Homeಕರ್ನಾಟಕಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಅಂಗೀಕಾರ | ಮಸೂದೆ ಪ್ರತಿ ಹರಿದು ಸ್ಪೀಕರ್‌ಗೆ ಎಸೆದ...

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಅಂಗೀಕಾರ | ಮಸೂದೆ ಪ್ರತಿ ಹರಿದು ಸ್ಪೀಕರ್‌ಗೆ ಎಸೆದ ಬಿಜೆಪಿ ಸದಸ್ಯರು

- Advertisement -
- Advertisement -

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ಮಸೂದೆಯನ್ನು ರಾಜ್ಯ ವಿಧಾನಸಭೆ ಶುಕ್ರವಾರ ಅಂಗೀಕರಿಸಿತು. ಸಿದ್ದರಾಮಯ್ಯ ಸರ್ಕಾರದ ಈ ಮಸೂದೆಯ ವಿರುದ್ಧ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಭಾರಿ ಪ್ರತಿಭಟನೆ ನಡೆಸಿದ್ದು, ಮಸೂದೆಯ ಪ್ರತಿಯನ್ನು ಹರಿದು ಸ್ಪೀಕರ್ ಯು.ಟಿ. ಖಾದರ್ ಅವರ ಪೀಠಕ್ಕೆ ಬಿಸಾಕಿದ್ದಾರೆ. ಸರ್ಕಾರಿ ಗುತ್ತಿಗೆಗಳಲ್ಲಿ

ಮಸೂದೆಯನ್ನು “ಅಸಂವಿಧಾನಿಕ” ಎಂದು ಕರೆದಿರುವ ಬಿಜೆಪಿ, ಅದನ್ನು ಕಾನೂನುಬದ್ಧವಾಗಿ ಪ್ರಶ್ನಿಸುವುದಾಗಿ ಪ್ರತಿಜ್ಞೆ ಮಾಡಿದೆ. ಹನಿ ಟ್ರ್ಯಾಪ್ ಹಗರಣದ ಕುರಿತು ವಿಧಾನಸಭೆಯಲ್ಲಿನ ಗೊಂದಲದ ನಡುವೆ ಮಸೂದೆಯನ್ನು ಅಂಗೀಕರಿಸಲಾಯಿತು.

ಬಿಜೆಪಿ ನಾಯಕರು ಸದನದ ಬಾವಿಗೆ ನುಗ್ಗಿ ಆಡಳಿತಾರೂಢ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಅವರು ಸ್ಪೀಕರ್ ಆಸನವನ್ನು ಹತ್ತಿ ತಮ್ಮ ಪ್ರತಿಭಟನೆ ನಡೆಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ನಂತರ ಮಸೂದೆಯ ಪ್ರತಿಯನ್ನು ಹರಿದು ಸ್ಪೀಕರ್ ಮೇಲೆ ಎಸೆದಿರುವ ಘಟನೆ ನಡೆದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ

ಬಿಜೆಪಿ ಶಾಸಕ ಭರತ್ ಶೆಟ್ಟಿ ಮಾತನಾಡಿ, “ಹನಿ ಟ್ರ್ಯಾಪ್ ಹಗರಣದ ಬಗ್ಗೆ ಚರ್ಚಿಸುವ ಬದಲು, ಮುಖ್ಯಮಂತ್ರಿ ನಾಲ್ಕು ಶೇಕಡಾ ಮುಸ್ಲಿಂ ಮಸೂದೆಯನ್ನು ಮಂಡಿಸುವಲ್ಲಿ ನಿರತರಾಗಿದ್ದಾರೆ. ಆದ್ದರಿಂದ ನಾವು ಪ್ರತಿಭಟಿಸಿದೆವು. ಆಡಳಿತರೂಢ ಶಾಸಕರು ಕೂಡಾ ಪುಸ್ತಕಗಳನ್ನು ಮತ್ತು ಹರಿದ ಕಾಗದಗಳನ್ನು ಎಸೆದಿದ್ದಾರೆ; ನಾವು ಯಾರಿಗೂ ಹಾನಿ ಮಾಡಲಿಲ್ಲ.” ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಅವಕಾಶಗಳನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಮೀಸಲಾತಿಯನ್ನು ಸಮರ್ಥಿಸಿಕೊಂಡರೆ, ವಿರೋಧ ಪಕ್ಷ ಬಿಜೆಪಿಯು ಕಾಂಗ್ರೆಸ್ ಪಕ್ಷ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

ಮಸೂದೆಯ ನಿಬಂಧನೆಗಳ ಪ್ರಕಾರ, ಮುಸ್ಲಿಂ ಗುತ್ತಿಗೆದಾರರು ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ ನಾಲ್ಕು ಕೋಟಾವನ್ನು ಪಡೆಯುತ್ತಾರೆ. ಈ ಮಸೂದೆಯು ಮುಸ್ಲಿಂ ಸಮುದಾಯ ಕೂಡಾ ಸಾರ್ವಜನಿಕ ಗುತ್ತಿಗೆಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಸ್ಪರ್ಧಿಸಲು ಅನುವು ಮಾಡಿಕೊಡುತ್ತದೆ. ಈ ಕ್ರಮವು ಸಮಗ್ರ ಅಭಿವೃದ್ಧಿ ಮತ್ತು ಸಕಾರಾತ್ಮಕ ಕ್ರಮದ ಸರ್ಕಾರದ ಬದ್ಧತೆಗೆ ಹೊಂದಿಕೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಹನಿ ಟ್ರ್ಯಾಪಿಂಗ್ ಬಗ್ಗೆ ಬಹಿರಂಗಪಡಿಸಿದ ನಂತರ ಶುಕ್ರವಾರ ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ತೀವ್ರ ಗೊಂದಲ ಏರ್ಪಟ್ಟಿತ್ತು. ಹಗರಣವು ಇದೀಗ ಪ್ರಮುಖ ರಾಜಕೀಯ ಚರ್ಚೆಯಾಗಿ ಪರಿಣಮಿಸಿದ್ದು, ಬಿಜೆಪಿ ನಾಯಕರು ಸಿಡಿಗಳನ್ನು ಹಿಡಿದುಕೊಂಡು ಅವುಗಳನ್ನು ಬ್ಲ್ಯಾಕ್‌ಮೇಲ್ ಮತ್ತು ಬಲೆಗೆ ಬೀಳಿಸುವ ಸಾಧನಗಳೆಂದು ಸೂಚಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...