Homeಮುಖಪುಟಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದ ಸರಕಾರ

ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದ ಸರಕಾರ

- Advertisement -
- Advertisement -

ಇಸ್ರೇಲ್ ಮೇಲೆ ಹೆಜ್ಬುಲ್ಲಾ ನಡೆಸಿರುವ ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿಯೊಬ್ಬರು ಉತ್ತರ ಇಸ್ರೇಲ್‌ನ ಮಾರ್ಗಲಿಯೊಟ್‌ನಲ್ಲಿ ಮೃತಪಟ್ಟ ಬೆನ್ನಲ್ಲಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಭಾರತ ಸರ್ಕಾರವು ಇಸ್ರೇಲ್‌ನಲ್ಲಿ ವಾಸಿಸುವ ತನ್ನ ಪ್ರಜೆಗಳಿಗೆ ಬುಧವಾರ ಸಲಹೆಯನ್ನು ನೀಡಿದೆ.

ಪ್ರಚಲಿತ ಭದ್ರತಾ ಪರಿಸ್ಥಿತಿ ಮತ್ತು ಸ್ಥಳೀಯ ಸುರಕ್ಷತಾ ಸಲಹೆಗಳ ದೃಷ್ಟಿಯಿಂದ, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯರು, ವಿಶೇಷವಾಗಿ ಉತ್ತರ ಮತ್ತು ದಕ್ಷಿಣದ ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವ ಅಥವಾ ಭೇಟಿ ನೀಡುವವರು, ಇಸ್ರೇಲ್‌ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಬೇಕು. ರಾಯಭಾರ ಕಚೇರಿಯು ಇಸ್ರೇಲ್‌ ಅಧಿಕಾರಿಗಳ ಜೊತೆ ನಾಗರಿಕರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ದೃಷ್ಟಿಯಿಂದ ಸಂಪರ್ಕದಲ್ಲಿದೆ ಎಂದು ರಾಯಭಾರಿ ಕಚೇರಿಯು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

ಈ ಕುರಿತು ಭಾರತೀಯ ರಾಯಭಾರ ಕಚೇರಿಯು ಸಹಾಯ ಮತ್ತು ಸ್ಪಷ್ಟೀಕರಣಕ್ಕಾಗಿ ಸಹಾಯವಾಣಿ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಕೂಡ ಹಂಚಿಕೊಂಡಿದೆ. ಸಂಪರ್ಕ ಸಂಖ್ಯೆ ಮತ್ತು ಇಮೇಲ್ ವಿಳಾಸ ಕ್ರಮವಾಗಿ +972-35226748 ಮತ್ತು [email protected].ಆಗಿದೆ.

ಲೆಬನಾನ್‌ನಿಂದ ಉಡಾವಣೆಯಾದ ಕ್ಷಿಪಣಿಯು ಇಸ್ರೇಲ್‌ನ ಉತ್ತರ ಗಡಿ ಸಮುದಾಯವಾದ ಮಾರ್ಗಲಿಯೊಟ್ ಬಳಿಯ ಹಣ್ಣಿನ ತೋಟಕ್ಕೆ ಬಡಿದು ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ ಒಂದು ದಿನದ ನಂತರ ಭಾರತೀಯ ರಾಯಭಾರ ಕಚೇರಿಯ ಈ ಸಲಹೆಯನ್ನು ನೀಡಿದೆ. ಮೃತರನ್ನು ಕೇರಳದ ಕೊಲ್ಲಂ ಮೂಲದ 31 ವರ್ಷದ ಪ್ಯಾಟ್ ನಿಬಿನ್ ಮ್ಯಾಕ್ಸ್‌ವೆಲ್ ಎಂದು ಗುರುತಿಸಲಾಗಿದೆ. ಎರಡು ತಿಂಗಳ ಹಿಂದೆ ಮ್ಯಾಕ್ಸ್‌ವೆಲ್ ಇಸ್ರೇಲ್‌ಗೆ ತೆರಳಿದ್ದರು ಮತ್ತು ದಾಳಿಯ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಇನ್ನಿಬ್ಬರು ಭಾರತೀಯರು ಗಾಯಗೊಂಡಿದ್ದು, ಅವರನ್ನು ಬುಷ್ ಜೋಸೆಫ್ ಜಾರ್ಜ್ ಮತ್ತು ಪಾಲ್ ಮೆಲ್ವಿನ್ ಎಂದು ಗುರುತಿಸಲಾಗಿದೆ.

ಮೃತ ಮ್ಯಾಕ್ಸ್‌ವೆಲ್ ಅವರ ಪಾರ್ಥಿವ ಶರೀರವನ್ನು ಜಿವ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಮೆಲ್ವಿನ್‌ರನ್ನು ಉತ್ತರ ಇಸ್ರೇಲ್‌ ನಗರದ ಸಫೆದ್‌ನ ಝಿವ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಯಲ್ಲಿ ಓರ್ವ ವಿದೇಶಿ ಕಾರ್ಮಿಕ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಈ ಹಿಂದೆ ಎಂಡಿಎ ಹೇಳಿತ್ತು.

ಇಸ್ರೇಲ್‌ ಮೇಲೆ ಹಮಾಸ್‌ ವೈಮಾನಿಕ ದಾಳಿ ನಡೆಸಿದ ಬಳಿಕ ಅಕ್ಟೋಬರ್ 7ರಿಂದ ಇಸ್ರೇಲ್‌- ಗಾಝಾ ಮೇಲೆ ಯುದ್ದವನ್ನು ನಡೆಸುತ್ತಿದೆ. ಯುದ್ಧದಲ್ಲಿ ಈವೆರೆಗೆ 30,000ಕ್ಕೂ ಅಧಿಕ ಪ್ಯಾಲೆಸ್ತೀನ್‌ನ ಅಮಾಯಕ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಲಕ್ಷಾಂತರ ಮಂದಿ ಗಾಯಗೊಂಡಿದ್ದಾರೆ. ಮನೆಗಳನ್ನು ಕಳೆದುಕೊಂಡು ಗಾಝಾದ ನಾಗರಿಕರು ನಿರಶ್ರೀತರ ಶಿಬಿರಗಳಲ್ಲಿ ದಿನದೂಡುತ್ತಿದ್ದಾರೆ. ಇಸ್ರೇಲ್‌ನ ಈ ಅಮಾನವೀಕ ಕೃತ್ಯವನ್ನು  ಇಡೀ ವಿಶ್ವವೇ ಖಂಡಿಸಿದ್ದು, ಕದನ ವಿರಾಮಕ್ಕೆ ಆಗ್ರಹಿಸಿವೆ.

ಇದನ್ನು ಓದಿ: ಹೈಕೋರ್ಟ್ ಜಡ್ಜ್‌ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...