Homeಕರ್ನಾಟಕಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ 'ಗೊರುಕನ 1974' ನೋಡಿ

ಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ ‘ಗೊರುಕನ 1974’ ನೋಡಿ

ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

- Advertisement -
- Advertisement -

ನಮ್ಮೊಳಗೇ ಇರುವ ಅಭಿವೃದ್ಧಿ ಎಂಬ ಭ್ರಮೆ ಅಥವಾ ಪರಿಕಲ್ಪನೆಯನ್ನು ಅರ್ಥಹೀನಗೊಳಿಸಿದರ ಫಲವಾಗಿಯೇ ನಾವು ವಿನಾಶದ ಅಂಚಿಗೆ ತಲುಪಿದ್ದೇವೆ. ಈ ನಮ್ಮ ಜೀವ ಜಗತ್ತು ಆಧುನಿಕತೆಯ ಓಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಾವು ಜೀವಸೆಲೆಯನ್ನು ಕಳಕೊಂಡು ಯಾಂತ್ರಿಕವಾಗುತ್ತಿದ್ದೇವೆ. ಸಂವೇದನೆಗಳನ್ನೇ ಕಳೆದುಕೊಂಡ ಮೆಷಿನ್ ಗಳಾಗುತ್ತಿದ್ದೇವೆ. ಇಡೀ ಮಾನವ ಕುಲವೇ ಒಬ್ಬರೊಬ್ಬರ ಕೈಹಿಡಿದು ಜತೆ ಜತೆಯಾಗಿ ವಿಶ್ವಪಥದಲ್ಲಿ ಸಾಗುವುದನ್ನು ಮರೆತಿದ್ದೇವೆ. ತಂತ್ರಜ್ಞಾನ ಬಳಸಿ ನಾವು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುತ್ತಿದ್ದೇವೆಯೇ ಹೊರತು ಹೃದಯಗಳನ್ನು, ಮನಸ್ಸುಗಳನ್ನು ತಲುಪುತ್ತಿಲ್ಲ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕುಂಟು. ಇದಕ್ಕೆ ಯಾವುದೇ ಕಾನೂನಿನ ತೊಡಕುಗಳೂ ಆಗಬಾರದು. ಆದರೆ ನಾವೇ ಕಟ್ಟಿಕೊಂಡ ವ್ಯವಸ್ಥೆ ನಮ್ಮವರನ್ನೇ ಅಂತ್ಯ ಕಾಣಿಸಹೊರಟಿರುವುದು ದುರಂತದ ಪರಮಾವಧಿ..‌

ಇಷ್ಟೆಲ್ಲಾ ಪೀಠಿಕೆಗೆ ಕಾರಣ…? ತಮ್ಮ ತಪ್ಪಿಲ್ಲದ, ತಮ್ಮ ಅರಿವಿನ ಪರಿದಿಗೇ ಬಾರದ ಕಾನೂನಿನ ಬಲೆಯಲ್ಲಿ ಬಲಿಯಾಗಿ, ನಮ್ಮ ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

ಕೆ ಟಿ ವಿಜಯ್ ಕುಮರ್

ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಕಾಡುಗಳಲ್ಲಿ ಪರಂಪರಾನುಗತವಾಗಿ ವಾಸಿಸುತ್ತಾ, ಕಾಡಲ್ಲಿ ಕಾಡಾಗಿ ಬೆರೆತು ಕಾಡಿನ ಭಾಗವಾಗಿಯೇ ಆಗಿಹೋಗಿದ್ದ ಈ ಸಮುದಾಯದ ಸಂಸ್ಕೃತಿಯೇ ಪ್ರಕೃತಿಯ ಆರಾಧನೆ. ಬದುಕಿನ ಪ್ರತಿಕ್ಷಣದಲ್ಲೂ ಹಸಿರನ್ನು ಉಸಿರಾಗಿಸಿಕೊಂಡು ಜೀವಿಸುತ್ತಿದ್ದ ಈ ಸಮುದಾಯವು ಸರ್ಕಾರದ ಅಂಧಾ ಕಾನೂನೊಂದರ ಅನ್ವಯ ಕಾಡಿನ ಅಂಚಿಗೆ ದೂಡಲ್ವಡುತ್ತಾರೆ!? ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕು ಸಾಗಿಸುತ್ತಿದ್ದ ಸೋಲಿಗರ ನೆಮ್ಮದಿಯನ್ನು ಕೆಡಿಸಿ, ತಮ್ಮ ಕಾಡಲ್ಲಿ ತಮಗೇ ಉಳಿಯುವ ಹಕ್ಕು ಮತ್ತು ಸ್ವಾತಂತ್ರವಿಲ್ಲದಂತೆ ಮಾಡಿ ಮುಂದೆಂದೂ ಕಾಡಿಗೆ ಪ್ರವೇಶಿಸದಂತೆ ಸರ್ಕಾರ ನಿಷೇಧ ಹೇರಿತು. ಈ ನಿಷೇಧ ಸೋಲಿಗರ ಬದುಕನ್ನೇ ನಾಶವಾಗಿಸಿತು, ಅವರ ಸ್ವಚ್ಚಂದ ಜೀವನಾದಾರವನ್ನೇ ಕಸಿಯಿತು. ಬದುಕಲು ಬೇಕಾದ ಮೂಲಭೂತ ಅಗತ್ಯತೆಗಳನ್ನೇ ಸರ್ಕಾರ ಪೂರೈಸದೇ ಹೋದದ್ದು, ಕೊಳ್ಳುಬಾಕರ ಕಾಲಡಿಯಲ್ಲಿ ಸಿಲುಕಿ ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಲಾಗದೆ ಅತಂತ್ರಗೊಂಡ ಸೋಲಿಗರು ಶೋಚನೀಯ ಸ್ಥಿತಿಯಲ್ಲಿ ಈಗಲೂ ಬದುಕುತಿದ್ದಾರೆ, ಕಾಲ ತಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ತಲೆತಗ್ಗಿಸುವಂತೆ ಮಾಡಿದೆ.

ಡಿಂಗ್ರಿ ನರೇಶ್

ಸಮಾಜದಿಂದ ಕಡೆಗಣಿಸಲ್ಪಟ್ಟ ಈ ಸೋಲಿಗರ ಮತ್ತು ಇಂತದ್ದೇ ಶೋಷಣೆಗೊಳಗಾದವರ ಪರ ನ್ಯಾಯಕ್ಕಾಗಿ ಬೆಂಗಳೂರಿನ ಡಾ ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಸಂಘ ಕೃಷಿ ವಿಶ್ವವಿದ್ಯಾಲಯ(ಜಿಕೆವಿಕೆ) ಬೆಂಗಳೂರು ಗೊರುಕನ 1974 ನಾಟಕವನ್ನು ಸಿದ್ದಗೊಳಿಸಿ ಪ್ರದರ್ಶಿಸಲು ಮುಂದಾಗಿದೆ. ಡಾ ಕೆ.ಟಿ ವಿಜಯ್ ಕುಮಾರ್ ರವರ ಸೋಲಿಗರ ಬದುಕು ಬವಣೆಯ ಕುರಿತು ನಡೆಸಿದ ಸಂಶೋಧನೆಯ ಆಧಾರದ ಮೇಲೆ ರಂಗಕರ್ಮಿ ರಂಗನಾಥ ನೀನಾಸಂ ಕಥೆ ಹೆಣೆದು ನಾಟಕವಾಗಿ ರಚಿಸಿದ್ದಾರೆ, ಸದಾ ಶೋಷಣೆಯ ವಿರುದ್ದದ ದನಿಯಾಗಿ ರಂಗಕಾಯಕ ನಡೆಸುತ್ತಿರುವ ರಂಗಕರ್ಮಿ ಡಿಂಗ್ರಿ ನರೇಶ್ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕಕ್ಕೆ ಪೂರಕವಾಗಿ ಸಂಗೀತವನ್ನು ಸೂಕ್ಷ್ಮವಾಗಿ ಸಂಯೋಜಿಸಿದ್ದಾರೆ ರಾಘವ ಕಮ್ಮಾರ್. ಪಕ್ಕವಾದ್ಯದಲ್ಲಿ ಡಿಂಗ್ರಿ ಭರತ್ ಸಂಗೀತಕ್ಕೆ ಜತೆಗೂಡಿಸಿದ್ದಾರೆ. ಜಯರಾಮ್ ನೀನಾಸಂ ನಾಟಕಕ್ಕೆ ಬೆಳಕಿನ ವಿನ್ಯಾಸ ಮಾಡಿ ನಾಟಕಕ್ಕೆ ಬೆಳಕಾಗಿದ್ದಾರೆ. ಈ ನಾಟಕವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಭಿನಯಿಸುತ್ತಿರುವುದು ವಿಶೇಷ. ಯುವಕರೇ ಪ್ರಧಾನವಾಗಿರುವ ತಂಡವು ಪ್ರತಿಭೆಯಿಂದ ಕೂಡಿದ್ದು, ಸ್ವಸ್ಥ ಸಮಾಜವನ್ನು ಕಟ್ಟಲು ಕೈಜೋಡಿಸಿದ್ದಾರೆ. ಈ ನಾಟಕ 2019 ರ ಮೇ 31 ರಂದು ಸಂಜೆ 6 ಕ್ಕೆ ಕುವೆಂಪು ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಸಮಾಜಮುಖಯಾಗಿ ಯೋಚಿಸುವ ಯುವತಂಡ ಅಭಿನಯಿಸುವ ಈ ನಾಟಕ ನೋಡಲು ಅಥವಾ ಬೇರೆ ಕಡೆ ಪ್ರದರ್ಶಿಸ ಬಯಸುವವರು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರಾಗಿ ಡಿಂಗ್ರಿ ನರೇಶ್ 8197707198 ಇವರನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...