Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...