Homeಕರ್ನಾಟಕ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಪ್ರಮುಖ ದಿನ ಪತ್ರಿಕೆಯಾಗಿರುವ ‘ವಾರ್ತಾಭಾರತಿ’ ಗೆ ರಾಜ್ಯ ಸರ್ಕಾರ ತನ್ನ ಸರ್ಕಾರಿ ಜಾಹಿರಾತುಗಳನ್ನು ನೀಡದೆ ಇರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ವಾರ್ತಾಇಲಾಖೆಯ ಆಯುಕ್ತರಾಗಿರುವ ಡಾ.ಪಿ.ಎಸ್. ಹರ್ಷ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಅವರು ಪತ್ರಿಕೆಯ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಪತ್ರಿಕೆಯೊಂದಕ್ಕೆ ಅನ್ಯಾಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದಾರೆ.

ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, “ವಾರ್ತಾಭಾರತಿ ಪತ್ರಿಕೆಗೆ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ಸಿದ್ದರಾಮಯ್ಯ ಅವರು ತನ್ನ ಪತ್ರದಲ್ಲಿ, “ಕರ್ನಾಟಕದಲ್ಲಿ ನೈಜ ಸ್ಫೂರ್ತಿಯಲ್ಲಿ ಪತ್ರಿಕಾ ವೃತ್ತಿಯನ್ನು ನಿರ್ವಹಿಸುತ್ತಿರುವ ಮಾಧ್ಯಮಗಳಲ್ಲಿ ‘ವಾರ್ತಾಭಾರತಿ’ ಕೂಡ ಒಂದು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ರಂಗಗಳಿಗೆ ಭಾರತದ ಸಂವಿಧಾನದ ಆಶಯಗಳೆ ಆತ್ಯಂತಿಕವಾಗಿವೆ. ನಮ್ಮ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುವವರೆಲ್ಲರೂ ನೈಜ ಸ್ಫೂರ್ತಿಯಿಂದ ಕೆಲಸ ಮಾಡುತ್ತಿದ್ದಾರೆಂದು ಅರ್ಥ” ಎಂದು ಹೇಳಿದ್ದಾರೆ.

“ಈ ನಾಲ್ಕೂ ಅಂಗಗಳು ತಮಗೆ ನಿರ್ಧಿಷ್ಟ ಪಡಿಸಿದ ಚೌಕಟ್ಟುಗಳಲ್ಲೆ ಕೆಲಸ ಮಾಡಬೇಕು. ಹಾಗೆ ಒಂದು ಚೌಕಟ್ಟನ್ನು ವಿಧಿಸಿಕೊಂಡು ಕೆಲಸ ಮಾಡುತ್ತಿರುವ ಪತ್ರಿಕೆಗಳಲ್ಲಿ ವಾರ್ತಾಭಾರತಿ ಕೂಡ ಒಂದು. ನಾನದರ ಓದುಗ ಆಗಿರುವುದರಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ ಮೂರು ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರವು ‘ನ್ಯೂಸ್‌ ಪ್ರಿಂಟ್‌’ನ ಜಿಲೆ ವಿಪರೀತ ಹೆಚ್ಚಿಸಿದೆ. ಜಿಎಸ್‌ಟಿಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೊಡ್ಡ ದೊಡ್ಡ ಪತ್ರಿಕೆಗಳು ಕೂಡ ದಿನ ನಿತ್ಯದ ಚಟುವಟಿಕೆಗಳನ್ನು ನಡೆಸಲೂ ಆಗದಷ್ಟು ಸುಸ್ತಾಗುತ್ತಿವೆ. ಇದರಿಂದಾಗಿ ಲೆಕ್ಕವಿಲ್ಲದಷ್ಟು ಪತ್ರಕರ್ತರನ್ನು ಕೆಲಸದಿಂದ ತೆಗೆದು ಹಾಕಿವೆ. ಅನೇಕ ಪತ್ರಿಕೆಗಳು ಸಾಲ ತಗೆದು, ಆಸ್ತಿ ಪಾಸ್ತಿಗಳನ್ನು ಮಾರಿ ನಿರ್ವಹಣೆ ಮಾಡುತ್ತಿವೆ” ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಮಾಧ್ಯಮಗಳು ಉಳಿಯಬೇಕು. ಕೇಂದ್ರ ಸರ್ಕಾರಕ್ಕೆ ಈ ಕುರಿತು ಕಾಳಜಿಗಳಿದ್ದರೆ ನ್ಯೂಸ್‌‌ ಪ್ರಿಂಟ್‌ನ ಬೆಲೆಯನ್ನು ಇಳಿಸಬೇಕು. ಅತಿ ಕಡಿಮೆ ದರದಲ್ಲಿ ಪತ್ರಿಕೆಗಳಿಗೆ ಪೂರೈಸಬೇಕು. ಇಂಥ ಸಂದರ್ಭದಲ್ಲಿ ಪತ್ರಿಕೆಗಳು ಸರ್ಕಾರವು ನೀಡುವ ಜಾಹಿರಾತುಗಳ ಮೇಲೆ ಅವಲಂಬಿತವಾಗುತ್ತವೆ. ಸರ್ಕಾರವು ನಿಷ್ಟಕ್ರಪಾತವಾಗಿ ಜಾಹಿರಾತುಗಳನ್ನು ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

“ನಮ್ಮ ಸರ್ಕಾರದ ಅವಧಿಯಲ್ಲಿ ಹೊಸದಿಗಂತದಂತಹ ಪತ್ರಿಕೆಗಳಿಗೆ ಕೂಡ ಉಳಿದ ಪತ್ರಿಕೆಗಳಿಗೆ ನೀಡಿದ ಪ್ರಮಾಣದಲ್ಲೆ ಜಾಹಿರಾತುಗಳನ್ನು ನೀಡಿದ್ದೆವು. ಜನರ ತೆರಿಗೆ ಹಣದಲ್ಲಿ ಸರ್ಕಾರ ನಡೆಸುವಾಗ ಸರ್ಕಾರಗಳು ಪಕ್ಷಪಾತ ಮಾಡದಂತೆ ಎಚ್ಚರವಹಿಸಬೇಕಾಗುತ್ತದೆ. ಕನ್ನಡದ 9 ದಿನಪತ್ರಿಕೆಗಳನ್ನು ರಾಜ್ಯ ಪತ್ರಿಕೆಗಳಂದು ಗುರುತಿಸಲಾಗಿದೆ. ಅದರಲ್ಲಿ ವಾರ್ತಾಭಾರತಿ ಕೂಡ ಒಂದು. ಆದರೆ ಸರ್ಕಾರವು ಪಕ್ಷಪಾತ ಮಾಡಿ ಕಳೆದ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪತ್ರಿಕೆಗಳ ಕೆಲಸವೆ ಆಡಳಿತ ನಡೆಸುವ ಸರ್ಕಾರಗಳ ಮುಖಕ್ಕೆ ಕನ್ನಡಿ ಹಿಡಿಯುವುದು. ಸರಿಯಾದ ಕೆಲಸ ಮಾಡಿದರೆ ಬೆನ್ನುತಟ್ಟುವುದು, ತಪ್ಪು ಮಾಡಿದರೆ ತಪ್ಪು ಮಾಡುತ್ತಿದ್ದೀರೆಂದು ಹೇಳಬೇಕಾದುದು ಮಾಧ್ಯಮಗಳ ನೈತಿಕ ಜವಾಬ್ದಾರಿ. ಈ ನಿಲುವಿಗೆ ವಿರುದ್ಧವಾದರೆ ಅದನ್ನು ಅನೈತಿಕ ಪತ್ರಿಕೋದ್ಯಮ ಎನ್ನಬೇಕಾಗುತ್ತದೆ. ನೈತಿಕ ಪತ್ರಿಕೋದ್ಯಮವನ್ನು ಆರೋಗ್ಯಕರ ಮನಸ್ಸುಗಳು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ ಸರ್ಕಾರವು ವಾರ್ತಾಭಾರತಿಗೆ ಮಾಡಿರುವ ಅನ್ಯಾಯವನ್ನು ಕೂಡಲೆ ಸರಿಪಡಿಸಿ ಇದುವರೆಗೆ ತಡೆಹಿಡಿದಿರುವ ಮೌಲ್ಯದಷ್ಟು ಜಾಹಿರಾತುಗಳನ್ನು ನೀಡಬೇಕು. ಅಲ್ಲದೆ ಇನ್ನು ಮುಂದೆ ಸರ್ಕಾರ ನೀಡುವ ಜಾಹಿರಾತುಗಳನ್ನು ತಾರತಮ್ಯವಿಲ್ಲದೆ ಬಿಡುಗಡೆ ಮಾಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. That’s true … Varthabarathi is a great paper, reports ground reality as it is. It’s unjust from PS Harsha take personal revenge.
    Change this biased officer if he is found guilty.
    We need media/newspaper which is genuine and reports the reality of the world.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...