Homeಮುಖಪುಟಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

ಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

- Advertisement -
- Advertisement -

ಬಿಹಾರದಲ್ಲಿ ಆಗಸ್ಟ್ 1ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ‘ಸತ್ತೋಗಿದ್ದಾರೆ’ ಎಂದು ಚುನಾವಣಾ ಆಯೋಗ ಘೋಷಿಸಿರುವ ಏಳು ಜನರ ಗುಂಪನ್ನು ಬುಧವಾರ (ಆ.13) ರಾಹುಲ್ ಗಾಂಧಿ ದೆಹಲಿಯಲ್ಲಿ ಭೇಟಿಯಾದರು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲೇ, ಏಳು ಜನರ ಗುಂಪು ಬಿಹಾರದಿಂದ ದೆಹಲಿಗೆ ಪ್ರಯಾಣಿಸಿ ರಾಹುಲ್ ಗಾಂಧಿಯನ್ನು ಭೇಟಿಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಜೀವನದಲ್ಲಿ ಅನೇಕ ಆಸಕ್ತಿದಾಯಕ ಅನುಭವಗಳು ಆಗಿವೆ. ಆದರೆ, ‘ಸತ್ತ ಜನರೊಂದಿಗೆ’ ಟೀ ಕುಡಿಯುವ ಅವಕಾಶ ಎಂದಿಗೂ ಸಿಕ್ಕಿರಲಿಲ್ಲ. ಈ ವಿಶಿಷ್ಟ ಅನುಭವಕ್ಕಾಗಿ ಚುನಾವಣಾ ಆಯೋಗಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ, ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಸತ್ತೋಗಿದ್ದಾರೆ ಎಂದು ಗುರುತಿಸಿರುವ ಗುಂಪಿನೊಂದಿಗೆ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಿರುವುದನ್ನು ನೋಡಬಹುದು.

“ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳು ಕಾಣೆಯಾಗಿವೆ ಎಂದು ನಿಮಗೆ ಹೇಗೆ ತಿಳಿಯಿತು?” ಎಂದು ರಾಹುಲ್ ಗಾಂಧಿ ಕೇಳಿದಾಗ, ಏಳು ಜನರ ಗುಂಪಿನ ಒಬ್ಬರು, “ಚುನಾವಣಾ ಆಯೋಗದ ಮತದಾರರ ಪಟ್ಟಿಯ ಮೂಲಕ” ಎಂದು ಉತ್ತರಿಸಿದ್ದಾರೆ. “ಒಂದು ಪಂಚಾಯತ್‌ನಲ್ಲಿ ಕನಿಷ್ಠ 50 ಇಂತಹ ಪ್ರಕರಣಗಳಿವೆ” ಎಂದು ಅವರಲ್ಲಿ ಒಬ್ಬರು ಹೇಳಿದ್ದಾರೆ. “ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಕ್ಷೇತ್ರದಲ್ಲಿ ಅನೇಕ ಮತದಾರರನ್ನು ಸತ್ತೋಗಿದ್ದಾರೆ ಎಂಬುವುದಾಗಿ ತೋರಿಸಲಾಗಿದೆ” ಎಂದಿದ್ದಾರೆ.

ಗುಂಪಿನಲ್ಲಿದ್ದ 85 ವರ್ಷದ ಮಹಿಳೆಯೊಬ್ಬರನ್ನು ತೋರಿಸುತ್ತಾ, “ಚುನಾವಣಾ ಆಯೋಗವು ಅವರನ್ನು ‘ಸತ್ತೋಗಿದ್ದಾರೆ’ ಎಂದು ಘೋಷಿಸಿದೆ ಮತ್ತು ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ.

“ಈ ಜನರು ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಲು 4-5 ಗಂಟೆಗಳ ಕಾಲ ಸುಪ್ರೀಂ ಕೋರ್ಟ್‌ನಲ್ಲಿ ನಿಂತಿದ್ದಾರೆ. ಇವರು ಸತ್ತೋಗಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿರುವ ಪಟ್ಟಿ ನಮ್ಮಲ್ಲಿದೆ.
ಚುನಾವಣಾ ಆಯೋಗ 65 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದೆ. ಈ ಪೈಕಿ 22 ಲಕ್ಷ ಜನರು ಸತ್ತೋಗಿದ್ದಾರೆ. 35 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ ಅಥವಾ ಅವರ ಹೆಸರು ಹಲವು ಬಾರಿ ಇತ್ತು ಎಂದು ಚುನಾವಣಾ ಆಯೋಗ ಹೇಳಿದೆ” ಎಂದು ಆ ವ್ಯಕ್ತಿ ರಾಹುಲ್ ಗಾಂಧಿ ಮುಂದೆ ವಿವರಿಸಿದ್ದಾರೆ ಮತ್ತು ಈ 35 ಲಕ್ಷ ಜನರು ಯಾರು?” ಎಂದು ಪ್ರಶ್ನಿಸಿದ್ದಾರೆ.

ಗುಂಪಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ,”ಆಧಾರ್ ಕಾರ್ಡ್‌, ಬ್ಯಾಂಕ್ ಪಾಸ್‌ಬುಕ್ ಮತ್ತು ಇತರ ದಾಖಲೆಗಳನ್ನು ನೀಡಿದ್ದರೂ, ನಾನು ಸತ್ತೋಗಿದ್ದೇನೆ ಎಂದು ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಘೋಷಿಸಿದೆ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಚುನಾವಣಾ ಆಯೋಗ ಈ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿಲ್ಲ” ಎಂದಿದ್ದಾರೆ.

ಸಿಬಿಐ ಮತ್ತು ಇಡಿ ವಿಫಲವಾದ್ದರಿಂದ ಬಿಜೆಪಿ ಈಗ ಚುನಾವಣಾ ಆಯೋಗವನ್ನು ಬಳಸುತ್ತಿದೆ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...