Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...