Homeಮುಖಪುಟಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

- Advertisement -
- Advertisement -

ನಾವೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲೊಂದಾದ ವಾಟ್ಸಾಪ್ ಬಳಕೆ ಸುರಕ್ಷಿತ ಎಂದುಕೊಳ್ಳುತ್ತಿರುವಾಗಲೇ ಕಳೆದ ವರ್ಷ ಪೆಗಾಸಸ್ ಸ್ಪೈವೇರ್ ಎಂಬ ಇಸ್ರೇಲ್ ಮೂಲದ ಸಾಫ್ಟ್‌ವೇರ್ ಬಳಸಿ ನಮ್ಮ ವಯಕ್ತಿಕ ವಾಟ್ಸಾಪ್‌ ಅನ್ನು ಕಣ್ಗಾವಲು ಮಾಡಬಹುದು, ಅಲ್ಲಿಯ ಮಾಹಿತಿಯನ್ನು ಕದಿಯಬಹುದು ಎಂಬ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿತು. ಸ್ವತಃ ಇದನ್ನು ಸರ್ಕಾರವೇ ಬಳಸಿ ಹಲವು ಸಾಮಾಜಿಕ ಕಾರ್ಯಕರ್ತರ, ವಕೀಲರ, ಪತ್ರಕರ್ತರ ಮಾಹಿತಿ ಕದ್ದು ಟೀಕೆಗೊಳಗಾಗಿತ್ತು.

ಈಗ ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಮ್ಮೆಲ್ಲರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವ ಮತ್ತು ಕ್ರಮತೆಗೆದುಕೊಳ್ಳುವ ಹೊಸ ಅಧಿಕೃತ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂದರೆ ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

ಭಾರತದಂತಹ ವಿಶಾಲ ದೇಶದಲ್ಲಿ ಎಲ್ಲರ ಖಾತೆಗಳನ್ನು ಮಾನಿಟರ್ ಮಾಡಲು ಸಾಧ್ಯವಿಲ್ಲ ಎಂದು ಬಹುತೇಕರು ಭಾವಿಸಿದ್ದಾರೆ. ಅದಕ್ಕಾಗಿಯೇ ಬ್ರಾಡ್ ಕಾಸ್ಟ್ ಎಂಜಿನೀರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಎಂಬ ಸರ್ಕಾರಿ ಸ್ವಾಮ್ಯದ (I and B ಸಚಿವಾಲಯ) ಸಂಸ್ಥೆಯ ಮೂಲಕ ಈ ಕೆಲಸ ನಿರ್ವಹಿಸಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದಿದೆ.

ಅವರು ಮಾಡಬೇಕಾದ ಮಾನಿಟರಿಂಗ್ ಸೇವೆಗಳ ಕೆಲಸದ ವ್ಯಾಪ್ತಿ ಈ ಕೆಳಗಿನಂತಿರುತ್ತದೆ:

ಪತ್ತೆ ಹಚ್ಚುವಿಕೆ – ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳನ್ನು ವಿಶ್ಲೇಷಿಸುವುದು.

ನಿರ್ಧಾರ- ಸಮಸ್ಯಾತ್ಮಕವಾಗಿವೆ ಎಂಬ ಪೋಸ್ಟ್‌ಗಳನ್ನು ವಿಂಗಡಣೆ ಮಾಡುವುದು.

ಪಾವತಿಸಿದ ಮತ್ತು ಖಾಸಗಿ ಮಾಧ್ಯಮ ಡೇಟಾವನ್ನು ಒಳಗೊಂಡಂತೆ ಸಂಪೂರ್ಣ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ನಡೆಸುವ ಸಾಮರ್ಥ್ಯವನ್ನು ಅಭಿವೃದ್ದಿಪಡಿಸುವುದು.

ಸೋಷಿಯಲ್ ಮೀಡಿಯಾ ಟ್ರೆಂಡ್ಸ್ ಅನ್ನು ಮಾನಿಟರಿಂಗ್ ಮಾಡುವುದು.

ಸೋಷಿಯಲ್ ಮೀಡಿಯಾದ ಭಾವನೆಗಳನ್ನು ಮೇಲ್ವಿಚಾರಣೆ ಮಾಡುವುದು

ಸೋಶಿಯಲ್ ಮೀಡಿಯಾದ ಸೂಚಕಗಳ ಅನ್ವಯ ಮೇಲ್ವಿಚಾರಣೆ

ಸರ್ಕಾರಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಂಬಂಧಿಸಿದ ಟ್ರೆಂಡ್‌ಗಳ ಜಾಡು ಹಿಡಿಯುವುದು.

ಸಾಮಾಜಿಕ ಅಭಿಯಾನಗಳು / ಕಾರ್ಯಕ್ರಮಗಳ ಮೇಲ್ವಿಚಾರಣೆ

ಆಲಿಸುವ ಸಾಧನ ಅಭಿವೃದ್ದಿಪಡಿಸುವುದು.

ಕ್ರಿಯಾತ್ಮಕ ಡೇಟಾವನ್ನು ಗುರುತಿಸುವುದು, ಯಾರಿಂದ ಪ್ರಭಾವಿತರಾಗಿದ್ದಾರೆ ಎಂದು ತಿಳಿಯುವುದು ಇತ್ಯಾದಿ

ಆರಂಭಿಕ ಎಚ್ಚರಿಕೆ ನೀಡುವ ವ್ಯವಸ್ಥೆ

ವಿಶ್ಲೇಷಣಾತ್ಮಕ ವರದಿಗಳನ್ನು ರಚಿಸುವುದು

ಇಷ್ಟೆಲ್ಲಾ ಕೆಲಸಗಳನ್ನು ನಿರ್ವಹಿಸಲು, ಡಾಟಾ ಸಂಗ್ರಹಿಸಲು ಐಟಿ ಕಂಪನಿಗಳನ್ನು ಸರ್ಕಾರ ಆಹ್ವಾನಿಸಿದೆ. ಮೇಲಿನ ಇಷ್ಟು ಮಾಹಿತಿ ಸಿಕ್ಕ ನಂತರ ಯಾರು ಸರ್ಕಾರದ ಪರವಿದ್ದಾರೆ ಮತ್ತು ಯಾರು ವಿರುದ್ಧವಿದ್ದಾರೆ ಎಂದು ತಿಳಿದ ಸರ್ಕಾರ ಅವರ ಮೇಲೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಊಹಿಸಿ.

ಈಗಾಗಲೇ ಸರ್ಕಾರಗಳು ಹಲವು ರೀತಿಯಲ್ಲಿ ನಮ್ಮನ್ನು ಮೇಲ್ವಿಚಾರಣೆ ನಡೆಸುತ್ತಿದೆ. ಪ್ರತಿಯೊಬ್ಬ ಪ್ರಜೆಯ ಎಲ್ಲಾ ಮಾಹಿತಿಗಳನ್ನು ಅದು ಪಡೆದುಕೊಂಡಿದೆ. ಈಗ ನಾವು ಮಾಡುವ ಚಟುವಟಿಕೆಗಳನ್ನು ಮಾನಿಟರ್ ಮಾಡುವ ಮೂಲಕ ಸರ್ವೈಲೆನ್ಸ್ ಸ್ಟೇಟ್ ಕಡೆಗೆ ದಾಪುಗಾಲಿಡುತ್ತಿದೆ ಎಂದು ಹಲವು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...