Homeಮುಖಪುಟಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು...

ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು ಕಣಕ್ಕೆ…

- Advertisement -
- Advertisement -

ಟಿವಿ ಚರ್ಚೆಯೊಂದರಲ್ಲಿ ಬಿಜೆಪಿಯ ಸಂಬಿತ್‌ ಪಾತ್ರರನ್ನು ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ಗೌರವ್‌ ವಲ್ಲಭ್ ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಗೌರವ್ ವಲ್ಲಭ್ ಜಾರ್ಖಂಡ್ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಜಾರ್ಖಂಡ್ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೆಯದು ನವೆಂಬರ್ 30 ರಂದು ಮತ್ತು ಕೊನೆಯದು ಡಿಸೆಂಬರ್ 20 ರಂದು ನಡೆಯಲಿದೆ. ಡಿಸೆಂಬರ್ 23 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: ಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರನ್ನು ಜೆಮ್‌ಶೆಡ್‌ಪುರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಎದುರಿಸಲು ಕಾಂಗ್ರೆಸ್ ತನ್ನ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರನ್ನು ಶನಿವಾರ ಕಣಕ್ಕಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ  ವಲ್ಲಭ್ ಅವರ ಉಮೇದುವಾರಿಕೆಯನ್ನು ಅಂಗೀಕರಿಸಿದ್ದಾರೆ. ಇದರೊಂದಿಗೆ ಜಾರ್ಖಂಡ್ ಚುನಾವಣೆಗೆ ಕಾಂಗ್ರೆಸ್ ಈವರೆಗೆ ಘೋಷಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 27 ಆಗಿದೆ.

ರಾಜಸ್ಥಾನದ ಪಾಲಿ ನಗರದ ನಿವಾಸಿಯಾದ 42 ವರ್ಷದ ಗೌರವ್ ವಲ್ಲಭ್, ಪಾಲಿಯಲ್ಲಿ ಶಾಲಾ ಶಿಕ್ಷಣದ ನಂತರ ಜೈಪುರದಿಂದ ಸಿಎ ಅಧ್ಯಯನ ಮಾಡಿದರು. ಗೌರವ್ ಅವರ ಪೋಷಕರು ಪಾಲಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಗೌರವ್ 2000-2003ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್ ಪೂನಾದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಇದರೊಂದಿಗೆ ಅವರು ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದ ಅಜ್ಮೀರ್‌ನಿಂದ ಎಂ.ಕಾಂನಲ್ಲಿ ‘ಚಿನ್ನದ ಪದಕ’ವನ್ನು ಗಳಿಸಿದ್ದಾರೆ.

‘2017ರವರೆಗೆ ನಾನು ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದೆ, ಆನಂತರ ಭಾರತಕ್ಕೆ ಮರಳಿದೆ. ನಮ್ಮ ದೇಶದಲ್ಲಿ ಮಾಬ್ ಲಿಂಚಿಂಗ್ (ಗುಂಪು ಹಲ್ಲೆ) ಹೆಸರಿನಲ್ಲಿ ಜನರನ್ನು ದ್ವೇಷಕ್ಕೆ ಸಜ್ಜುಗೊಳಿಸಲಾಗುತ್ತಿದೆ. ಇದರ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ. ಆದ್ದರಿಂದ 2018 ರವರೆಗೆ ಪ್ಯಾನೆಲಿಸ್ಟ್ ಆಗಿ ಕೆಲಸ ಮಾಡಿದೆ, ಈ ವರ್ಷದ ಜನವರಿಯಲ್ಲಿ ರಾಷ್ಟ್ರೀಯ ವಕ್ತಾರನಾಗಿದ್ದೇನೆ ಎನ್ನುತ್ತಾರೆ.

ಇದನ್ನೂ ಓದಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ: 81 ಕ್ಷೇತ್ರಗಳಿಗೆ 5 ಹಂತಗಳಲ್ಲಿ ಚುನಾವಣೆ..

“ಸಿಎಂ ರಘುವರ್ ದಾಸ್ ಜಿ ವಿರುದ್ಧ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಪೂರ್ವ ಅಸೆಂಬ್ಲಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಿದೆ. ಮುಖ್ಯಮಂತ್ರಿ ಎದುರು ಸ್ಪರ್ಧಿಸುವ ಸವಾಲಿಗೆ ನಾನು ಸಿದ್ಧ. ಇಷ್ಟು ದಿನ ಜಾರ್ಖಂಡ್ ಜನರನ್ನು ಮೋಸಗೊಳಿಸಲಾಗಿದೆ ಮತ್ತು ಈ ಚುನಾವಣಾ ಸ್ಪರ್ಧೆಯಲ್ಲಿ ನಾನು ವಿಜಯಶಾಲಿಯಾಗುತ್ತೇನೆ. ನನ್ನ ಮೇಲೆ ನಂಬಿಕೆಯನ್ನು ಇಟ್ಟ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಪದಾಧಿಕಾರಿಗಳಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಿಮ್ಮ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ” ಎಂದು ಗೌರವ್‌ ವಲ್ಲಭ್‌ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

 

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ರವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಇತ್ತೀಚೆಗೆ ಚುನಾವಣಾ ಪೂರ್ವ ಒಪ್ಪಂದವನ್ನು ಘೋಷಿಸಿವೆ.

ಇದನ್ನೂ ಓದಿ: ಐದು ಟ್ರಿಲಿಯನ್ ಡಾಲರ್ ನಲ್ಲಿ ಎಷ್ಟು ಸೊನ್ನೆಯಿವೆ ಹೇಳಿ ನೋಡೋಣ??

ಜಾರ್ಖಂಡ್ ವಿಧಾನಸಭೆಯಲ್ಲಿ 81 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಕಾಂಗ್ರೆಸ್ ಸ್ಪರ್ಧಿಸಲಿದೆ. ಆರ್‌ಜೆಡಿ ಏಳು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೈತ್ರಿಕೂಟದ ಬಹುಪಾಲು ಪಾಲು ಜೆಎಂಎಂಗೆ ಹೋಗಿದ್ದು ಅದು 43 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಏಕಾಂಗಿಯಾಗಿ ಕಣಕ್ಕಿಳಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...