Homeಕರ್ನಾಟಕ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಪ್ರಮುಖ ದಿನ ಪತ್ರಿಕೆಯಾಗಿರುವ ‘ವಾರ್ತಾಭಾರತಿ’ ಗೆ ರಾಜ್ಯ ಸರ್ಕಾರ ತನ್ನ ಸರ್ಕಾರಿ ಜಾಹಿರಾತುಗಳನ್ನು ನೀಡದೆ ಇರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ವಾರ್ತಾಇಲಾಖೆಯ ಆಯುಕ್ತರಾಗಿರುವ ಡಾ.ಪಿ.ಎಸ್. ಹರ್ಷ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಅವರು ಪತ್ರಿಕೆಯ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಪತ್ರಿಕೆಯೊಂದಕ್ಕೆ ಅನ್ಯಾಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದಾರೆ.

ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, “ವಾರ್ತಾಭಾರತಿ ಪತ್ರಿಕೆಗೆ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ಸಿದ್ದರಾಮಯ್ಯ ಅವರು ತನ್ನ ಪತ್ರದಲ್ಲಿ, “ಕರ್ನಾಟಕದಲ್ಲಿ ನೈಜ ಸ್ಫೂರ್ತಿಯಲ್ಲಿ ಪತ್ರಿಕಾ ವೃತ್ತಿಯನ್ನು ನಿರ್ವಹಿಸುತ್ತಿರುವ ಮಾಧ್ಯಮಗಳಲ್ಲಿ ‘ವಾರ್ತಾಭಾರತಿ’ ಕೂಡ ಒಂದು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ರಂಗಗಳಿಗೆ ಭಾರತದ ಸಂವಿಧಾನದ ಆಶಯಗಳೆ ಆತ್ಯಂತಿಕವಾಗಿವೆ. ನಮ್ಮ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುವವರೆಲ್ಲರೂ ನೈಜ ಸ್ಫೂರ್ತಿಯಿಂದ ಕೆಲಸ ಮಾಡುತ್ತಿದ್ದಾರೆಂದು ಅರ್ಥ” ಎಂದು ಹೇಳಿದ್ದಾರೆ.

“ಈ ನಾಲ್ಕೂ ಅಂಗಗಳು ತಮಗೆ ನಿರ್ಧಿಷ್ಟ ಪಡಿಸಿದ ಚೌಕಟ್ಟುಗಳಲ್ಲೆ ಕೆಲಸ ಮಾಡಬೇಕು. ಹಾಗೆ ಒಂದು ಚೌಕಟ್ಟನ್ನು ವಿಧಿಸಿಕೊಂಡು ಕೆಲಸ ಮಾಡುತ್ತಿರುವ ಪತ್ರಿಕೆಗಳಲ್ಲಿ ವಾರ್ತಾಭಾರತಿ ಕೂಡ ಒಂದು. ನಾನದರ ಓದುಗ ಆಗಿರುವುದರಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ ಮೂರು ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರವು ‘ನ್ಯೂಸ್‌ ಪ್ರಿಂಟ್‌’ನ ಜಿಲೆ ವಿಪರೀತ ಹೆಚ್ಚಿಸಿದೆ. ಜಿಎಸ್‌ಟಿಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೊಡ್ಡ ದೊಡ್ಡ ಪತ್ರಿಕೆಗಳು ಕೂಡ ದಿನ ನಿತ್ಯದ ಚಟುವಟಿಕೆಗಳನ್ನು ನಡೆಸಲೂ ಆಗದಷ್ಟು ಸುಸ್ತಾಗುತ್ತಿವೆ. ಇದರಿಂದಾಗಿ ಲೆಕ್ಕವಿಲ್ಲದಷ್ಟು ಪತ್ರಕರ್ತರನ್ನು ಕೆಲಸದಿಂದ ತೆಗೆದು ಹಾಕಿವೆ. ಅನೇಕ ಪತ್ರಿಕೆಗಳು ಸಾಲ ತಗೆದು, ಆಸ್ತಿ ಪಾಸ್ತಿಗಳನ್ನು ಮಾರಿ ನಿರ್ವಹಣೆ ಮಾಡುತ್ತಿವೆ” ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಮಾಧ್ಯಮಗಳು ಉಳಿಯಬೇಕು. ಕೇಂದ್ರ ಸರ್ಕಾರಕ್ಕೆ ಈ ಕುರಿತು ಕಾಳಜಿಗಳಿದ್ದರೆ ನ್ಯೂಸ್‌‌ ಪ್ರಿಂಟ್‌ನ ಬೆಲೆಯನ್ನು ಇಳಿಸಬೇಕು. ಅತಿ ಕಡಿಮೆ ದರದಲ್ಲಿ ಪತ್ರಿಕೆಗಳಿಗೆ ಪೂರೈಸಬೇಕು. ಇಂಥ ಸಂದರ್ಭದಲ್ಲಿ ಪತ್ರಿಕೆಗಳು ಸರ್ಕಾರವು ನೀಡುವ ಜಾಹಿರಾತುಗಳ ಮೇಲೆ ಅವಲಂಬಿತವಾಗುತ್ತವೆ. ಸರ್ಕಾರವು ನಿಷ್ಟಕ್ರಪಾತವಾಗಿ ಜಾಹಿರಾತುಗಳನ್ನು ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

“ನಮ್ಮ ಸರ್ಕಾರದ ಅವಧಿಯಲ್ಲಿ ಹೊಸದಿಗಂತದಂತಹ ಪತ್ರಿಕೆಗಳಿಗೆ ಕೂಡ ಉಳಿದ ಪತ್ರಿಕೆಗಳಿಗೆ ನೀಡಿದ ಪ್ರಮಾಣದಲ್ಲೆ ಜಾಹಿರಾತುಗಳನ್ನು ನೀಡಿದ್ದೆವು. ಜನರ ತೆರಿಗೆ ಹಣದಲ್ಲಿ ಸರ್ಕಾರ ನಡೆಸುವಾಗ ಸರ್ಕಾರಗಳು ಪಕ್ಷಪಾತ ಮಾಡದಂತೆ ಎಚ್ಚರವಹಿಸಬೇಕಾಗುತ್ತದೆ. ಕನ್ನಡದ 9 ದಿನಪತ್ರಿಕೆಗಳನ್ನು ರಾಜ್ಯ ಪತ್ರಿಕೆಗಳಂದು ಗುರುತಿಸಲಾಗಿದೆ. ಅದರಲ್ಲಿ ವಾರ್ತಾಭಾರತಿ ಕೂಡ ಒಂದು. ಆದರೆ ಸರ್ಕಾರವು ಪಕ್ಷಪಾತ ಮಾಡಿ ಕಳೆದ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪತ್ರಿಕೆಗಳ ಕೆಲಸವೆ ಆಡಳಿತ ನಡೆಸುವ ಸರ್ಕಾರಗಳ ಮುಖಕ್ಕೆ ಕನ್ನಡಿ ಹಿಡಿಯುವುದು. ಸರಿಯಾದ ಕೆಲಸ ಮಾಡಿದರೆ ಬೆನ್ನುತಟ್ಟುವುದು, ತಪ್ಪು ಮಾಡಿದರೆ ತಪ್ಪು ಮಾಡುತ್ತಿದ್ದೀರೆಂದು ಹೇಳಬೇಕಾದುದು ಮಾಧ್ಯಮಗಳ ನೈತಿಕ ಜವಾಬ್ದಾರಿ. ಈ ನಿಲುವಿಗೆ ವಿರುದ್ಧವಾದರೆ ಅದನ್ನು ಅನೈತಿಕ ಪತ್ರಿಕೋದ್ಯಮ ಎನ್ನಬೇಕಾಗುತ್ತದೆ. ನೈತಿಕ ಪತ್ರಿಕೋದ್ಯಮವನ್ನು ಆರೋಗ್ಯಕರ ಮನಸ್ಸುಗಳು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ ಸರ್ಕಾರವು ವಾರ್ತಾಭಾರತಿಗೆ ಮಾಡಿರುವ ಅನ್ಯಾಯವನ್ನು ಕೂಡಲೆ ಸರಿಪಡಿಸಿ ಇದುವರೆಗೆ ತಡೆಹಿಡಿದಿರುವ ಮೌಲ್ಯದಷ್ಟು ಜಾಹಿರಾತುಗಳನ್ನು ನೀಡಬೇಕು. ಅಲ್ಲದೆ ಇನ್ನು ಮುಂದೆ ಸರ್ಕಾರ ನೀಡುವ ಜಾಹಿರಾತುಗಳನ್ನು ತಾರತಮ್ಯವಿಲ್ಲದೆ ಬಿಡುಗಡೆ ಮಾಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. That’s true … Varthabarathi is a great paper, reports ground reality as it is. It’s unjust from PS Harsha take personal revenge.
    Change this biased officer if he is found guilty.
    We need media/newspaper which is genuine and reports the reality of the world.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...