Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...