಣ…? ತಮ್ಮ ತಪ್ಪಿಲ್ಲದ, ತಮ್ಮ ಅರಿವಿನ ಪರಿದಿಗೇ ಬಾರದ ಕಾನೂನಿನ ಬಲೆಯಲ್ಲಿ ಬಲಿಯಾಗಿ, ನಮ್ಮ ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

ಕೆ ಟಿ ವಿಜಯ್ ಕುಮರ್

ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಕಾಡುಗಳಲ್ಲಿ ಪರಂಪರಾನುಗತವಾಗಿ ವಾಸಿಸುತ್ತಾ, ಕಾಡಲ್ಲಿ ಕಾಡಾಗಿ ಬೆರೆತು ಕಾಡಿನ ಭಾಗವಾಗಿಯೇ ಆಗಿಹೋಗಿದ್ದ ಈ ಸಮುದಾಯದ ಸಂಸ್ಕೃತಿಯೇ ಪ್ರಕೃತಿಯ ಆರಾಧನೆ. ಬದುಕಿನ ಪ್ರತಿಕ್ಷಣದಲ್ಲೂ ಹಸಿರನ್ನು ಉಸಿರಾಗಿಸಿಕೊಂಡು ಜೀವಿಸುತ್ತಿದ್ದ ಈ ಸಮುದಾಯವು ಸರ್ಕಾರದ ಅಂಧಾ ಕಾನೂನೊಂದರ ಅನ್ವಯ ಕಾಡಿನ ಅಂಚಿಗೆ ದೂಡಲ್ವಡುತ್ತಾರೆ!? ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕು ಸಾಗಿಸುತ್ತಿದ್ದ ಸೋಲಿಗರ ನೆಮ್ಮದಿಯನ್ನು ಕೆಡಿಸಿ, ತಮ್ಮ ಕಾಡಲ್ಲಿ ತಮಗೇ ಉಳಿಯುವ ಹಕ್ಕು ಮತ್ತು ಸ್ವಾತಂತ್ರವಿಲ್ಲದಂತೆ ಮಾಡಿ ಮುಂದೆಂದೂ ಕಾಡಿಗೆ ಪ್ರವೇಶಿಸದಂತೆ ಸರ್ಕಾರ ನಿಷೇಧ ಹೇರಿತು. ಈ ನಿಷೇಧ ಸೋಲಿಗರ ಬದುಕನ್ನೇ ನಾಶವಾಗಿಸಿತು, ಅವರ ಸ್ವಚ್ಚಂದ ಜೀವನಾದಾರವನ್ನೇ ಕಸಿಯಿತು. ಬದುಕಲು ಬೇಕಾದ ಮೂಲಭೂತ ಅಗತ್ಯತೆಗಳನ್ನೇ ಸರ್ಕಾರ ಪೂರೈಸದೇ ಹೋದದ್ದು, ಕೊಳ್ಳುಬಾಕರ ಕಾಲಡಿಯಲ್ಲಿ ಸಿಲುಕಿ ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಲಾಗದೆ ಅತಂತ್ರಗೊಂಡ ಸೋಲಿಗರು ಶೋಚನೀಯ ಸ್ಥಿತಿಯಲ್ಲಿ ಈಗಲೂ ಬದುಕುತಿದ್ದಾರೆ, ಕಾಲ ತಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ತಲೆತಗ್ಗಿಸುವಂತೆ ಮಾಡಿದೆ.

ಡಿಂಗ್ರಿ ನರೇಶ್

ಸಮಾಜದಿಂದ ಕಡೆಗಣಿಸಲ್ಪಟ್ಟ ಈ ಸೋಲಿಗರ ಮತ್ತು ಇಂತದ್ದೇ ಶೋಷಣೆಗೊಳಗಾದವರ ಪರ ನ್ಯಾಯಕ್ಕಾಗಿ ಬೆಂಗಳೂರಿನ ಡಾ ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಸಂಘ ಕೃಷಿ ವಿಶ್ವವಿದ್ಯಾಲಯ(ಜಿಕೆವಿಕೆ) ಬೆಂಗಳೂರು ಗೊರುಕನ 1974 ನಾಟಕವನ್ನು ಸಿದ್ದಗೊಳಿಸಿ ಪ್ರದರ್ಶಿಸಲು ಮುಂದಾಗಿದೆ. ಡಾ ಕೆ.ಟಿ ವಿಜಯ್ ಕುಮಾರ್ ರವರ ಸೋಲಿಗರ ಬದುಕು ಬವಣೆಯ ಕುರಿತು ನಡೆಸಿದ ಸಂಶೋಧನೆಯ ಆಧಾರದ ಮೇಲೆ ರಂಗಕರ್ಮಿ ರಂಗನಾಥ ನೀನಾಸಂ ಕಥೆ ಹೆಣೆದು ನಾಟಕವಾಗಿ ರಚಿಸಿದ್ದಾರೆ, ಸದಾ ಶೋಷಣೆಯ ವಿರುದ್ದದ ದನಿಯಾಗಿ ರಂಗಕಾಯಕ ನಡೆಸುತ್ತಿರುವ ರಂಗಕರ್ಮಿ ಡಿಂಗ್ರಿ ನರೇಶ್ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕಕ್ಕೆ ಪೂರಕವಾಗಿ ಸಂಗೀತವನ್ನು ಸೂಕ್ಷ್ಮವಾಗಿ ಸಂಯೋಜಿಸಿದ್ದಾರೆ ರಾಘವ ಕಮ್ಮಾರ್. ಪಕ್ಕವಾದ್ಯದಲ್ಲಿ ಡಿಂಗ್ರಿ ಭರತ್ ಸಂಗೀತಕ್ಕೆ ಜತೆಗೂಡಿಸಿದ್ದಾರೆ. ಜಯರಾಮ್ ನೀನಾಸಂ ನಾಟಕಕ್ಕೆ ಬೆಳಕಿನ ವಿನ್ಯಾಸ ಮಾಡಿ ನಾಟಕಕ್ಕೆ ಬೆಳಕಾಗಿದ್ದಾರೆ. ಈ ನಾಟಕವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಭಿನಯಿಸುತ್ತಿರುವುದು ವಿಶೇಷ. ಯುವಕರೇ ಪ್ರಧಾನವಾಗಿರುವ ತಂಡವು ಪ್ರತಿಭೆಯಿಂದ ಕೂಡಿದ್ದು, ಸ್ವಸ್ಥ ಸಮಾಜವನ್ನು ಕಟ್ಟಲು ಕೈಜೋಡಿಸಿದ್ದಾರೆ. ಈ ನಾಟಕ 2019 ರ ಮೇ 31 ರಂದು ಸಂಜೆ 6 ಕ್ಕೆ ಕುವೆಂಪು ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಸಮಾಜಮುಖಯಾಗಿ ಯೋಚಿಸುವ ಯುವತಂಡ ಅಭಿನಯಿಸುವ ಈ ನಾಟಕ ನೋಡಲು ಅಥವಾ ಬೇರೆ ಕಡೆ ಪ್ರದರ್ಶಿಸ ಬಯಸುವವರು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರಾಗಿ ಡಿಂಗ್ರಿ ನರೇಶ್ 8197707198 ಇವರನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...