Homeಮುಖಪುಟಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

ಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

- Advertisement -
- Advertisement -

ಬಿಹಾರದಲ್ಲಿ ಆಗಸ್ಟ್ 1ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ‘ಸತ್ತೋಗಿದ್ದಾರೆ’ ಎಂದು ಚುನಾವಣಾ ಆಯೋಗ ಘೋಷಿಸಿರುವ ಏಳು ಜನರ ಗುಂಪನ್ನು ಬುಧವಾರ (ಆ.13) ರಾಹುಲ್ ಗಾಂಧಿ ದೆಹಲಿಯಲ್ಲಿ ಭೇಟಿಯಾದರು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲೇ, ಏಳು ಜನರ ಗುಂಪು ಬಿಹಾರದಿಂದ ದೆಹಲಿಗೆ ಪ್ರಯಾಣಿಸಿ ರಾಹುಲ್ ಗಾಂಧಿಯನ್ನು ಭೇಟಿಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಜೀವನದಲ್ಲಿ ಅನೇಕ ಆಸಕ್ತಿದಾಯಕ ಅನುಭವಗಳು ಆಗಿವೆ. ಆದರೆ, ‘ಸತ್ತ ಜನರೊಂದಿಗೆ’ ಟೀ ಕುಡಿಯುವ ಅವಕಾಶ ಎಂದಿಗೂ ಸಿಕ್ಕಿರಲಿಲ್ಲ. ಈ ವಿಶಿಷ್ಟ ಅನುಭವಕ್ಕಾಗಿ ಚುನಾವಣಾ ಆಯೋಗಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ, ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಸತ್ತೋಗಿದ್ದಾರೆ ಎಂದು ಗುರುತಿಸಿರುವ ಗುಂಪಿನೊಂದಿಗೆ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಿರುವುದನ್ನು ನೋಡಬಹುದು.

“ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳು ಕಾಣೆಯಾಗಿವೆ ಎಂದು ನಿಮಗೆ ಹೇಗೆ ತಿಳಿಯಿತು?” ಎಂದು ರಾಹುಲ್ ಗಾಂಧಿ ಕೇಳಿದಾಗ, ಏಳು ಜನರ ಗುಂಪಿನ ಒಬ್ಬರು, “ಚುನಾವಣಾ ಆಯೋಗದ ಮತದಾರರ ಪಟ್ಟಿಯ ಮೂಲಕ” ಎಂದು ಉತ್ತರಿಸಿದ್ದಾರೆ. “ಒಂದು ಪಂಚಾಯತ್‌ನಲ್ಲಿ ಕನಿಷ್ಠ 50 ಇಂತಹ ಪ್ರಕರಣಗಳಿವೆ” ಎಂದು ಅವರಲ್ಲಿ ಒಬ್ಬರು ಹೇಳಿದ್ದಾರೆ. “ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಕ್ಷೇತ್ರದಲ್ಲಿ ಅನೇಕ ಮತದಾರರನ್ನು ಸತ್ತೋಗಿದ್ದಾರೆ ಎಂಬುವುದಾಗಿ ತೋರಿಸಲಾಗಿದೆ” ಎಂದಿದ್ದಾರೆ.

ಗುಂಪಿನಲ್ಲಿದ್ದ 85 ವರ್ಷದ ಮಹಿಳೆಯೊಬ್ಬರನ್ನು ತೋರಿಸುತ್ತಾ, “ಚುನಾವಣಾ ಆಯೋಗವು ಅವರನ್ನು ‘ಸತ್ತೋಗಿದ್ದಾರೆ’ ಎಂದು ಘೋಷಿಸಿದೆ ಮತ್ತು ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ.

“ಈ ಜನರು ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಲು 4-5 ಗಂಟೆಗಳ ಕಾಲ ಸುಪ್ರೀಂ ಕೋರ್ಟ್‌ನಲ್ಲಿ ನಿಂತಿದ್ದಾರೆ. ಇವರು ಸತ್ತೋಗಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿರುವ ಪಟ್ಟಿ ನಮ್ಮಲ್ಲಿದೆ.
ಚುನಾವಣಾ ಆಯೋಗ 65 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದೆ. ಈ ಪೈಕಿ 22 ಲಕ್ಷ ಜನರು ಸತ್ತೋಗಿದ್ದಾರೆ. 35 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ ಅಥವಾ ಅವರ ಹೆಸರು ಹಲವು ಬಾರಿ ಇತ್ತು ಎಂದು ಚುನಾವಣಾ ಆಯೋಗ ಹೇಳಿದೆ” ಎಂದು ಆ ವ್ಯಕ್ತಿ ರಾಹುಲ್ ಗಾಂಧಿ ಮುಂದೆ ವಿವರಿಸಿದ್ದಾರೆ ಮತ್ತು ಈ 35 ಲಕ್ಷ ಜನರು ಯಾರು?” ಎಂದು ಪ್ರಶ್ನಿಸಿದ್ದಾರೆ.

ಗುಂಪಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ,”ಆಧಾರ್ ಕಾರ್ಡ್‌, ಬ್ಯಾಂಕ್ ಪಾಸ್‌ಬುಕ್ ಮತ್ತು ಇತರ ದಾಖಲೆಗಳನ್ನು ನೀಡಿದ್ದರೂ, ನಾನು ಸತ್ತೋಗಿದ್ದೇನೆ ಎಂದು ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಘೋಷಿಸಿದೆ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಚುನಾವಣಾ ಆಯೋಗ ಈ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿಲ್ಲ” ಎಂದಿದ್ದಾರೆ.

ಸಿಬಿಐ ಮತ್ತು ಇಡಿ ವಿಫಲವಾದ್ದರಿಂದ ಬಿಜೆಪಿ ಈಗ ಚುನಾವಣಾ ಆಯೋಗವನ್ನು ಬಳಸುತ್ತಿದೆ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...