Homeಕರ್ನಾಟಕಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ 'ಗೊರುಕನ 1974' ನೋಡಿ

ಸಮಾಜದಿಂದ ಕಡೆಗಣಿಸಲ್ಪಟ್ಟ ಸೋಲಿಗ ಸಮುದಾಯದ ಕಥನ ‘ಗೊರುಕನ 1974’ ನೋಡಿ

ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

- Advertisement -
- Advertisement -

ನಮ್ಮೊಳಗೇ ಇರುವ ಅಭಿವೃದ್ಧಿ ಎಂಬ ಭ್ರಮೆ ಅಥವಾ ಪರಿಕಲ್ಪನೆಯನ್ನು ಅರ್ಥಹೀನಗೊಳಿಸಿದರ ಫಲವಾಗಿಯೇ ನಾವು ವಿನಾಶದ ಅಂಚಿಗೆ ತಲುಪಿದ್ದೇವೆ. ಈ ನಮ್ಮ ಜೀವ ಜಗತ್ತು ಆಧುನಿಕತೆಯ ಓಟದಲ್ಲಿ ಸ್ಪರ್ಧೆಗಿಳಿಯುತ್ತಿರುವ ನಾವು ಜೀವಸೆಲೆಯನ್ನು ಕಳಕೊಂಡು ಯಾಂತ್ರಿಕವಾಗುತ್ತಿದ್ದೇವೆ. ಸಂವೇದನೆಗಳನ್ನೇ ಕಳೆದುಕೊಂಡ ಮೆಷಿನ್ ಗಳಾಗುತ್ತಿದ್ದೇವೆ. ಇಡೀ ಮಾನವ ಕುಲವೇ ಒಬ್ಬರೊಬ್ಬರ ಕೈಹಿಡಿದು ಜತೆ ಜತೆಯಾಗಿ ವಿಶ್ವಪಥದಲ್ಲಿ ಸಾಗುವುದನ್ನು ಮರೆತಿದ್ದೇವೆ. ತಂತ್ರಜ್ಞಾನ ಬಳಸಿ ನಾವು ಜಗತ್ತಿನ ಮೂಲೆ ಮೂಲೆಗಳನ್ನು ತಲುಪುತ್ತಿದ್ದೇವೆಯೇ ಹೊರತು ಹೃದಯಗಳನ್ನು, ಮನಸ್ಸುಗಳನ್ನು ತಲುಪುತ್ತಿಲ್ಲ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕುಂಟು. ಇದಕ್ಕೆ ಯಾವುದೇ ಕಾನೂನಿನ ತೊಡಕುಗಳೂ ಆಗಬಾರದು. ಆದರೆ ನಾವೇ ಕಟ್ಟಿಕೊಂಡ ವ್ಯವಸ್ಥೆ ನಮ್ಮವರನ್ನೇ ಅಂತ್ಯ ಕಾಣಿಸಹೊರಟಿರುವುದು ದುರಂತದ ಪರಮಾವಧಿ..‌

ಇಷ್ಟೆಲ್ಲಾ ಪೀಠಿಕೆಗೆ ಕಾರಣ…? ತಮ್ಮ ತಪ್ಪಿಲ್ಲದ, ತಮ್ಮ ಅರಿವಿನ ಪರಿದಿಗೇ ಬಾರದ ಕಾನೂನಿನ ಬಲೆಯಲ್ಲಿ ಬಲಿಯಾಗಿ, ನಮ್ಮ ಆಧುನಿಕತೆಯ ಓಟವೆಬ್ಬಿಸುವ ಧೂಳಿನಲ್ಲಿ ಗುರುತಿಸಲೂ ಸಿಗದೇ ಕಣ್ಮರೆಯಾಗಿರುವ ಮುಗ್ದ ಪ್ರಪಂಚವೇ ಸೋಲಿಗ ಆದಿವಾಸಿ ಬುಡಕಟ್ಟು ಸಮುದಾಯ.

ಕೆ ಟಿ ವಿಜಯ್ ಕುಮರ್

ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಕಾಡುಗಳಲ್ಲಿ ಪರಂಪರಾನುಗತವಾಗಿ ವಾಸಿಸುತ್ತಾ, ಕಾಡಲ್ಲಿ ಕಾಡಾಗಿ ಬೆರೆತು ಕಾಡಿನ ಭಾಗವಾಗಿಯೇ ಆಗಿಹೋಗಿದ್ದ ಈ ಸಮುದಾಯದ ಸಂಸ್ಕೃತಿಯೇ ಪ್ರಕೃತಿಯ ಆರಾಧನೆ. ಬದುಕಿನ ಪ್ರತಿಕ್ಷಣದಲ್ಲೂ ಹಸಿರನ್ನು ಉಸಿರಾಗಿಸಿಕೊಂಡು ಜೀವಿಸುತ್ತಿದ್ದ ಈ ಸಮುದಾಯವು ಸರ್ಕಾರದ ಅಂಧಾ ಕಾನೂನೊಂದರ ಅನ್ವಯ ಕಾಡಿನ ಅಂಚಿಗೆ ದೂಡಲ್ವಡುತ್ತಾರೆ!? ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಬದುಕು ಸಾಗಿಸುತ್ತಿದ್ದ ಸೋಲಿಗರ ನೆಮ್ಮದಿಯನ್ನು ಕೆಡಿಸಿ, ತಮ್ಮ ಕಾಡಲ್ಲಿ ತಮಗೇ ಉಳಿಯುವ ಹಕ್ಕು ಮತ್ತು ಸ್ವಾತಂತ್ರವಿಲ್ಲದಂತೆ ಮಾಡಿ ಮುಂದೆಂದೂ ಕಾಡಿಗೆ ಪ್ರವೇಶಿಸದಂತೆ ಸರ್ಕಾರ ನಿಷೇಧ ಹೇರಿತು. ಈ ನಿಷೇಧ ಸೋಲಿಗರ ಬದುಕನ್ನೇ ನಾಶವಾಗಿಸಿತು, ಅವರ ಸ್ವಚ್ಚಂದ ಜೀವನಾದಾರವನ್ನೇ ಕಸಿಯಿತು. ಬದುಕಲು ಬೇಕಾದ ಮೂಲಭೂತ ಅಗತ್ಯತೆಗಳನ್ನೇ ಸರ್ಕಾರ ಪೂರೈಸದೇ ಹೋದದ್ದು, ಕೊಳ್ಳುಬಾಕರ ಕಾಲಡಿಯಲ್ಲಿ ಸಿಲುಕಿ ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಲಾಗದೆ ಅತಂತ್ರಗೊಂಡ ಸೋಲಿಗರು ಶೋಚನೀಯ ಸ್ಥಿತಿಯಲ್ಲಿ ಈಗಲೂ ಬದುಕುತಿದ್ದಾರೆ, ಕಾಲ ತಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ತಲೆತಗ್ಗಿಸುವಂತೆ ಮಾಡಿದೆ.

ಡಿಂಗ್ರಿ ನರೇಶ್

ಸಮಾಜದಿಂದ ಕಡೆಗಣಿಸಲ್ಪಟ್ಟ ಈ ಸೋಲಿಗರ ಮತ್ತು ಇಂತದ್ದೇ ಶೋಷಣೆಗೊಳಗಾದವರ ಪರ ನ್ಯಾಯಕ್ಕಾಗಿ ಬೆಂಗಳೂರಿನ ಡಾ ಬಿ.ಆರ್ ಅಂಬೇಡ್ಕರ್ ವಿದ್ಯಾರ್ಥಿ ಸಂಘ ಕೃಷಿ ವಿಶ್ವವಿದ್ಯಾಲಯ(ಜಿಕೆವಿಕೆ) ಬೆಂಗಳೂರು ಗೊರುಕನ 1974 ನಾಟಕವನ್ನು ಸಿದ್ದಗೊಳಿಸಿ ಪ್ರದರ್ಶಿಸಲು ಮುಂದಾಗಿದೆ. ಡಾ ಕೆ.ಟಿ ವಿಜಯ್ ಕುಮಾರ್ ರವರ ಸೋಲಿಗರ ಬದುಕು ಬವಣೆಯ ಕುರಿತು ನಡೆಸಿದ ಸಂಶೋಧನೆಯ ಆಧಾರದ ಮೇಲೆ ರಂಗಕರ್ಮಿ ರಂಗನಾಥ ನೀನಾಸಂ ಕಥೆ ಹೆಣೆದು ನಾಟಕವಾಗಿ ರಚಿಸಿದ್ದಾರೆ, ಸದಾ ಶೋಷಣೆಯ ವಿರುದ್ದದ ದನಿಯಾಗಿ ರಂಗಕಾಯಕ ನಡೆಸುತ್ತಿರುವ ರಂಗಕರ್ಮಿ ಡಿಂಗ್ರಿ ನರೇಶ್ ನಾಟಕವನ್ನು ನಿರ್ದೇಶಿಸಿದ್ದಾರೆ. ನಾಟಕಕ್ಕೆ ಪೂರಕವಾಗಿ ಸಂಗೀತವನ್ನು ಸೂಕ್ಷ್ಮವಾಗಿ ಸಂಯೋಜಿಸಿದ್ದಾರೆ ರಾಘವ ಕಮ್ಮಾರ್. ಪಕ್ಕವಾದ್ಯದಲ್ಲಿ ಡಿಂಗ್ರಿ ಭರತ್ ಸಂಗೀತಕ್ಕೆ ಜತೆಗೂಡಿಸಿದ್ದಾರೆ. ಜಯರಾಮ್ ನೀನಾಸಂ ನಾಟಕಕ್ಕೆ ಬೆಳಕಿನ ವಿನ್ಯಾಸ ಮಾಡಿ ನಾಟಕಕ್ಕೆ ಬೆಳಕಾಗಿದ್ದಾರೆ. ಈ ನಾಟಕವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಅಭಿನಯಿಸುತ್ತಿರುವುದು ವಿಶೇಷ. ಯುವಕರೇ ಪ್ರಧಾನವಾಗಿರುವ ತಂಡವು ಪ್ರತಿಭೆಯಿಂದ ಕೂಡಿದ್ದು, ಸ್ವಸ್ಥ ಸಮಾಜವನ್ನು ಕಟ್ಟಲು ಕೈಜೋಡಿಸಿದ್ದಾರೆ. ಈ ನಾಟಕ 2019 ರ ಮೇ 31 ರಂದು ಸಂಜೆ 6 ಕ್ಕೆ ಕುವೆಂಪು ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಸಮಾಜಮುಖಯಾಗಿ ಯೋಚಿಸುವ ಯುವತಂಡ ಅಭಿನಯಿಸುವ ಈ ನಾಟಕ ನೋಡಲು ಅಥವಾ ಬೇರೆ ಕಡೆ ಪ್ರದರ್ಶಿಸ ಬಯಸುವವರು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರಾಗಿ ಡಿಂಗ್ರಿ ನರೇಶ್ 8197707198 ಇವರನ್ನು ಸಂಪರ್ಕಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...