Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...