Homeಕರ್ನಾಟಕಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಮುಷ್ಕರ ವಾಪಸ್‌ ಪಡೆದ ಸರ್ಕಾರಿ ನೌಕರರ ಸಂಘ; ಎನ್‌‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ಎನ್‌ಪಿಎಸ್‌ ನೌಕರರ ಸಂಘ ಕಟುವಾಗಿ ವಿರೋಧಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್‌ ಷಡಾಕ್ಷರಿ ತಿಳಿಸಿದ್ದಾರೆ. ಆದರೆ ಈ ನಿರ್ಧಾರದಿಂದ ನೌಕರರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿರುವ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಷಡಾಕ್ಷರಿ, “ನಾವು ಶೇ.40ರಷ್ಟು ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಆದರೆ, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.17ರಷ್ಟು ಹೆಚ್ಚಳ ಮಾಡಿರುವುದರಿಂದ ಮುಷ್ಕರವನ್ನು ಕೈಬಿಡಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದ್ದಾರೆ.

“ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ರದ್ಧತಿ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ನಿಯಮ ಅನುಸರಿಸಲಾಗಿದೆ, ಅದರ ಆರ್ಥಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಮಿತಿಯೊಂದನ್ನು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದು, ಎರಡು ತಿಂಗಳು ಗುಡುವು ನೀಡಲಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಭರವಸೆಗೆ ಒಪ್ಪಿದ್ದೇವೆ ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದಲೂ ಮುಷ್ಕರ ಕೈಬಿಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ನಿಲುವಿಗೆ ಎನ್‌ಪಿಎಸ್‌ ಹೋರಾಟಗಾರರ ವಿರೋಧ

ಸರ್ಕಾರಿ ನೌಕರರ ಸಂಘದ ನಿಲುವನ್ನು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್‌ ಟೀಕಿಸಿದ್ದಾರೆ. “ಇದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು ಮತ್ತು ಎನ್‌ಪಿಎಸ್‌ ನೌಕರರಿಗೆ ಮಾಡಿರುವ ನಂಬಿಕೆ ದ್ರೋಹ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನಿಷ್ಟ ಒಂದು ಬೇಡಿಕೆಯಾದರೂ ಖಡಾಖಂಡಿತವಾಗಿ ಈಡೇರಿಸಿಕೊಳ್ಳುವ ಮಟ್ಟಿಗೆ ಪಟ್ಟು ಹಿಡಿಯುತ್ತಾರೆ ಎಂದು ಭಾವಿಸಲಾಗಿದ್ದ ನೌಕರರಿಗೆ ಅನ್ಯಾಯ ಮಾಡಿದ್ದಾರೆ. ಶೇ.17ವೇತನ ಹೆಚ್ಚಳ ಮಾಡಿರುವುದನ್ನು ಒಪ್ಪಲಾಗುವುದಿಲ್ಲ. ಕನಿಷ್ಟ ಶೇ.30 ಆದರೂ ವೇತನವನ್ನು ಹೆಚ್ಚಿಸಬೇಕಿತ್ತು” ಎಂದಿದ್ದಾರೆ.

“ಎನ್‌ಪಿಎಸ್‌ ರದ್ದುಪಡಿಸುವ ಕುರಿತು ಸಮಿತಿ ರಚಿಸಿದ್ದೇವೆ ಎಂದಿದ್ದಾರೆ. ಆದರೆ, ಸರ್ಕಾರವೇ ರಚಿಸಿದ ಸಮಿತಿಗಳು ಹೇಗೆ ನೆಲ ಕಚ್ಚುತ್ತವೆ ಎಂಬುದನ್ನು ಈ ಹಿಂದೆ ನೋಡಿದ್ದೇವೆ. ಹಾಗಾಗಿ ಎನ್‌ಪಿಎಸ್‌ ನೌಕರರ ಸಂಘದ ಹೋರಾಟದ ಧ್ವನಿ ದೊಡ್ಡದಾಗಲಿದೆ, ನಮ್ಮ ತೀರ್ಮಾನದಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಸರ್ಕಾರ ಎನ್‌ಪಿಎಸ್‌ ನೌಕರರು ನೀಡಿದ್ದ ʼವೋಟ್‌ ಫಾರ್‌ ಒಪಿಎಸ್‌ʼ ಅವಕಾಶವನ್ನು ಕಳೆದುಕೊಂಡಿದೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಹೆಚ್ಚಳದ ನೆಪದಲ್ಲಿ ತೆರಿಗೆ ಭಾರ

’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “17% ಹೆಚ್ಚಿಸುವ ನಿರ್ಧಾರ ನೌಕರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. 1.04.2022ರಿಂದಲೇ 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ನಾವು ಶೇ. 40ರಷ್ಟು ಹೆಚ್ಚಳವನ್ನು ಮಾಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಈ 17%ರಷ್ಟು ಹೆಚ್ಚಳ ಮಾಡಿ ತೆರಿಗೆ ಭಾರ ಹೊರಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ತೆರಿಗೆಗೆ ಒಳಪಡದ ನೌಕರರು ಮುಂದಿನ ವರ್ಷದಿಂದ ತೆರಿಗೆ ವ್ಯಾಪ್ತಿಗೆ ಬರುತ್ತಾರೆ. ಉದಾಹರಣೆಗೆ ಸುಮಾರು 35 ಸಾವಿರ ರೂ. ಸಂಬಳ ತೆಗೆದುಕೊಳ್ಳುತ್ತಿರುವವರಿಗೆ ಆರು ಸಾವಿರ ರೂ. ಹೆಚ್ಚಾಗುತ್ತದೆ ಎಂದು ಭಾವಿಸೋಣ. ಹೀಗಾದಾಗ ಶೇ. 13ರಿಂದ 14 ಸಾವಿರ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

“ಎನ್‌ಪಿಎಸ್‌ ವಿಚಾರವಾಗಿ ಕಮಿಟಿ ಮಾಡುವುದಾಗಿ ಹೇಳುತ್ತಿದ್ದಾರೆ. 2018ರಲ್ಲಿ ಮಾಡಿದ ಕಮಿಟಿ ಏನನ್ನೂ ತೀರ್ಮಾನ ಮಾಡಿಲ್ಲ. ಮತ್ತೆ ಕಮಿಟಿ ಮಾಡುವ ಪ್ರಸ್ತಾಪ ಬಂದಿದೆ. ಅಂದರೆ ನೌಕರರ ಪರವಾದ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟ” ಎಂದರು.

“ಜವಾಬ್ದಾರಿಯುತವಾದ ಸರ್ಕಾರ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡಬಾರದು. ಸರ್ಕಾರದ ನಿರ್ಧಾರಕ್ಕೆ ಸರ್ಕಾರಿ ನೌಕರರ ಸಂಘ ಬದ್ಧವಾಗಿರುವಂತೆ ಕಾಣುತ್ತಿದೆ. ಹೀಗಾಗಿ ಹೋರಾಟವನ್ನು ವಾಪಸ್‌ ಪಡೆದಿದ್ದಾರೆ. ಷಡಾಕ್ಷರಿಯವರು ನಾಟಕ ಮಾಡಿದ್ದಾರೆಂದೇ ನಾವು ಭಾವಿಸುತ್ತೇವೆ” ಎಂದು ಹೇಳಿದರು.

“ನಾವು ಗಲಾಟೆ ಮಾಡಿದಂತೆ ವರ್ತಿಸುತ್ತೇವೆ, ನೀವು ಪರಿಹಾರ ನೀಡಿದಂತೆ ವರ್ತಿಸಿ ಎಂಬಂತಿದೆ ಈ ಪ್ರಹಸನ. ನೀವು ಕೊಟ್ಟಂತೆ ಮಾಡಿ, ನಾವು ಇಸ್ಕೊಂಡಂತೆ ಮಾಡುತ್ತೇವೆ ಎಂಬಂತೆ ಸರ್ಕಾರಿ ನೌಕರರ ಸಂಘ ವರ್ತಿಸಿದೆ. ಆರು ಸಾವಿರ ಹೆಚ್ಚಿಸಿ ಎರಡು ಪಟ್ಟು ತೆರಿಗೆ ವಸೂಲಿ ಮಾಡುವುದರಲ್ಲಿ ಅರ್ಥವಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...