Homeಮುಖಪುಟಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

ಈ ರೈತರ ಆಂದೋಲನ ಪ್ರಾರಂಭವಾದ 15 ದಿನಗಳ ನಂತರ ತಮ್ಮದೇ ಆದ ಪ್ರತ್ಯೇಕ ಪ್ರತಿಭಟನಾ ಸ್ಥಳವನ್ನು ಸ್ಥಾಪಿಸಿದ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ, ಇತರರೊಂದಿಗೆ ಸೇರಿ ಪಿತೂರಿ ನಡೆಸಿ ರೈತರ ಶಾಂತಿಯುತ ಪ್ರತಿಭಟನೆಯನ್ನು ಒಡೆಯುವ ಯತ್ನ ಮಾಡಿದೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ನಡೆದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ನಂತರ ಸಂಯುಕ್ತ್ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, “ರ್ಯಾಲಿಯಲ್ಲಿ ನಡೆದ ಅಹಿತಕರ ಘಟನೆಗೆ ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪಿತೂರಿಯೇ ಕಾರಣ” ಎಂದು ಆರೋಪಿಸಿದೆ. ಈ ಸಭೆಯಲ್ಲಿ ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಜಗ್ಜೀತ್ ಸಿಂಗ್ ದಲ್ಲೇವಾಲ್, ದರ್ಶನ್ ಪಾಲ್ ಸೇರಿ ಎಲ್ಲಾ ರೈತ ಮುಖಂಡರು ಉಪಸ್ಥಿತರಿದ್ದರು.

“ಈ ರೈತರ ಆಂದೋಲನ ಪ್ರಾರಂಭವಾದ 15 ದಿನಗಳ ನಂತರ ತಮ್ಮದೇ ಆದ ಪ್ರತ್ಯೇಕ ಪ್ರತಿಭಟನಾ ಸ್ಥಳವನ್ನು ಸ್ಥಾಪಿಸಿದ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ, ಇತರರೊಂದಿಗೆ ಸೇರಿ ಪಿತೂರಿ ನಡೆಸಿ ರೈತರ ಶಾಂತಿಯುತ ಪ್ರತಿಭಟನೆಯನ್ನು ಒಡೆಯುವ ಯತ್ನ ಮಾಡಿದೆ. ಹೀಗೆ ಸಂಚಿನಲ್ಲಿ ಪಾಲ್ಗೊಂಡ ಸಂಘಟನೆಗಳು ಜಂಟಿಯಾಗಿ ಹೋರಾಟವನ್ನು ಕೈಗೊಂಡ ಸಂಸ್ಥೆಗಳ ಭಾಗವಾಗಿರಲಿಲ್ಲ” ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

“ಜನವರಿ 26 ರಂದು ರೈತ ಸಂಘಟನೆಗಳು ಕಿಸಾನ್ ಪೆರೇಡ್ ಕಾರ್ಯಕ್ರಮವನ್ನು ಘೋಷಿಸಿದಾಗ, ಸಮಾಜ ವಿರೋಧಿ ವ್ಯಕ್ತಿಗಳಾದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಗಳು ರೈತರ ಆಂದೋಲನವನ್ನು ಹಾಳು ಮಾಡಲು ಪ್ರಯತ್ನಿಸಿದರು” ಎಂದು ಆರೋಪಿಸಲಾಗಿದೆ.

“ಈ ಪಿತೂರಿಯ ಭಾಗವಾಗಿ, ಕಿಸಾನ್ ಮಜ್ದೂರ್ ಸಂಘರ್ಷ್‌ ಮತ್ತು ಇತರ ವ್ಯಕ್ತಿಗಳು ತಾವು ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸುತ್ತೇವೆ ಮತ್ತು ಕೆಂಪು ಕೋಟೆಯಲ್ಲಿ ಧ್ವಜವನ್ನು ಹಾರಿಸುತ್ತೇವೆ ಎಂದು ಘೋಷಿಸಿದರು. ನಂತರ ಹೋರಾಟ ನಡೆಸುತ್ತಿರುವ ಇತರೆ ಸಂಘಟನೆಗಳ ನಿಗದಿತ ಮೆರವಣಿಗೆಗೂ ಎರಡು ಗಂಟೆಗಳ ಮೊದಲೇ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯು ರಿಂಗ್ ರಸ್ತೆಯಲ್ಲಿ ಮೆರವಣಿಗೆ ಪ್ರಾರಂಭಿಸಿತು. ಇದು ಶಾಂತಿಯುತ ಮತ್ತು ಪ್ರಬಲವಾದ ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಪಿತೂರಿ. ಹಾಗಾಗಿ
ಈ ಘಟನೆಯನ್ನು ಸಂಯುಕ್ತ್ ಕಿಸಾನ್ ಮೋರ್ಚಾದ ಎಲ್ಲಾ ಘಟಕಗಳು ತೀವ್ರವಾಗಿ ಖಂಡಿಸಿವೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಈ ಆಂದೋಲನವನ್ನು ಮುಂದುವರಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಶಾಂತಿಯುತ ರೈತರ ಹೋರಾಟಕ್ಕೆ ಹಾನಿ ಮಾಡಲು ಪ್ರಯತ್ನಿಸಿದ ಸರ್ಕಾರ ಮತ್ತು ಅದರ ಆಡಳಿತವನ್ನು, ಮೇಲೆ ಉಲ್ಲೇಖಿಸಿದ ಸಂಘಟನೆ ಮತ್ತು ಸಮಾಜ ವಿರೋಧಿ ವ್ಯಕ್ತಿಗಳನ್ನು ರೈತ ಒಕ್ಕೂಟವು ತೀವ್ರವಾಗಿ ಖಂಡಿಸಿವೆ.

“ಈ ಹೋರಾಟವನ್ನು ಒಡೆಯಲು ಯತ್ನಿಸುತ್ತಿರುವ ಸರ್ಕಾರ ಮತ್ತು ಇತರ ಶಕ್ತಿಗಳನ್ನು ಈ ಶಾಂತಿಯುತ ಚಳವಳಿಯಲ್ಲಿ ಸೇರಲು ಅವಕಾಶ ನೀಡದಿರಲು ಸಂಘಟನೆಗಳು ನಿರ್ಧರಿಸಿದ್ದು, ನಿನ್ನೆ ನಡೆದ ಘಟನೆಗಳು ರೈತ ವಿರೋಧಿ ಪಡೆಗಳನ್ನು ಸ್ಪಷ್ಟವಾಗಿ ಬಹಿರಂಗಪಡಿಸಿ ಪ್ರತ್ಯೇಕಿಸಿವೆ” ಎಂದು ಹೇಳಲಾಗಿದೆ.

ಹಾಗಾಗಿ ಇಂತಹ ಪಿತೂರಿಗಳಿಗೆ ಕಿವಿಗೊಡದೇ, ಪ್ರತಿಭಟನಾ ಸ್ಥಳಗಳಲ್ಲಿಯೇ ಉಳಿದು ಶಾಂತಿಯುತ ಹೋರಾಟವನ್ನು ಮುಂದುವರೆಸಬೇಕೆಂದು ಹೋರಾಟಗಾರರು ರೈತರಿಗೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...