Homeಮುಖಪುಟಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

- Advertisement -
- Advertisement -

ನಾವೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲೊಂದಾದ ವಾಟ್ಸಾಪ್ ಬಳಕೆ ಸುರಕ್ಷಿತ ಎಂದುಕೊಳ್ಳುತ್ತಿರುವಾಗಲೇ ಕಳೆದ ವರ್ಷ ಪೆಗಾಸಸ್ ಸ್ಪೈವೇರ್ ಎಂಬ ಇಸ್ರೇಲ್ ಮೂಲದ ಸಾಫ್ಟ್‌ವೇರ್ ಬಳಸಿ ನಮ್ಮ ವಯಕ್ತಿಕ ವಾಟ್ಸಾಪ್‌ ಅನ್ನು ಕಣ್ಗಾವಲು ಮಾಡಬಹುದು, ಅಲ್ಲಿಯ ಮಾಹಿತಿಯನ್ನು ಕದಿಯಬಹುದು ಎಂಬ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿತು. ಸ್ವತಃ ಇದನ್ನು ಸರ್ಕಾರವೇ ಬಳಸಿ ಹಲವು ಸಾಮಾಜಿಕ ಕಾರ್ಯಕರ್ತರ, ವಕೀಲರ, ಪತ್ರಕರ್ತರ ಮಾಹಿತಿ ಕದ್ದು ಟೀಕೆಗೊಳಗಾಗಿತ್ತು.

ಈಗ ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ನಮ್ಮೆಲ್ಲರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವ ಮತ್ತು ಕ್ರಮತೆಗೆದುಕೊಳ್ಳುವ ಹೊಸ ಅಧಿಕೃತ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂದರೆ ದೇಶದ ಪ್ರತಿಯೊಬ್ಬರ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಏನನ್ನು ಬರೆಯಲಾಗುತ್ತದೆ, ಯಾರ ಪರ ಮತ್ತು ವಿರುದ್ಧ ಬರೆಯಲಾಗುತ್ತದೆ, ಟ್ರೆಂಡ್ ಹೇಗಿರುತ್ತದೆ ಎಂಬುದನ್ನು ಮೇಲ್ವಿಚಾರಣೆ ನಡೆಸಲು ಐಟಿ ಕಂಪನಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ.

ಭಾರತದಂತಹ ವಿಶಾಲ ದೇಶದಲ್ಲಿ ಎಲ್ಲರ ಖಾತೆಗಳನ್ನು ಮಾನಿಟರ್ ಮಾಡಲು ಸಾಧ್ಯವಿಲ್ಲ ಎಂದು ಬಹುತೇಕರು ಭಾವಿಸಿದ್ದಾರೆ. ಅದಕ್ಕಾಗಿಯೇ ಬ್ರಾಡ್ ಕಾಸ್ಟ್ ಎಂಜಿನೀರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಎಂಬ ಸರ್ಕಾರಿ ಸ್ವಾಮ್ಯದ (I and B ಸಚಿವಾಲಯ) ಸಂಸ್ಥೆಯ ಮೂಲಕ ಈ ಕೆಲಸ ನಿರ್ವಹಿಸಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದಿದೆ.

ಅವರು ಮಾಡಬೇಕಾದ ಮಾನಿಟರಿಂಗ್ ಸೇವೆಗಳ ಕೆಲಸದ ವ್ಯಾಪ್ತಿ ಈ ಕೆಳಗಿನಂತಿರುತ್ತದೆ:

ಪತ್ತೆ ಹಚ್ಚುವಿಕೆ – ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳನ್ನು ವಿಶ್ಲೇಷಿಸುವುದು.

ನಿರ್ಧಾರ- ಸಮಸ್ಯಾತ್ಮಕವಾಗಿವೆ ಎಂಬ ಪೋಸ್ಟ್‌ಗಳನ್ನು ವಿಂಗಡಣೆ ಮಾಡುವುದು.

ಪಾವತಿಸಿದ ಮತ್ತು ಖಾಸಗಿ ಮಾಧ್ಯಮ ಡೇಟಾವನ್ನು ಒಳಗೊಂಡಂತೆ ಸಂಪೂರ್ಣ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ನಡೆಸುವ ಸಾಮರ್ಥ್ಯವನ್ನು ಅಭಿವೃದ್ದಿಪಡಿಸುವುದು.

ಸೋಷಿಯಲ್ ಮೀಡಿಯಾ ಟ್ರೆಂಡ್ಸ್ ಅನ್ನು ಮಾನಿಟರಿಂಗ್ ಮಾಡುವುದು.

ಸೋಷಿಯಲ್ ಮೀಡಿಯಾದ ಭಾವನೆಗಳನ್ನು ಮೇಲ್ವಿಚಾರಣೆ ಮಾಡುವುದು

ಸೋಶಿಯಲ್ ಮೀಡಿಯಾದ ಸೂಚಕಗಳ ಅನ್ವಯ ಮೇಲ್ವಿಚಾರಣೆ

ಸರ್ಕಾರಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಸಂಬಂಧಿಸಿದ ಟ್ರೆಂಡ್‌ಗಳ ಜಾಡು ಹಿಡಿಯುವುದು.

ಸಾಮಾಜಿಕ ಅಭಿಯಾನಗಳು / ಕಾರ್ಯಕ್ರಮಗಳ ಮೇಲ್ವಿಚಾರಣೆ

ಆಲಿಸುವ ಸಾಧನ ಅಭಿವೃದ್ದಿಪಡಿಸುವುದು.

ಕ್ರಿಯಾತ್ಮಕ ಡೇಟಾವನ್ನು ಗುರುತಿಸುವುದು, ಯಾರಿಂದ ಪ್ರಭಾವಿತರಾಗಿದ್ದಾರೆ ಎಂದು ತಿಳಿಯುವುದು ಇತ್ಯಾದಿ

ಆರಂಭಿಕ ಎಚ್ಚರಿಕೆ ನೀಡುವ ವ್ಯವಸ್ಥೆ

ವಿಶ್ಲೇಷಣಾತ್ಮಕ ವರದಿಗಳನ್ನು ರಚಿಸುವುದು

ಇಷ್ಟೆಲ್ಲಾ ಕೆಲಸಗಳನ್ನು ನಿರ್ವಹಿಸಲು, ಡಾಟಾ ಸಂಗ್ರಹಿಸಲು ಐಟಿ ಕಂಪನಿಗಳನ್ನು ಸರ್ಕಾರ ಆಹ್ವಾನಿಸಿದೆ. ಮೇಲಿನ ಇಷ್ಟು ಮಾಹಿತಿ ಸಿಕ್ಕ ನಂತರ ಯಾರು ಸರ್ಕಾರದ ಪರವಿದ್ದಾರೆ ಮತ್ತು ಯಾರು ವಿರುದ್ಧವಿದ್ದಾರೆ ಎಂದು ತಿಳಿದ ಸರ್ಕಾರ ಅವರ ಮೇಲೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಊಹಿಸಿ.

ಈಗಾಗಲೇ ಸರ್ಕಾರಗಳು ಹಲವು ರೀತಿಯಲ್ಲಿ ನಮ್ಮನ್ನು ಮೇಲ್ವಿಚಾರಣೆ ನಡೆಸುತ್ತಿದೆ. ಪ್ರತಿಯೊಬ್ಬ ಪ್ರಜೆಯ ಎಲ್ಲಾ ಮಾಹಿತಿಗಳನ್ನು ಅದು ಪಡೆದುಕೊಂಡಿದೆ. ಈಗ ನಾವು ಮಾಡುವ ಚಟುವಟಿಕೆಗಳನ್ನು ಮಾನಿಟರ್ ಮಾಡುವ ಮೂಲಕ ಸರ್ವೈಲೆನ್ಸ್ ಸ್ಟೇಟ್ ಕಡೆಗೆ ದಾಪುಗಾಲಿಡುತ್ತಿದೆ ಎಂದು ಹಲವು ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದ ಸಂದರ್ಭದ ಕಣ್ಗಾವಲು ಮತ್ತು ಪ್ರಭುತ್ವದ ಬೇಹುಗಾರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...