Homeಮುಖಪುಟಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

ಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

- Advertisement -
- Advertisement -

ಬಿಹಾರದಲ್ಲಿ ಆಗಸ್ಟ್ 1ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ‘ಸತ್ತೋಗಿದ್ದಾರೆ’ ಎಂದು ಚುನಾವಣಾ ಆಯೋಗ ಘೋಷಿಸಿರುವ ಏಳು ಜನರ ಗುಂಪನ್ನು ಬುಧವಾರ (ಆ.13) ರಾಹುಲ್ ಗಾಂಧಿ ದೆಹಲಿಯಲ್ಲಿ ಭೇಟಿಯಾದರು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲೇ, ಏಳು ಜನರ ಗುಂಪು ಬಿಹಾರದಿಂದ ದೆಹಲಿಗೆ ಪ್ರಯಾಣಿಸಿ ರಾಹುಲ್ ಗಾಂಧಿಯನ್ನು ಭೇಟಿಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಜೀವನದಲ್ಲಿ ಅನೇಕ ಆಸಕ್ತಿದಾಯಕ ಅನುಭವಗಳು ಆಗಿವೆ. ಆದರೆ, ‘ಸತ್ತ ಜನರೊಂದಿಗೆ’ ಟೀ ಕುಡಿಯುವ ಅವಕಾಶ ಎಂದಿಗೂ ಸಿಕ್ಕಿರಲಿಲ್ಲ. ಈ ವಿಶಿಷ್ಟ ಅನುಭವಕ್ಕಾಗಿ ಚುನಾವಣಾ ಆಯೋಗಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ, ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಸತ್ತೋಗಿದ್ದಾರೆ ಎಂದು ಗುರುತಿಸಿರುವ ಗುಂಪಿನೊಂದಿಗೆ ರಾಹುಲ್ ಗಾಂಧಿ ಚರ್ಚೆ ನಡೆಸುತ್ತಿರುವುದನ್ನು ನೋಡಬಹುದು.

“ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳು ಕಾಣೆಯಾಗಿವೆ ಎಂದು ನಿಮಗೆ ಹೇಗೆ ತಿಳಿಯಿತು?” ಎಂದು ರಾಹುಲ್ ಗಾಂಧಿ ಕೇಳಿದಾಗ, ಏಳು ಜನರ ಗುಂಪಿನ ಒಬ್ಬರು, “ಚುನಾವಣಾ ಆಯೋಗದ ಮತದಾರರ ಪಟ್ಟಿಯ ಮೂಲಕ” ಎಂದು ಉತ್ತರಿಸಿದ್ದಾರೆ. “ಒಂದು ಪಂಚಾಯತ್‌ನಲ್ಲಿ ಕನಿಷ್ಠ 50 ಇಂತಹ ಪ್ರಕರಣಗಳಿವೆ” ಎಂದು ಅವರಲ್ಲಿ ಒಬ್ಬರು ಹೇಳಿದ್ದಾರೆ. “ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಕ್ಷೇತ್ರದಲ್ಲಿ ಅನೇಕ ಮತದಾರರನ್ನು ಸತ್ತೋಗಿದ್ದಾರೆ ಎಂಬುವುದಾಗಿ ತೋರಿಸಲಾಗಿದೆ” ಎಂದಿದ್ದಾರೆ.

ಗುಂಪಿನಲ್ಲಿದ್ದ 85 ವರ್ಷದ ಮಹಿಳೆಯೊಬ್ಬರನ್ನು ತೋರಿಸುತ್ತಾ, “ಚುನಾವಣಾ ಆಯೋಗವು ಅವರನ್ನು ‘ಸತ್ತೋಗಿದ್ದಾರೆ’ ಎಂದು ಘೋಷಿಸಿದೆ ಮತ್ತು ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ.

“ಈ ಜನರು ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಲು 4-5 ಗಂಟೆಗಳ ಕಾಲ ಸುಪ್ರೀಂ ಕೋರ್ಟ್‌ನಲ್ಲಿ ನಿಂತಿದ್ದಾರೆ. ಇವರು ಸತ್ತೋಗಿದ್ದಾರೆ ಎಂದು ಚುನಾವಣಾ ಆಯೋಗ ಘೋಷಿಸಿರುವ ಪಟ್ಟಿ ನಮ್ಮಲ್ಲಿದೆ.
ಚುನಾವಣಾ ಆಯೋಗ 65 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದೆ. ಈ ಪೈಕಿ 22 ಲಕ್ಷ ಜನರು ಸತ್ತೋಗಿದ್ದಾರೆ. 35 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ ಅಥವಾ ಅವರ ಹೆಸರು ಹಲವು ಬಾರಿ ಇತ್ತು ಎಂದು ಚುನಾವಣಾ ಆಯೋಗ ಹೇಳಿದೆ” ಎಂದು ಆ ವ್ಯಕ್ತಿ ರಾಹುಲ್ ಗಾಂಧಿ ಮುಂದೆ ವಿವರಿಸಿದ್ದಾರೆ ಮತ್ತು ಈ 35 ಲಕ್ಷ ಜನರು ಯಾರು?” ಎಂದು ಪ್ರಶ್ನಿಸಿದ್ದಾರೆ.

ಗುಂಪಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ,”ಆಧಾರ್ ಕಾರ್ಡ್‌, ಬ್ಯಾಂಕ್ ಪಾಸ್‌ಬುಕ್ ಮತ್ತು ಇತರ ದಾಖಲೆಗಳನ್ನು ನೀಡಿದ್ದರೂ, ನಾನು ಸತ್ತೋಗಿದ್ದೇನೆ ಎಂದು ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಘೋಷಿಸಿದೆ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಚುನಾವಣಾ ಆಯೋಗ ಈ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿಲ್ಲ” ಎಂದಿದ್ದಾರೆ.

ಸಿಬಿಐ ಮತ್ತು ಇಡಿ ವಿಫಲವಾದ್ದರಿಂದ ಬಿಜೆಪಿ ಈಗ ಚುನಾವಣಾ ಆಯೋಗವನ್ನು ಬಳಸುತ್ತಿದೆ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...