Homeಮುಖಪುಟಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

ಈ ರೈತರ ಆಂದೋಲನ ಪ್ರಾರಂಭವಾದ 15 ದಿನಗಳ ನಂತರ ತಮ್ಮದೇ ಆದ ಪ್ರತ್ಯೇಕ ಪ್ರತಿಭಟನಾ ಸ್ಥಳವನ್ನು ಸ್ಥಾಪಿಸಿದ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ, ಇತರರೊಂದಿಗೆ ಸೇರಿ ಪಿತೂರಿ ನಡೆಸಿ ರೈತರ ಶಾಂತಿಯುತ ಪ್ರತಿಭಟನೆಯನ್ನು ಒಡೆಯುವ ಯತ್ನ ಮಾಡಿದೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ನಡೆದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ನಂತರ ಸಂಯುಕ್ತ್ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, “ರ್ಯಾಲಿಯಲ್ಲಿ ನಡೆದ ಅಹಿತಕರ ಘಟನೆಗೆ ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪಿತೂರಿಯೇ ಕಾರಣ” ಎಂದು ಆರೋಪಿಸಿದೆ. ಈ ಸಭೆಯಲ್ಲಿ ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಜಗ್ಜೀತ್ ಸಿಂಗ್ ದಲ್ಲೇವಾಲ್, ದರ್ಶನ್ ಪಾಲ್ ಸೇರಿ ಎಲ್ಲಾ ರೈತ ಮುಖಂಡರು ಉಪಸ್ಥಿತರಿದ್ದರು.

“ಈ ರೈತರ ಆಂದೋಲನ ಪ್ರಾರಂಭವಾದ 15 ದಿನಗಳ ನಂತರ ತಮ್ಮದೇ ಆದ ಪ್ರತ್ಯೇಕ ಪ್ರತಿಭಟನಾ ಸ್ಥಳವನ್ನು ಸ್ಥಾಪಿಸಿದ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ, ಇತರರೊಂದಿಗೆ ಸೇರಿ ಪಿತೂರಿ ನಡೆಸಿ ರೈತರ ಶಾಂತಿಯುತ ಪ್ರತಿಭಟನೆಯನ್ನು ಒಡೆಯುವ ಯತ್ನ ಮಾಡಿದೆ. ಹೀಗೆ ಸಂಚಿನಲ್ಲಿ ಪಾಲ್ಗೊಂಡ ಸಂಘಟನೆಗಳು ಜಂಟಿಯಾಗಿ ಹೋರಾಟವನ್ನು ಕೈಗೊಂಡ ಸಂಸ್ಥೆಗಳ ಭಾಗವಾಗಿರಲಿಲ್ಲ” ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯಲ್ಲಿ ಅಹಿತಕರ ಘಟನೆ: ಹೋರಾಟದಿಂದ ಹೊರಬಂದ ಎರಡು ರೈತ ಸಂಘಗಳು

“ಜನವರಿ 26 ರಂದು ರೈತ ಸಂಘಟನೆಗಳು ಕಿಸಾನ್ ಪೆರೇಡ್ ಕಾರ್ಯಕ್ರಮವನ್ನು ಘೋಷಿಸಿದಾಗ, ಸಮಾಜ ವಿರೋಧಿ ವ್ಯಕ್ತಿಗಳಾದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಗಳು ರೈತರ ಆಂದೋಲನವನ್ನು ಹಾಳು ಮಾಡಲು ಪ್ರಯತ್ನಿಸಿದರು” ಎಂದು ಆರೋಪಿಸಲಾಗಿದೆ.

“ಈ ಪಿತೂರಿಯ ಭಾಗವಾಗಿ, ಕಿಸಾನ್ ಮಜ್ದೂರ್ ಸಂಘರ್ಷ್‌ ಮತ್ತು ಇತರ ವ್ಯಕ್ತಿಗಳು ತಾವು ರಿಂಗ್ ರಸ್ತೆಯಲ್ಲಿ ಮೆರವಣಿಗೆ ನಡೆಸುತ್ತೇವೆ ಮತ್ತು ಕೆಂಪು ಕೋಟೆಯಲ್ಲಿ ಧ್ವಜವನ್ನು ಹಾರಿಸುತ್ತೇವೆ ಎಂದು ಘೋಷಿಸಿದರು. ನಂತರ ಹೋರಾಟ ನಡೆಸುತ್ತಿರುವ ಇತರೆ ಸಂಘಟನೆಗಳ ನಿಗದಿತ ಮೆರವಣಿಗೆಗೂ ಎರಡು ಗಂಟೆಗಳ ಮೊದಲೇ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯು ರಿಂಗ್ ರಸ್ತೆಯಲ್ಲಿ ಮೆರವಣಿಗೆ ಪ್ರಾರಂಭಿಸಿತು. ಇದು ಶಾಂತಿಯುತ ಮತ್ತು ಪ್ರಬಲವಾದ ರೈತರ ಹೋರಾಟವನ್ನು ದಿಕ್ಕುತಪ್ಪಿಸುವ ಪಿತೂರಿ. ಹಾಗಾಗಿ
ಈ ಘಟನೆಯನ್ನು ಸಂಯುಕ್ತ್ ಕಿಸಾನ್ ಮೋರ್ಚಾದ ಎಲ್ಲಾ ಘಟಕಗಳು ತೀವ್ರವಾಗಿ ಖಂಡಿಸಿವೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ದೂರದಲ್ಲಿ ನಿಂತು ಸರಿತಪ್ಪುಗಳ ಕುರಿತು ತೀರ್ಪು ನೀಡುವ ’ಲಿಬರಲ್‌’ಗಳ ದುಸ್ಥಿತಿ

ಈ ಆಂದೋಲನವನ್ನು ಮುಂದುವರಿಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಶಾಂತಿಯುತ ರೈತರ ಹೋರಾಟಕ್ಕೆ ಹಾನಿ ಮಾಡಲು ಪ್ರಯತ್ನಿಸಿದ ಸರ್ಕಾರ ಮತ್ತು ಅದರ ಆಡಳಿತವನ್ನು, ಮೇಲೆ ಉಲ್ಲೇಖಿಸಿದ ಸಂಘಟನೆ ಮತ್ತು ಸಮಾಜ ವಿರೋಧಿ ವ್ಯಕ್ತಿಗಳನ್ನು ರೈತ ಒಕ್ಕೂಟವು ತೀವ್ರವಾಗಿ ಖಂಡಿಸಿವೆ.

“ಈ ಹೋರಾಟವನ್ನು ಒಡೆಯಲು ಯತ್ನಿಸುತ್ತಿರುವ ಸರ್ಕಾರ ಮತ್ತು ಇತರ ಶಕ್ತಿಗಳನ್ನು ಈ ಶಾಂತಿಯುತ ಚಳವಳಿಯಲ್ಲಿ ಸೇರಲು ಅವಕಾಶ ನೀಡದಿರಲು ಸಂಘಟನೆಗಳು ನಿರ್ಧರಿಸಿದ್ದು, ನಿನ್ನೆ ನಡೆದ ಘಟನೆಗಳು ರೈತ ವಿರೋಧಿ ಪಡೆಗಳನ್ನು ಸ್ಪಷ್ಟವಾಗಿ ಬಹಿರಂಗಪಡಿಸಿ ಪ್ರತ್ಯೇಕಿಸಿವೆ” ಎಂದು ಹೇಳಲಾಗಿದೆ.

ಹಾಗಾಗಿ ಇಂತಹ ಪಿತೂರಿಗಳಿಗೆ ಕಿವಿಗೊಡದೇ, ಪ್ರತಿಭಟನಾ ಸ್ಥಳಗಳಲ್ಲಿಯೇ ಉಳಿದು ಶಾಂತಿಯುತ ಹೋರಾಟವನ್ನು ಮುಂದುವರೆಸಬೇಕೆಂದು ಹೋರಾಟಗಾರರು ರೈತರಿಗೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: TRP ಹಗರಣ: ’ಇಂಡಿಯನ್ ಎಕ್ಸ್‌ಪ್ರೆಸ್’‌ಗೆ ಕಾನೂನು ನೋಟಿಸ್ ಕಳುಹಿಸಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...