Homeಕರ್ನಾಟಕಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಅಂಗೀಕಾರ | ಮಸೂದೆ ಪ್ರತಿ ಹರಿದು ಸ್ಪೀಕರ್‌ಗೆ ಎಸೆದ...

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಅಂಗೀಕಾರ | ಮಸೂದೆ ಪ್ರತಿ ಹರಿದು ಸ್ಪೀಕರ್‌ಗೆ ಎಸೆದ ಬಿಜೆಪಿ ಸದಸ್ಯರು

- Advertisement -
- Advertisement -

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ಮಸೂದೆಯನ್ನು ರಾಜ್ಯ ವಿಧಾನಸಭೆ ಶುಕ್ರವಾರ ಅಂಗೀಕರಿಸಿತು. ಸಿದ್ದರಾಮಯ್ಯ ಸರ್ಕಾರದ ಈ ಮಸೂದೆಯ ವಿರುದ್ಧ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಭಾರಿ ಪ್ರತಿಭಟನೆ ನಡೆಸಿದ್ದು, ಮಸೂದೆಯ ಪ್ರತಿಯನ್ನು ಹರಿದು ಸ್ಪೀಕರ್ ಯು.ಟಿ. ಖಾದರ್ ಅವರ ಪೀಠಕ್ಕೆ ಬಿಸಾಕಿದ್ದಾರೆ. ಸರ್ಕಾರಿ ಗುತ್ತಿಗೆಗಳಲ್ಲಿ

ಮಸೂದೆಯನ್ನು “ಅಸಂವಿಧಾನಿಕ” ಎಂದು ಕರೆದಿರುವ ಬಿಜೆಪಿ, ಅದನ್ನು ಕಾನೂನುಬದ್ಧವಾಗಿ ಪ್ರಶ್ನಿಸುವುದಾಗಿ ಪ್ರತಿಜ್ಞೆ ಮಾಡಿದೆ. ಹನಿ ಟ್ರ್ಯಾಪ್ ಹಗರಣದ ಕುರಿತು ವಿಧಾನಸಭೆಯಲ್ಲಿನ ಗೊಂದಲದ ನಡುವೆ ಮಸೂದೆಯನ್ನು ಅಂಗೀಕರಿಸಲಾಯಿತು.

ಬಿಜೆಪಿ ನಾಯಕರು ಸದನದ ಬಾವಿಗೆ ನುಗ್ಗಿ ಆಡಳಿತಾರೂಢ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಅವರು ಸ್ಪೀಕರ್ ಆಸನವನ್ನು ಹತ್ತಿ ತಮ್ಮ ಪ್ರತಿಭಟನೆ ನಡೆಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ನಂತರ ಮಸೂದೆಯ ಪ್ರತಿಯನ್ನು ಹರಿದು ಸ್ಪೀಕರ್ ಮೇಲೆ ಎಸೆದಿರುವ ಘಟನೆ ನಡೆದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ

ಬಿಜೆಪಿ ಶಾಸಕ ಭರತ್ ಶೆಟ್ಟಿ ಮಾತನಾಡಿ, “ಹನಿ ಟ್ರ್ಯಾಪ್ ಹಗರಣದ ಬಗ್ಗೆ ಚರ್ಚಿಸುವ ಬದಲು, ಮುಖ್ಯಮಂತ್ರಿ ನಾಲ್ಕು ಶೇಕಡಾ ಮುಸ್ಲಿಂ ಮಸೂದೆಯನ್ನು ಮಂಡಿಸುವಲ್ಲಿ ನಿರತರಾಗಿದ್ದಾರೆ. ಆದ್ದರಿಂದ ನಾವು ಪ್ರತಿಭಟಿಸಿದೆವು. ಆಡಳಿತರೂಢ ಶಾಸಕರು ಕೂಡಾ ಪುಸ್ತಕಗಳನ್ನು ಮತ್ತು ಹರಿದ ಕಾಗದಗಳನ್ನು ಎಸೆದಿದ್ದಾರೆ; ನಾವು ಯಾರಿಗೂ ಹಾನಿ ಮಾಡಲಿಲ್ಲ.” ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಅವಕಾಶಗಳನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಮೀಸಲಾತಿಯನ್ನು ಸಮರ್ಥಿಸಿಕೊಂಡರೆ, ವಿರೋಧ ಪಕ್ಷ ಬಿಜೆಪಿಯು ಕಾಂಗ್ರೆಸ್ ಪಕ್ಷ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

ಮಸೂದೆಯ ನಿಬಂಧನೆಗಳ ಪ್ರಕಾರ, ಮುಸ್ಲಿಂ ಗುತ್ತಿಗೆದಾರರು ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ ನಾಲ್ಕು ಕೋಟಾವನ್ನು ಪಡೆಯುತ್ತಾರೆ. ಈ ಮಸೂದೆಯು ಮುಸ್ಲಿಂ ಸಮುದಾಯ ಕೂಡಾ ಸಾರ್ವಜನಿಕ ಗುತ್ತಿಗೆಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಸ್ಪರ್ಧಿಸಲು ಅನುವು ಮಾಡಿಕೊಡುತ್ತದೆ. ಈ ಕ್ರಮವು ಸಮಗ್ರ ಅಭಿವೃದ್ಧಿ ಮತ್ತು ಸಕಾರಾತ್ಮಕ ಕ್ರಮದ ಸರ್ಕಾರದ ಬದ್ಧತೆಗೆ ಹೊಂದಿಕೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಹನಿ ಟ್ರ್ಯಾಪಿಂಗ್ ಬಗ್ಗೆ ಬಹಿರಂಗಪಡಿಸಿದ ನಂತರ ಶುಕ್ರವಾರ ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ತೀವ್ರ ಗೊಂದಲ ಏರ್ಪಟ್ಟಿತ್ತು. ಹಗರಣವು ಇದೀಗ ಪ್ರಮುಖ ರಾಜಕೀಯ ಚರ್ಚೆಯಾಗಿ ಪರಿಣಮಿಸಿದ್ದು, ಬಿಜೆಪಿ ನಾಯಕರು ಸಿಡಿಗಳನ್ನು ಹಿಡಿದುಕೊಂಡು ಅವುಗಳನ್ನು ಬ್ಲ್ಯಾಕ್‌ಮೇಲ್ ಮತ್ತು ಬಲೆಗೆ ಬೀಳಿಸುವ ಸಾಧನಗಳೆಂದು ಸೂಚಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...