Homeಮುಖಪುಟಚಿನ್ನ ಕಳ್ಳಸಾಗಣೆ ಆರೋಪ: ನಮ್ಮ ಸರ್ಕಾರ ಸುಳ್ಳಿನ ಅಭಿಯಾನವನ್ನು ಎದುರಿಸುತ್ತಿದೆ ಎಂದ ಪಿಣರಾಯಿ ವಿಜಯನ್

ಚಿನ್ನ ಕಳ್ಳಸಾಗಣೆ ಆರೋಪ: ನಮ್ಮ ಸರ್ಕಾರ ಸುಳ್ಳಿನ ಅಭಿಯಾನವನ್ನು ಎದುರಿಸುತ್ತಿದೆ ಎಂದ ಪಿಣರಾಯಿ ವಿಜಯನ್

- Advertisement -
- Advertisement -

ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಮೇಲೆ ಕೇಳಿ ಬಂದಿರುವ ಆರೋಪಕ್ಕೆ ’ತಮ್ಮ ಸರ್ಕಾರ ಮತ್ತೆ ಸುಳ್ಳಿನ ಪ್ರಚಾರವನ್ನು ಎದುರಿಸುತ್ತಿದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ತಿರುವನಂತಪುರಂನಲ್ಲಿ ನಡೆದ ಸೆಕ್ರೆಟರಿಯೇಟ್ ಎಂಪ್ಲಾಯಿಸ್ ಅಸೋಸಿಯೇಶನ್‌ನ 49ನೇ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಸಿಎಂ ಮಾತನಾಡುತ್ತಿದ್ದರು. ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಸರ್ಕಾರವು “ಸುಳ್ಳಿನ ಪ್ರವಾಹ” ದಿಂದ ಬದುಕುಳಿದಿದೆ. ಆದರೆ, ಜನರು ತಮ್ಮ ಮೇಲೆ ವಿಶ್ವಾಸವಿಟ್ಟಿದ್ದರಿಂದ ಮತ್ತೆ ಅಧಿಕಾರಕ್ಕೆ ಬಂದಿತು ಎಂದು ಹೇಳಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಮಾಡಿರುವ ಆರೋಪಗಳನ್ನು ಸಿಎಂ ಪಿಣರಾಯಿ ವಿಜಯನ್ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ. “ಎಲ್‌ಡಿಎಫ್ ಸರಕಾರಕ್ಕೆ ಒಳ್ಳೆಯ ಹೆಸರು ಇದೆ. ಹಾಗಾಗಿ, ಸರ್ಕಾರಕ್ಕೆ ಮಾನಹಾನಿ ಮಾಡುವ ಹಲವರ ಉದ್ದೇಶದ ಸುಳ್ಳುಗಳ ಪ್ರವಾಹವನ್ನು ಅದು ಜಯಿಸಿದೆ. ಎಲ್‌ಡಿಎಫ್ ಮತ್ತೆ ಅಧಿಕಾರಕ್ಕೆ ಏಕೆ ಬಂತು ಎಂದರೆ ಜನರು ತಮ್ಮ ಬಿಕ್ಕಟ್ಟಿನ ಸಮಯದಲ್ಲಿ ಕಾಳಜಿ ವಹಿಸಿದ ಸರ್ಕಾರವನ್ನು ಬೆಂಬಲಿಸಿದರು” ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಮಂಗಳವಾರ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್,  ಸಿಎಂ ಪಿಣರಾಯಿ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಅಕ್ರಮ ಸಾಗಣೆ ಪ್ರಕರಣದಲ್ಲಿ ಸಿಎಂ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು.

2020 ರ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್, ಅವರ ಪತ್ನಿ ಮತ್ತು ಮಗಳು ಭಾಗಿಯಾಗಿರುವ ಬಗ್ಗೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವುದಾಗಿ ಸ್ವಪ್ನಾ ಸುರೇಶ್ ಮಂಗಳವಾರ ಬಹಿರಂಗಪಡಿಸಿದ್ದಾರೆ.

ಆಕೆಯ ಆರೋಪವನ್ನು ತಳ್ಳಿಹಾಕಿದ ಸಿಎಂ ವಿಜಯನ್, “ಅವರ ಈ  ಹೇಳಿಕೆಗಳು ರಾಜಕೀಯ ಅಜೆಂಡಾದ ಭಾಗವಾಗಿದೆ. ಸಾರ್ವಜನಿಕರು ಈಗಾಗಲೇ ಈ ಅಜೆಂಡಾವನ್ನು ತಳ್ಳಿಹಾಕಿದ್ದಾರೆ. ಈ ಆರೋಪದಲ್ಲಿ ಸ್ವಲ್ಪವೂ ಸತ್ಯವಿಲ್ಲ. ಈ ಸುಳ್ಳುಗಳನ್ನು ಹರಡುವ ಮೂಲಕ ನೀವು ಸರ್ಕಾರ ಮತ್ತು ರಾಜಕೀಯ ನಾಯಕತ್ವದ ದೃಢತೆಯನ್ನು ನಾಶಪಡಿಸಬಹುದು ಎಂದು ಅವರು ತಿಳಿದಿದ್ದರೇ, ಇದು ವ್ಯರ್ಥ ಪ್ರಯತ್ನ” ಎಂದಿದ್ದಾರೆ.

ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಆರೋಪ ಮಾಡಿರುವುದು ಇದೇ ಮೊದಲಲ್ಲ ಎಂದು ಕೇರಳ ಪ್ರವಾಸೋದ್ಯಮ ಸಚಿವ ಪಿಎ ಮೊಹಮ್ಮದ್ ರಿಯಾಸ್ ಹೇಳಿದ್ದಾರೆ.


ಇದನ್ನೂ ಓದಿ: ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...