Homeಮುಖಪುಟಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

- Advertisement -
- Advertisement -

ನಾವೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲೊಂದಾದ ವಾಟ್ಸಾಪ್ ಬಳಕೆ ಸುರಕ್ಷಿತ ಎಂದುಕೊಳ್ಳುತ್ತಿರುವಾಗಲೇ ಕಳೆದ ವರ್ಷ ಪೆಗಾಸಸ್ ಸ್ಪೈವೇರ್ ಎಂಬ ಇಸ್ರೇಲ್ ಮೂಲದ ಸಾಫ್ಟ್‌ವೇರ್ ಬಳಸಿ ನಮ್ಮ ವಯಕ್ತಿಕ ವಾಟ್ಸಾಪ್‌ ಅನ್ನು ಕಣ್ಗಾವಲು ಮಾಡಬಹುದು, ಅಲ್ಲಿಯ ಮಾಹಿತಿಯನ್ನು ಕದಿಯಬಹುದು ಎಂಬ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿತು. ಸ್ವತಃ ಇದನ್ನು ಸರ್ಕಾರವೇ ಬಳಸಿ ಹಲವು ಸಾಮಾಜಿಕ ಕಾರ್ಯಕರ್ತರ, ವಕೀಲರ, ಪತ್ರಕರ್ತರ ಮಾಹಿತಿ ಕದ್ದು ಟೀಕೆಗೊಳಗಾಗಿತ್ತು.

ಈಗ ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಮ್ಮೆಲ್ಲರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವ ಮತ್ತು ಕ್ರಮತೆಗೆದುಕೊಳ್ಳುವ ಹೊಸ ಅಧಿಕೃತ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂದರೆ ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

ಭಾರತದಂತಹ ವಿಶಾಲ ದೇಶದಲ್ಲಿ ಎಲ್ಲರ ಖಾತೆಗಳನ್ನು ಮಾನಿಟರ್ ಮಾಡಲು ಸಾಧ್ಯವಿಲ್ಲ ಎಂದು ಬಹುತೇಕರು ಭಾವಿಸಿದ್ದಾರೆ. ಅದಕ್ಕಾಗಿಯೇ ಬ್ರಾಡ್ ಕಾಸ್ಟ್ ಎಂಜಿನೀರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಎಂಬ ಸರ್ಕಾರಿ ಸ್ವಾಮ್ಯದ (I and B ಸಚಿವಾಲಯ) ಸಂಸ್ಥೆಯ ಮೂಲಕ ಈ ಕೆಲಸ ನಿರ್ವಹಿಸಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದಿದೆ.

ಅವರು ಮಾಡಬೇಕಾದ ಮಾನಿಟರಿಂಗ್ ಸೇವೆಗಳ ಕೆಲಸದ ವ್ಯಾಪ್ತಿ ಈ ಕೆಳಗಿನಂತಿರುತ್ತದೆ:

ಪತ್ತೆ ಹಚ್ಚುವಿಕೆ – ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳನ್ನು ವಿಶ್ಲೇಷಿಸುವುದು.

ನಿರ್ಧಾರ- ಸಮಸ್ಯಾತ್ಮಕವಾಗಿವೆ ಎಂಬ ಪೋಸ್ಟ್‌ಗಳನ್ನು ವಿಂಗಡಣೆ ಮಾಡುವುದು.

ಪಾವತಿಸಿದ ಮತ್ತು ಖಾಸಗಿ ಮಾಧ್ಯಮ ಡೇಟಾವನ್ನು ಒಳಗೊಂಡಂತೆ ಸಂಪೂರ್ಣ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ನಡೆಸುವ ಸಾಮರ್ಥ್ಯವನ್ನು ಅಭಿವೃದ್ದಿಪಡಿಸುವುದು.

ಸೋಷಿಯಲ್ ಮೀಡಿಯಾ ಟ್ರೆಂಡ್ಸ್ ಅನ್ನು ಮಾನಿಟರಿಂಗ್ ಮಾಡುವುದು.

ಸೋಷಿಯಲ್ ಮೀಡಿಯಾದ ಭಾವನೆಗಳನ್ನು ಮೇಲ್ವಿಚಾರಣೆ ಮಾಡುವುದು

ಸೋಶಿಯಲ್ ಮೀಡಿಯಾದ ಸೂಚಕಗಳ ಅನ್ವಯ ಮೇಲ್ವಿಚಾರಣೆ

ಸರ್ಕಾರಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಂಬಂಧಿಸಿದ ಟ್ರೆಂಡ್‌ಗಳ ಜಾಡು ಹಿಡಿಯುವುದು.

ಸಾಮಾಜಿಕ ಅಭಿಯಾನಗಳು / ಕಾರ್ಯಕ್ರಮಗಳ ಮೇಲ್ವಿಚಾರಣೆ

ಆಲಿಸುವ ಸಾಧನ ಅಭಿವೃದ್ದಿಪಡಿಸುವುದು.

ಕ್ರಿಯಾತ್ಮಕ ಡೇಟಾವನ್ನು ಗುರುತಿಸುವುದು, ಯಾರಿಂದ ಪ್ರಭಾವಿತರಾಗಿದ್ದಾರೆ ಎಂದು ತಿಳಿಯುವುದು ಇತ್ಯಾದಿ

ಆರಂಭಿಕ ಎಚ್ಚರಿಕೆ ನೀಡುವ ವ್ಯವಸ್ಥೆ

ವಿಶ್ಲೇಷಣಾತ್ಮಕ ವರದಿಗಳನ್ನು ರಚಿಸುವುದು

ಇಷ್ಟೆಲ್ಲಾ ಕೆಲಸಗಳನ್ನು ನಿರ್ವಹಿಸಲು, ಡಾಟಾ ಸಂಗ್ರಹಿಸಲು ಐಟಿ ಕಂಪನಿಗಳನ್ನು ಸರ್ಕಾರ ಆಹ್ವಾನಿಸಿದೆ. ಮೇಲಿನ ಇಷ್ಟು ಮಾಹಿತಿ ಸಿಕ್ಕ ನಂತರ ಯಾರು ಸರ್ಕಾರದ ಪರವಿದ್ದಾರೆ ಮತ್ತು ಯಾರು ವಿರುದ್ಧವಿದ್ದಾರೆ ಎಂದು ತಿಳಿದ ಸರ್ಕಾರ ಅವರ ಮೇಲೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಊಹಿಸಿ.

ಈಗಾಗಲೇ ಸರ್ಕಾರಗಳು ಹಲವು ರೀತಿಯಲ್ಲಿ ನಮ್ಮನ್ನು ಮೇಲ್ವಿಚಾರಣೆ ನಡೆಸುತ್ತಿದೆ. ಪ್ರತಿಯೊಬ್ಬ ಪ್ರಜೆಯ ಎಲ್ಲಾ ಮಾಹಿತಿಗಳನ್ನು ಅದು ಪಡೆದುಕೊಂಡಿದೆ. ಈಗ ನಾವು ಮಾಡುವ ಚಟುವಟಿಕೆಗಳನ್ನು ಮಾನಿಟರ್ ಮಾಡುವ ಮೂಲಕ ಸರ್ವೈಲೆನ್ಸ್ ಸ್ಟೇಟ್ ಕಡೆಗೆ ದಾಪುಗಾಲಿಡುತ್ತಿದೆ ಎಂದು ಹಲವು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...