Homeಕರ್ನಾಟಕ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಪ್ರಮುಖ ದಿನ ಪತ್ರಿಕೆಯಾಗಿರುವ ‘ವಾರ್ತಾಭಾರತಿ’ ಗೆ ರಾಜ್ಯ ಸರ್ಕಾರ ತನ್ನ ಸರ್ಕಾರಿ ಜಾಹಿರಾತುಗಳನ್ನು ನೀಡದೆ ಇರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ವಾರ್ತಾಇಲಾಖೆಯ ಆಯುಕ್ತರಾಗಿರುವ ಡಾ.ಪಿ.ಎಸ್. ಹರ್ಷ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಅವರು ಪತ್ರಿಕೆಯ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಪತ್ರಿಕೆಯೊಂದಕ್ಕೆ ಅನ್ಯಾಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದಾರೆ.

ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, “ವಾರ್ತಾಭಾರತಿ ಪತ್ರಿಕೆಗೆ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ಸಿದ್ದರಾಮಯ್ಯ ಅವರು ತನ್ನ ಪತ್ರದಲ್ಲಿ, “ಕರ್ನಾಟಕದಲ್ಲಿ ನೈಜ ಸ್ಫೂರ್ತಿಯಲ್ಲಿ ಪತ್ರಿಕಾ ವೃತ್ತಿಯನ್ನು ನಿರ್ವಹಿಸುತ್ತಿರುವ ಮಾಧ್ಯಮಗಳಲ್ಲಿ ‘ವಾರ್ತಾಭಾರತಿ’ ಕೂಡ ಒಂದು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ರಂಗಗಳಿಗೆ ಭಾರತದ ಸಂವಿಧಾನದ ಆಶಯಗಳೆ ಆತ್ಯಂತಿಕವಾಗಿವೆ. ನಮ್ಮ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುವವರೆಲ್ಲರೂ ನೈಜ ಸ್ಫೂರ್ತಿಯಿಂದ ಕೆಲಸ ಮಾಡುತ್ತಿದ್ದಾರೆಂದು ಅರ್ಥ” ಎಂದು ಹೇಳಿದ್ದಾರೆ.

“ಈ ನಾಲ್ಕೂ ಅಂಗಗಳು ತಮಗೆ ನಿರ್ಧಿಷ್ಟ ಪಡಿಸಿದ ಚೌಕಟ್ಟುಗಳಲ್ಲೆ ಕೆಲಸ ಮಾಡಬೇಕು. ಹಾಗೆ ಒಂದು ಚೌಕಟ್ಟನ್ನು ವಿಧಿಸಿಕೊಂಡು ಕೆಲಸ ಮಾಡುತ್ತಿರುವ ಪತ್ರಿಕೆಗಳಲ್ಲಿ ವಾರ್ತಾಭಾರತಿ ಕೂಡ ಒಂದು. ನಾನದರ ಓದುಗ ಆಗಿರುವುದರಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ ಮೂರು ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರವು ‘ನ್ಯೂಸ್‌ ಪ್ರಿಂಟ್‌’ನ ಜಿಲೆ ವಿಪರೀತ ಹೆಚ್ಚಿಸಿದೆ. ಜಿಎಸ್‌ಟಿಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೊಡ್ಡ ದೊಡ್ಡ ಪತ್ರಿಕೆಗಳು ಕೂಡ ದಿನ ನಿತ್ಯದ ಚಟುವಟಿಕೆಗಳನ್ನು ನಡೆಸಲೂ ಆಗದಷ್ಟು ಸುಸ್ತಾಗುತ್ತಿವೆ. ಇದರಿಂದಾಗಿ ಲೆಕ್ಕವಿಲ್ಲದಷ್ಟು ಪತ್ರಕರ್ತರನ್ನು ಕೆಲಸದಿಂದ ತೆಗೆದು ಹಾಕಿವೆ. ಅನೇಕ ಪತ್ರಿಕೆಗಳು ಸಾಲ ತಗೆದು, ಆಸ್ತಿ ಪಾಸ್ತಿಗಳನ್ನು ಮಾರಿ ನಿರ್ವಹಣೆ ಮಾಡುತ್ತಿವೆ” ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಮಾಧ್ಯಮಗಳು ಉಳಿಯಬೇಕು. ಕೇಂದ್ರ ಸರ್ಕಾರಕ್ಕೆ ಈ ಕುರಿತು ಕಾಳಜಿಗಳಿದ್ದರೆ ನ್ಯೂಸ್‌‌ ಪ್ರಿಂಟ್‌ನ ಬೆಲೆಯನ್ನು ಇಳಿಸಬೇಕು. ಅತಿ ಕಡಿಮೆ ದರದಲ್ಲಿ ಪತ್ರಿಕೆಗಳಿಗೆ ಪೂರೈಸಬೇಕು. ಇಂಥ ಸಂದರ್ಭದಲ್ಲಿ ಪತ್ರಿಕೆಗಳು ಸರ್ಕಾರವು ನೀಡುವ ಜಾಹಿರಾತುಗಳ ಮೇಲೆ ಅವಲಂಬಿತವಾಗುತ್ತವೆ. ಸರ್ಕಾರವು ನಿಷ್ಟಕ್ರಪಾತವಾಗಿ ಜಾಹಿರಾತುಗಳನ್ನು ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

“ನಮ್ಮ ಸರ್ಕಾರದ ಅವಧಿಯಲ್ಲಿ ಹೊಸದಿಗಂತದಂತಹ ಪತ್ರಿಕೆಗಳಿಗೆ ಕೂಡ ಉಳಿದ ಪತ್ರಿಕೆಗಳಿಗೆ ನೀಡಿದ ಪ್ರಮಾಣದಲ್ಲೆ ಜಾಹಿರಾತುಗಳನ್ನು ನೀಡಿದ್ದೆವು. ಜನರ ತೆರಿಗೆ ಹಣದಲ್ಲಿ ಸರ್ಕಾರ ನಡೆಸುವಾಗ ಸರ್ಕಾರಗಳು ಪಕ್ಷಪಾತ ಮಾಡದಂತೆ ಎಚ್ಚರವಹಿಸಬೇಕಾಗುತ್ತದೆ. ಕನ್ನಡದ 9 ದಿನಪತ್ರಿಕೆಗಳನ್ನು ರಾಜ್ಯ ಪತ್ರಿಕೆಗಳಂದು ಗುರುತಿಸಲಾಗಿದೆ. ಅದರಲ್ಲಿ ವಾರ್ತಾಭಾರತಿ ಕೂಡ ಒಂದು. ಆದರೆ ಸರ್ಕಾರವು ಪಕ್ಷಪಾತ ಮಾಡಿ ಕಳೆದ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪತ್ರಿಕೆಗಳ ಕೆಲಸವೆ ಆಡಳಿತ ನಡೆಸುವ ಸರ್ಕಾರಗಳ ಮುಖಕ್ಕೆ ಕನ್ನಡಿ ಹಿಡಿಯುವುದು. ಸರಿಯಾದ ಕೆಲಸ ಮಾಡಿದರೆ ಬೆನ್ನುತಟ್ಟುವುದು, ತಪ್ಪು ಮಾಡಿದರೆ ತಪ್ಪು ಮಾಡುತ್ತಿದ್ದೀರೆಂದು ಹೇಳಬೇಕಾದುದು ಮಾಧ್ಯಮಗಳ ನೈತಿಕ ಜವಾಬ್ದಾರಿ. ಈ ನಿಲುವಿಗೆ ವಿರುದ್ಧವಾದರೆ ಅದನ್ನು ಅನೈತಿಕ ಪತ್ರಿಕೋದ್ಯಮ ಎನ್ನಬೇಕಾಗುತ್ತದೆ. ನೈತಿಕ ಪತ್ರಿಕೋದ್ಯಮವನ್ನು ಆರೋಗ್ಯಕರ ಮನಸ್ಸುಗಳು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ ಸರ್ಕಾರವು ವಾರ್ತಾಭಾರತಿಗೆ ಮಾಡಿರುವ ಅನ್ಯಾಯವನ್ನು ಕೂಡಲೆ ಸರಿಪಡಿಸಿ ಇದುವರೆಗೆ ತಡೆಹಿಡಿದಿರುವ ಮೌಲ್ಯದಷ್ಟು ಜಾಹಿರಾತುಗಳನ್ನು ನೀಡಬೇಕು. ಅಲ್ಲದೆ ಇನ್ನು ಮುಂದೆ ಸರ್ಕಾರ ನೀಡುವ ಜಾಹಿರಾತುಗಳನ್ನು ತಾರತಮ್ಯವಿಲ್ಲದೆ ಬಿಡುಗಡೆ ಮಾಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. That’s true … Varthabarathi is a great paper, reports ground reality as it is. It’s unjust from PS Harsha take personal revenge.
    Change this biased officer if he is found guilty.
    We need media/newspaper which is genuine and reports the reality of the world.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...