Homeಮುಖಪುಟಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

ಈ ರೈತರ ಆಂದೋಲನ ಪ್ರಾರಂಭವಾದ 15 ದಿನಗಳ ನಂತರ ತಮ್ಮದೇ ಆದ ಪ್ರತ್ಯೇಕ ಪ್ರತಿಭಟನಾ ಸ್ಥಳವನ್ನು ಸ್ಥಾಪಿಸಿದ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ, ಇತರರೊಂದಿಗೆ ಸೇರಿ ಪಿತೂರಿ ನಡೆಸಿ ರೈತರ ಶಾಂತಿಯುತ ಪ್ರತಿಭಟನೆಯನ್ನು ಒಡೆಯುವ ಯತ್ನ ಮಾಡಿದೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ನಡೆದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ನಂತರ ಸಂಯುಕ್ತ್ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, “ರ್ಯಾಲಿಯಲ್ಲಿ ನಡೆದ ಅಹಿತಕರ ಘಟನೆಗೆ ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪಿತೂರಿಯೇ ಕಾರಣ” ಎಂದು ಆರೋಪಿಸಿದೆ. ಈ ಸಭೆಯಲ್ಲಿ ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಜಗ್ಜೀತ್ ಸಿಂಗ್ ದಲ್ಲೇವಾಲ್, ದರ್ಶನ್ ಪಾಲ್ ಸೇರಿ ಎಲ್ಲಾ ರೈತ ಮುಖಂಡರು ಉಪಸ್ಥಿತರಿದ್ದರು.

“ಈ ರೈತರ ಆಂದೋಲನ ಪ್ರಾರಂಭವಾದ 15 ದಿನಗಳ ನಂತರ ತಮ್ಮದೇ ಆದ ಪ್ರತ್ಯೇಕ ಪ್ರತಿಭಟನಾ ಸ್ಥಳವನ್ನು ಸ್ಥಾಪಿಸಿದ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ, ಇತರರೊಂದಿಗೆ ಸೇರಿ ಪಿತೂರಿ ನಡೆಸಿ ರೈತರ ಶಾಂತಿಯುತ ಪ್ರತಿಭಟನೆಯನ್ನು ಒಡೆಯುವ ಯತ್ನ ಮಾಡಿದೆ. ಹೀಗೆ ಸಂಚಿನಲ್ಲಿ ಪಾಲ್ಗೊಂಡ ಸಂಘಟನೆಗಳು ಜಂಟಿಯಾಗಿ ಹೋರಾಟವನ್ನು ಕೈಗೊಂಡ ಸಂಸ್ಥೆಗಳ ಭಾಗವಾಗಿರಲಿಲ್ಲ” ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

“ಜನವರಿ 26 ರಂದು ರೈತ ಸಂಘಟನೆಗಳು ಕಿಸಾನ್ ಪೆರೇಡ್ ಕಾರ್ಯಕ್ರಮವನ್ನು ಘೋಷಿಸಿದಾಗ, ಸಮಾಜ ವಿರೋಧಿ ವ್ಯಕ್ತಿಗಳಾದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಗಳು ರೈತರ ಆಂದೋಲನವನ್ನು ಹಾಳು ಮಾಡಲು ಪ್ರಯತ್ನಿಸಿದರು” ಎಂದು ಆರೋಪಿಸಲಾಗಿದೆ.

“ಈ ಪಿತೂರಿಯ ಭಾಗವಾಗಿ, ಕಿಸಾನ್ ಮಜ್ದೂರ್ ಸಂಘರ್ಷ್‌ ಮತ್ತು ಇತರ ವ್ಯಕ್ತಿಗಳು ತಾವು ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸುತ್ತೇವೆ ಮತ್ತು ಕೆಂಪು ಕೋಟೆಯಲ್ಲಿ ಧ್ವಜವನ್ನು ಹಾರಿಸುತ್ತೇವೆ ಎಂದು ಘೋಷಿಸಿದರು. ನಂತರ ಹೋರಾಟ ನಡೆಸುತ್ತಿರುವ ಇತರೆ ಸಂಘಟನೆಗಳ ನಿಗದಿತ ಮೆರವಣಿಗೆಗೂ ಎರಡು ಗಂಟೆಗಳ ಮೊದಲೇ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯು ರಿಂಗ್ ರಸ್ತೆಯಲ್ಲಿ ಮೆರವಣಿಗೆ ಪ್ರಾರಂಭಿಸಿತು. ಇದು ಶಾಂತಿಯುತ ಮತ್ತು ಪ್ರಬಲವಾದ ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಪಿತೂರಿ. ಹಾಗಾಗಿ
ಈ ಘಟನೆಯನ್ನು ಸಂಯುಕ್ತ್ ಕಿಸಾನ್ ಮೋರ್ಚಾದ ಎಲ್ಲಾ ಘಟಕಗಳು ತೀವ್ರವಾಗಿ ಖಂಡಿಸಿವೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಈ ಆಂದೋಲನವನ್ನು ಮುಂದುವರಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಶಾಂತಿಯುತ ರೈತರ ಹೋರಾಟಕ್ಕೆ ಹಾನಿ ಮಾಡಲು ಪ್ರಯತ್ನಿಸಿದ ಸರ್ಕಾರ ಮತ್ತು ಅದರ ಆಡಳಿತವನ್ನು, ಮೇಲೆ ಉಲ್ಲೇಖಿಸಿದ ಸಂಘಟನೆ ಮತ್ತು ಸಮಾಜ ವಿರೋಧಿ ವ್ಯಕ್ತಿಗಳನ್ನು ರೈತ ಒಕ್ಕೂಟವು ತೀವ್ರವಾಗಿ ಖಂಡಿಸಿವೆ.

“ಈ ಹೋರಾಟವನ್ನು ಒಡೆಯಲು ಯತ್ನಿಸುತ್ತಿರುವ ಸರ್ಕಾರ ಮತ್ತು ಇತರ ಶಕ್ತಿಗಳನ್ನು ಈ ಶಾಂತಿಯುತ ಚಳವಳಿಯಲ್ಲಿ ಸೇರಲು ಅವಕಾಶ ನೀಡದಿರಲು ಸಂಘಟನೆಗಳು ನಿರ್ಧರಿಸಿದ್ದು, ನಿನ್ನೆ ನಡೆದ ಘಟನೆಗಳು ರೈತ ವಿರೋಧಿ ಪಡೆಗಳನ್ನು ಸ್ಪಷ್ಟವಾಗಿ ಬಹಿರಂಗಪಡಿಸಿ ಪ್ರತ್ಯೇಕಿಸಿವೆ” ಎಂದು ಹೇಳಲಾಗಿದೆ.

ಹಾಗಾಗಿ ಇಂತಹ ಪಿತೂರಿಗಳಿಗೆ ಕಿವಿಗೊಡದೇ, ಪ್ರತಿಭಟನಾ ಸ್ಥಳಗಳಲ್ಲಿಯೇ ಉಳಿದು ಶಾಂತಿಯುತ ಹೋರಾಟವನ್ನು ಮುಂದುವರೆಸಬೇಕೆಂದು ಹೋರಾಟಗಾರರು ರೈತರಿಗೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...