Homeಕರ್ನಾಟಕ‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. 

ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಇದೇ ವೇಳೆ ಹೆಚ್.ವೈ. ಮೇಟಿಯವರನ್ನು ನೆನೆದ ಮುಖ್ಯಮಂತ್ರಿಗಳು ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ, ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ ಎಂದರು.

ಮೆಡಿಕಲ್ ಕಾಲೇಜು ಸ್ಥಾಪಿಸಲು 2025ರ ಬಜೆಟ್ ನ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳನ್ನು ಮಾಡಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪನೆಯ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು..

ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ

ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಸಮಾನ ಆದ್ಯತೆ ನೀಡುತ್ತಿದ್ದೇವೆ ಎಂದರು. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದು ಕಿಡಿಕಾರಿದರು.

ಯುಕೆಪಿ ಹಂತ 3 ಭೂ-ಪರಿಹಾರ ಒಂದೇ ಬಾರಿಗೆ ಪಾವತಿ

ಬಿಜೆಪಿಯವರು ತಮ್ಮ ಅವಧಿಯಲ್ಲಿ ಯುಕೆಪಿ ಯೋಜನೆಗೆ ಪರಿಹಾರ ನೀಡಲು ಆಸಕ್ತಿ ವಹಿಸಲಿಲ್ಲ. ಆದ್ದರಿಂದ ರೈತರು ಭೂಮಿ ನೀಡಲು ಮುಂದೆ ಬರಲಿಲ್ಲ. ಈಗ ರೈತರಿಗೆ ಭೂ ಪರಿಹಾರವನ್ನು ಒಂದೇ ಬಾರಿಗೆ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಣಯಿಸಿದೆ. ಈ ಬಾರಿಯ ಬಜೆಟ್ ನಲ್ಲಿ ಯುಕೆಪಿ ಯೋಜನೆಯ 3 ಹಂತದಲ್ಲಿ ಭೂ-ಪರಿಹಾರಕ್ಕೆ ಹಣ ಮೀಸಲಿಡಲಾಗಿದ್ದು, ನಂತರವೂ ಹೆಚ್ಚಿನ ಅನುದಾನಕ್ಕೆ ವ್ಯವಸ್ಥೆಗೊಳಿಸಲಾಗುವುದು. ಸ್ವಯಂ ಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿ ಜಮೀನಿಗೆ 40 ಲಕ್ಷ ರೂ, ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ನೀಡಲು ಸರ್ಕಾರ ನಿರ್ಣಯಿಸಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ದೊರಕಿಲ್ಲ

ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ.ಗಳ ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರದಿಂದ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...