Homeಮುಖಪುಟನಮ್ಮದೆ ಸರ್ಕಾರದ ಟೀಕೆ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ

ನಮ್ಮದೆ ಸರ್ಕಾರದ ಟೀಕೆ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ

- Advertisement -
- Advertisement -

ನಮ್ಮದೆ ಸರ್ಕಾರವನ್ನು ಟೀಕಿಸುವುದು ಯಾವುದೇ ಮುಕ್ತ ಮತ್ತು ಕಾರ್ಯನಿರ್ವಹಿಸುವ ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಭಾರತ ಪಾಕಿಸ್ತಾನ ಸಂಘರ್ಷದ ನಡುವೆ ನೆರೆಯ ದೇಶದ ಸೇನಾ ಅಧಿಕಾರಿಯ ಹೇಳಿಕೆಗಳನ್ನು ಟೀಕಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ. ನಮ್ಮದೆ ಸರ್ಕಾರದ ಟೀಕೆ

“ಭಾರತದ ಜನರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಪಾಕಿಸ್ತಾನ ಸೇನಾ ವಕ್ತಾರರು ಬಹಳ ಖುಷಿ ಪಡುತ್ತಿದ್ದಾರೆ. ನಾಗರಿಕರು ತಮ್ಮದೇ ಸರ್ಕಾರವನ್ನು ಟೀಕಿಸುವುದನ್ನು ನೋಡುವಾಗ ಪಾಕಿಸ್ತಾನಕ್ಕೆ ಆಶ್ಚರ್ಯವಾಗಬಹುದು. ಆದರೆ ಅದು ಯಾವುದೇ ಮುಕ್ತ ಮತ್ತು ಕಾರ್ಯನಿರ್ವಹಿಸುವ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದೆ. ಅದರ ಬಗ್ಗೆ ಪಾಕಿಸ್ತಾನದ ಪರಿಚಯವಿಲ್ಲದಿರುವುದು ಆಶ್ಚರ್ಯಕರವಲ್ಲ” ಮಿಶ್ರಿ ಶನಿವಾರ ನಡೆದ ಸರ್ಕಾರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಇಸ್ಲಾಮಾಬಾದ್‌ನಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಭಾರತ ಸರ್ಕಾರದ ಕ್ರಮಗಳನ್ನು ಟೀಕಿಸಿದ ಹಲವಾರು ಭಾರತೀಯರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಮಿಸ್ರಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡ ಪಾಕ್: ಮಿಸ್ರಿ

ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ನಾಗರಿಕರು ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನ ನಡೆಸುತ್ತಿರುವ ದಾಳಿಯಗಳನ್ನು ಮಿಶ್ರಿ ಖಂಡಿಸಿದ್ದಾರೆ. ಭಾರತದಲ್ಲಿ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯವನ್ನು ಬಿತ್ತಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಮಿಶ್ರಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ನಾಗರಿಕ ಮೂಲಸೌಕರ್ಯ ಮತ್ತು ಜನರನ್ನು ಪಾಕಿಸ್ತಾನ ಗುರಿಯಾಗಿಸಿಕೊಂಡಿದೆ” ಎಂದು ಮಿಶ್ರಿ ಹೇಳಿದ್ದಾರೆ

ಮಾರಣಾಂತಿಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಜಮ್ಮು ನಗರಗಳಲ್ಲಿ ಬೆಳಿಗ್ಗೆ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ. ಮಧ್ಯಾಹ್ನದ ಸುಮಾರಿಗೆ ಶ್ರೀನಗರದಲ್ಲಿ ಮತ್ತೆ ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ಅದು ಹೇಳಿದೆ.

“ಇಂದು ಬೆಳಿಗ್ಗೆ, ಪಾಕಿಸ್ತಾನವು ರಾಜೌರಿ ಪಟ್ಟಣದ ಮೇಲೆ ಶೆಲ್ ದಾಳಿ ನಡೆಸಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪಾ ಅವರು ಮೃತಪಟ್ಟಿದ್ದಾರೆ. ಅಲ್ಲಿ ನಾಗರಿಕ ಸಾವುನೋವುಗಳು ಮತ್ತು ಹಾನಿಯನ್ನು ಹೆಚ್ಚಿಸಿದೆ” ಎಂದು ಮಿಸ್ರಿ ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಭಾರತ ನಾಶಪಡಿಸಿದ ಒಂದು ದಿನದ ನಂತರ ಶುಕ್ರವಾರ ಮತ್ತು ಶನಿವಾರ ಭಾರತ ಡ್ರೋನ್ ದಾಳಿ ಮತ್ತು ಪ್ರತಿದಾಳಿ ನಡೆಸಿದೆ. ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಎರಡು ವಾರಗಳ ನಂತರ ಭಾರತವು ಆಪರೇಷನ್ ಸಿಂಧೂರ್ ಎಂಬ ದಾಳಿ ನಡೆಸಿತ್ತು. ನಮ್ಮದೆ ಸರ್ಕಾರದ ಟೀಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ | ವೈದ್ಯರ ರಜೆ ರದ್ದುಗೊಳಿಸಿದ ಜಾರ್ಖಂಡ್ ಸರ್ಕಾರ

ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ | ವೈದ್ಯರ ರಜೆ ರದ್ದುಗೊಳಿಸಿದ ಜಾರ್ಖಂಡ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....