Homeಮುಖಪುಟಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

- Advertisement -
- Advertisement -

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಪಠ್ಯಪುಸ್ತಕಗಳನ್ನು ಮನಸೋಇಚ್ಛೆ ಬದಲಾವಣೆ ಮಾಡಲಾಗಿದೆ ಎಂಬ ಕೂಗು ಕೇಳಿಬರುತ್ತಿರುವ ಹೊತ್ತಿನಲ್ಲೇ ಮತ್ತೊಂದು ಯಡವಟ್ಟನ್ನು ಸರ್ಕಾರ ಮಾಡಿದೆ. ದ್ವಿತೀಯ ಪಿಯು ಪಠ್ಯ ಪರಿಶೀಲನೆಗೆ ಮುಂದಾಗಿದ್ದು, ಮತ್ತದೇ ವಿವಾದಿತ ವ್ಯಕ್ತಿ, ಶಿಕ್ಷಣ ತಜ್ಞನಲ್ಲದ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಗೆ ಜವಾಬ್ದಾರಿ ವಹಿಸಲಾಗಿದೆ.

ಈ ಕುರಿತು ‘ದಿ ಫೈಲ್‌.ಇನ್‌’ನ ಜಿ.ಮಹಾಂತೇಶ್ ಅವರು ಬರೆದಿರುವ ವಿಶೇಷ ವರದಿಯನ್ನು ‘ವಾರ್ತಾಭಾರತಿ’ ಪ್ರಕಟಿಸಿದ್ದು, ನೂತನ ಪಠ್ಯಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ ಸರ್ಕಾರ ತನ್ನ ಧೋರಣೆಯನ್ನು ಮುಂದುವರಿಸಿರುವುದು ಸ್ಪಷ್ಟವಾಗುತ್ತಿದೆ.

ಕರ್ನಾಟಕದ ವಿಶೇಷ ಉಲ್ಲೇಖ ಹೊಂದಿರುವ ಭಾರತದ ಇತಿಹಾಸ ಪಠ್ಯಪುಸ್ತಕವನ್ನು ಪರಿಶೀಲಿಸಲು ಚಾಲನೆ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ ಅಧ್ಯಾಯ 4.2ರಲ್ಲಿ ಹೊಸಧರ್ಮಗಳ ಉದಯ ಪಠ್ಯಭಾಗವನ್ನು ಪರಿಶೀಲಿಸಿ ಸೂಕ್ತವಾಗಿ ಪರಿಷ್ಕರಿಸುವ ಹೊಣೆಗಾರಿಕೆಯನ್ನು ರೋಹಿತ್‌ ಚಕ್ರತೀರ್ಥ ಸಮಿತಿಗೆ ವಹಿಸಬೇಕು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು 2020ರ ಫೆ.17ರಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆಂಬ ಸಂಗತಿ ವರದಿಯಿಂದ ಬಯಲಾಗಿದೆ.

ನಿರ್ದಿಷ್ಟ ಸಮುದಾಯಗಳ ಭಾವನೆಗೆ ಧಕ್ಕೆ ಉಂಟಾಗಿದೆ ಎಂಬ ಕಾರಣವನ್ನೇ ಇಲ್ಲಿಯೂ ನೀಡಲಾಗಿದ್ದು, ಪಿಯು ಮಂಡಳಿಯ ನಿರ್ದೇಶಕರು ಇತಿಹಾಸ ಪಠ್ಯ ರಚನಾ ಸಮಿತಿಗೆ ಮಾಹಿತಿ ಸಲ್ಲಿಸಿ ಅಭಿಪ್ರಾಯ ಕೋರಿದ್ದರು. ಸಮಿತಿಯು ಪ್ರತಿಕ್ರಿಯೆ ನೀಡಿ, ಯಾವುದೇ ವಿವಾದಾತ್ಮಕ ವಿಷಯಗಳನ್ನು ಪಠ್ಯ ಒಳಗೊಂಡಿಲ್ಲ, ಪರಿಶೀಲನೆಗೆ ಅಭ್ಯಂತರವಿಲ್ಲ ಎಂದಿತ್ತು. ಇದನ್ನು ಮಂಡಳಿಯು ಸಚಿವರ ಆಪ್ತ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿದೆ.

ಇದನ್ನೂ ಓದಿರಿ: RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ: ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿ ಟ್ವಿಟರ್ ಟ್ರೆಂಡಿಂಗ್

ಇತಿಹಾಸ ಪಠ್ಯದಲ್ಲಿ ಹೇಳಿದ್ದೇನು?

ವೈದಿಕ ಧರ್ಮದಲ್ಲಿನ ಗೊಂದಲ, ಪುರೋಹಿತ ವರ್ಗದ ಪರಮಾಧಿಕಾರ, ಪ್ರಾಣಿಬಲಿ, ಮಂತ್ರಗಳ ಪಠಣ, ಜಾತಿಪದ್ಧತಿಯಿಂದ ಜರ್ಜರಿತವಾದ ಸಮಾಜದಲ್ಲಿ ಹೊಸಧರ್ಮಗಳು ಹುಟ್ಟಿದ್ದನ್ನು ಇತಿಹಾಸ ಪಠ್ಯದಲ್ಲಿ ಸೇರಿಸಲಾಗಿತ್ತು. ಇದರಿಂದ ಒಂದು ಸಮುದಾಯದ ಭಾವನೆಗೆ ಧಕ್ಕೆ ಎಂದು ಬಿಂಬಿಸಲಾಗಿದೆ.

“ಆರಂಭದಲ್ಲಿ ವೈದಿಕ ಧರ್ಮ ಯಾವುದೇ ಜಟಿಲತೆಗಳಿಲ್ಲದೆ ಸರಳವಾಗಿತ್ತು. ನಂತರ ಪುರೋಹಿತರ ಪ್ರಭಾವದಿಂದಾಗಿ ಬಹಳಷ್ಟು ಕಠೋರತೆಗಳು ಧರ್ಮದೊಳಗೆ ನುಸುಳಿದವು. ಜನರು ಅಸಂತುಷ್ಠರಾದರು. ಬದಲಾವಣೆಯನ್ನು ಬಯಸಿದ್ದ ಅವರು ಅದನ್ನು ಹೊಸಧರ್ಮಗಳಲ್ಲಿ ಕಂಡುಕೊಂಡರು. ಬ್ರಾಹ್ಮಣರು ಇತರ ಜಾತಿಗಳ ಮೇಲೆ ಪರಮಾಧಿಕಾರ ಸ್ಥಾಪಿಸಿಕೊಂಡರು. ಜನರಿಗೆ ಪುರೋಹಿತರಿಲ್ಲದೆ ಯಜ್ಞಗಳನ್ನು ಮಾಡುವುದು ಅಸಾಧ್ಯವಾಗಿತ್ತು. ಬ್ರಾಹ್ಮಣರು ಅನೇಕ ವಿಶೇಷ ಸವಲತ್ತುಗಳನ್ನು ಅನುಭವಿಸುತ್ತಿದ್ದರು ಮತ್ತು ತಮ್ಮನ್ನು ಶೇಷ್ಠರೆಂದು ತಿಳಿದಿದ್ದರು.”

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಹಾವೀರ, ಗೌತಮ ಬೌದ್ಧನಂತಹ ಮಹಾನಿಯರು ಜನಿಸಿ, ಜನರ ಮೇಲೆ ಪ್ರಭಾವ ಬೀರಿದ್ದನ್ನು ಪಾಠ ಒಳಗೊಂಡಿದೆ. ಇದನ್ನು ಕಿತ್ತುಹಾಕುವ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ.

ಹೊಸಧರ್ಮಗಳ ಉದಯದ ನೆಪದಲ್ಲಿ… 

ಪ್ರಾಥಮಿಕ ಶಾಲಾ ಪಠ್ಯದಲ್ಲಿನ ಹೊಸಧರ್ಮಗಳ ಉದಯ ಪಾಠದಲ್ಲಿ ಒಂದು ಸಮುದಾಯದ ಭಾವನೆಗೆ ಧಕ್ಕೆ ಬರುವಂತಹ ವಿಷಯಗಳಿವೆ ಎಂದು ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ರಚಿಸಿತ್ತು. ಬಲಪಂಥೀಯ ಬರಹಗಾರ ರೋಹಿತ್ ಚಕ್ರತೀರ್ಥ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಯಿತು. ಹೊಸಧರ್ಮಗಳ ಉದಯ ಪಠ್ಯದ ನೆಪದಲ್ಲಿ ಬಂದ ಸಮಿತಿ ಒಂದರಿಂದ ಹತ್ತನೇ ತರಗತಿಯವರೆಗಿನ ಪಠ್ಯಗಳನ್ನು ಪರಿಶೀಲಿಸಿ ಹಲವಾರು ಬದಲಾವಣೆಗಳನ್ನು ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

“ಬ್ರಾಹ್ಮಣ ಜಾತಿಯ ಲೇಖಕರಿಗೆ ಹೆಚ್ಚಿನ ಅವಕಾಶವನ್ನು ನೀಡಲಾಗಿದೆ. ಹಲವಾರು ಲೇಖಕರ ಪಠ್ಯಗಳನ್ನು ಕೈ ಬಿಟ್ಟು ಸಂಘಪರಿವಾರದ ಹಿನ್ನೆಲೆಯ ಪಾಠಗಳನ್ನು ಸೇರಿಸಲಾಗಿದೆ. ಸುಳ್ಳು ಭಾಷಣಗಳಿಂದಲೇ ಟೀಕೆಗೆ ಒಳಗಾಗಿರುವ ಚಕ್ರವರ್ತಿ ಸೂಲಿಬೆಲೆ ಅವರ ಪಾಠವೊಂದನ್ನು ಹತ್ತನೇ ತರಗತಿಯ ಪಠ್ಯದಲ್ಲಿ ಸೇರಿಸಲಾಗಿದೆ. ಆರ್‌ಎಸ್‌ಎಸ್ ಸಂಸ್ಥಾಪಕ, ತ್ರಿವರ್ಣಧ್ವಜಕ್ಕೆ ಅಗೌರವ ಸೂಚಿಸಿದ್ದ ಕೇಶವ ಬಲಿರಾಮ ಹೆಡಗೇವಾರ್‌ ಭಾಷಣದ ಮೂಲ ಉದ್ದೇಶವನ್ನು ತಿರುಚಿ ಪಠ್ಯಕ್ಕೆ ಅಳವಡಿಸಲಾಗಿದೆ. ಆ ಮೂಲಕ ಆರ್‌ಎಸ್‌ಎಸ್‌ ಮಕ್ಕಳಿಗೆ ಆರ್‌ಎಸ್‌ಎಸ್‌ ಕುರಿತು ಪರಿಚಯಿಸಲಾಗುತ್ತಿದೆ” ಎಂಬ ಆರೋಪಗಳು ವ್ಯಕ್ತವಾಗಿವೆ.

ಇದನ್ನೂ ಓದಿರಿ: ಪಠ್ಯ ಸೇರುತ್ತಿರುವ ಹೆಡಗೇವಾರ್ ಯಾರು? ಅವರ ಸಿದ್ದಾಂತವೇನು?

ಇತಿಹಾಸ ಪಠ್ಯದಲ್ಲಿ ‘ಯಜ್ಞ’ದ ಕುರಿತು ಇರುವ ವಿವರಣೆಗಳಿಗೆ ವಿರುದ್ಧವಾಗಿ ಯಜ್ಞವನ್ನು ಸಮರ್ಥಿಸುವಂತೆ ಬರೆದಿರುವ ಶವತಾಧಾನಿ ಆರ್‌.ಗಣೇಶ್‌ ಪಾಠವನ್ನು ಪಠ್ಯದಲ್ಲಿ ಅಳವಡಿಸಲಾಗಿದೆ. ಸಮಾಜ ಸುಧಾರಕರಾದ ನಾರಾಯಣಗುರು, ಪೆರಿಯಾರ್‌ ಪಾಠಗಳಿಗೆ ವಿಶೇಷ ಪ್ರಾತಿನಿಧ್ಯವನ್ನು ನೀಡಲಾಗಿಲ್ಲ. ಹೀಗೆ ಹಲವಾರು ಲೋಪಗಳನ್ನು ಎಸಗಲಾಗಿದೆ ಎಂಬ ಆರೋಪಗಳು ಬಂದಿವೆ. ಮುಖ್ಯವಾಗಿ ರೋಹಿತ್‌ ಚಕ್ರತೀರ್ಥ ಅವರು ಯಾವುದೇ ರೀತಿಯಲ್ಲೂ ಶಿಕ್ಷಣ ತಜ್ಞರಲ್ಲ ಎಂಬುದು ಚರ್ಚೆಯಾಗುತ್ತಿದೆ.

ಟ್ಟಿಟರ್‌ ಟ್ರೆಂಡ್‌

#RejectRSSTextBooks #RejectBrahminTextBooks ಹ್ಯಾಷ್‌ಟ್ಯಾಗ್‌ನಲ್ಲಿ ಭಾನುವಾರ ಸಾವಿರಾರು ಟ್ವೀಟ್‌ಗಳನ್ನು ಮಾಡಲಾಗಿದ್ದು ಭಾರತದ ಮಟ್ಟದಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿ ಟ್ರೆಂಡ್ ಸೃಷ್ಟಿಯಾಗಿತ್ತು. ಬೆಂಗಳೂರಿನಲ್ಲಿ ಮೊದಲ ಟ್ರೆಂಡ್ ಆಗಿ ಹೊಮ್ಮಿತ್ತು. ನೂತನ ಪಠ್ಯಪುಸ್ತಕ ಸಮಿತಿಯನ್ನು ರದ್ದು ಮಾಡಬೇಕು ಹಾಗೂ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಗಿದೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಸರ್ಕಾರ ತನ್ನ ಧೋರಣೆಯನ್ನು ಮುಂದುವರಿಸಿರುವುದು ಅನುಮಾನಗಳಿಗೆ ಆಸ್ಪದ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...